Vani Vilasa Sagara Dam: ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಹೆಚ್ಚಳ-ಅಂಕಿಅಂಶಗಳು ಇಲ್ಲಿವೆ
Vani Vilasa Sagara Dam: ಮಧ್ಯ ಕರ್ನಾಟಕದ ಬಯಲು ಸೀಮೆಯ ಏಕೈಕ ರೈತರ ಜೀವನಾಡಿ ಆಗಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭಾರೀ ಮಳೆಯಿಂದ ಇತ್ತೀಚಿಗಷ್ಟೇ 1.79 ಅಡಿ ನೀರು ಹರಿದುಬಂದಿದೆ. ಹಾಗಾದರೆ ಇದೀಗ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಾಹಿತಿಯ ಪ್ರಕಾರ, ವಾಣಿ ವಿಲಾಸ ಸಾಗರ ಜಲಾಶಯಕ್ಕೆ 2,195 ಕ್ಯೂಸೆಕ್ ಒಳಹರಿವು ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 115.20 ಅಡಿ ಇದೆ. ಜುಲೈ 29ರಂದು 113.50 (16.07 ಟಿಎಂಸಿ) ರಿಂದ 8/08/2024ಕ್ಕೆ ಅಂದರೆ ಇಂದಿಗೆ 115.20 ಅಡಿ (17.14ಟಿಎಂಸಿ) ನೀರು ಸಂಗ್ರಹವಾಗಿದೆ.

ಜಲಾಶಯಕ್ಕೆ ಒಳಹರಿವು ಇದೀಗ ಆರಂಭ ಆಗಿದ್ದು, ಇಂದಿನ ದಿನದವರೆಗೂ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೆ ಜೊತೆಗೆ ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರ ಡ್ಯಾಂಗೆ ಪ್ರತಿದಿನ 700 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದರಿಂದ ನೀರಿನ ಮಟ್ಟ ಹೆಚ್ಚಳ ಆಗುತ್ತಿದೆ.
ದಿನಾಂಕ 29/07/2024ರಂದು 974 ಕ್ಯೂಸೆಕ್ ಒಳಹರಿವು, 30/07/2024ರಂದು 4737 ಕ್ಯೂಸೆಕ್, 31/07/2024ರಂದು 1,301, 1/08/2024ರಂದು 693, 2/08/2024ರಂದು 728, 3/08/2024ರಂದು 808, ಜುಲೈ 4, 5, 6ರಂದು 346, 7/08/2024ರಂದು 1,039, 8/08/2024ರಂದು 2,195 ಕ್ಯೂಸೆಕ್ ಒಳಹರಿವು ನೀರು ಸಂಗ್ರಹವಾಗಿದೆ.
2,000ನೇ ಇಸವಿಯಲ್ಲಿ 122.50 ಅಡಿ ತುಂಬುವ ಮೂಲಕ ಡ್ಯಾಂ ದಾಖಲೆ ಬರೆದಿತ್ತು. ಬಳಿಕ 2021ರ ನವೆಂಬರ್ನಲ್ಲಿ 122.75 ಅಡಿಗೆ ಡ್ಯಾಂ ನೀರಿನ ಮಟ್ಟ ತಲುಪುವ ಮೂಲಕ ಮತ್ತೊಮ್ಮೆ ಹೊಸ ದಾಖಲೆ ನಿರ್ಮಿಸಿತ್ತು. 1958ರಲ್ಲಿ ಡ್ಯಾಂ ನೀರಿನ ಮಟ್ಟ 124.25 ಅಡಿ ದಾಟಿತ್ತು. 1935ರಲ್ಲಿ 135.25 ಅಡಿ ನೀರು ಹರಿದು ಬಂದಿದ್ದರಿಂದ ಮೊದಲ ಬಾರಿಗೆ ಜಲಾಶಯದಲ್ಲಿ ಕೋಡಿ ಬಿದ್ದು ನೀರು ಹರಿದಿತ್ತು.
ಬಳಿಕ 1934ರಲ್ಲಿ 130.24 ಅಡಿ ನೀರು ಸಂಗ್ರಹವಾಗಿತ್ತು. 1957ರಲ್ಲಿ 125.05 ಅಡಿ ಮಾತ್ರ ನೀರು ಸಂಗ್ರಹ ಆಗಿತ್ತು. 2000ರಲ್ಲಿ 122.50 ಅಡಿಗೆ ಮಾತ್ರ ನೀರಿನ ಮಟ್ಟ ತಲುಪಿತ್ತು. ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾಗಿ ನೀರು ಜಲಾಶಯಕ್ಕೆ ಹರಿದು ಬಂದರೆ, 2022ರ ಬಳಿಕ ಮತ್ತೆ ಡ್ಯಾಂ ದಾಖಲೆ ಬರೆದಿತ್ತು.
ಹೊಸದುರ್ಗ, ಹಿರಿಯೂರು, ಚಿತ್ರದುರ್ಗ ಭಾಗದಲ್ಲಿ 800ರಿಂದ 1,000 ಅಡಿ ಬೋರ್ವೆಲ್ ಕೊರೆಸಿದರೂ ನೀರು ಸಿಗುತ್ತಿರಲಿಲ್ಲ. ಆದರೆ ವಾಣಿ ವಿಲಾಸ ಜಲಾಶಯದಲ್ಲಿ ನೀರು ಸಂಗ್ರಹ ಆಗುತ್ತಿದ್ದಂತೆ ಡ್ಯಾಂ ಸುತ್ತ ಮುತ್ತಲಿನ ಜಮೀನು ಪ್ರದೇಶಗಳಲ್ಲಿ, ಕೊಳವೆ ಬಾವಿಗಳಲ್ಲಿ ನೀರು ಉಕ್ಕಿ ಬರುತ್ತಿವೆ. ಹೊಸದುರ್ಗ, ಹಿರಿಯೂರು ತಾಲೂಕಿನ ಕೆಲ ಭಾಗಗಳಲ್ಲಿ ಕೇವಲ 50ರಿಂದ 200 ಅಡಿಗೆ ನೀರು ಸಿಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ, ಚಟುವಟಿಕೆಗಳು ಸಂಭ್ರಮದಿಂದ ಗರಿಗೆದರಿದ್ದು, ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications