Vani Vilasa Sagara: ಮೇ 10ರಿಂದ ಡ್ಯಾಂ ಅಚ್ಚುಕಟ್ಟು ಪ್ರದೇಶಕ್ಕೆ 2ನೇ ಹಂತದ ನೀರು ಬಿಡುಗಡೆ-ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ?
Vani Vilasa Sagara: ಬರಗಾಲ ಹಿನ್ನೆಲೆ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ವಿವಿ ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಇದೇ ಮೇ 10 ರಿಂದ 25 ದಿನಗಳ ಕಾಲ ವಾಣಿ ವಿಲಾಸ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಬೇಸಿಗೆ ಹಂಗಾಮಿಗೆ ಎರಡನೇ ಹಂತದ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಯಿತು. ಹಾಗಾದರೆ ಇದೀಗ ಡ್ಯಾಂನಲ್ಲಿ ನೀರಿನ ಪ್ರಮಾಣ ಎಷ್ಟಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮೇ 08) ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ವಾಣಿ ವಿಲಾಸ ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

ವಾಣಿವಿಲಾಸ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ 2023-24ನೇ ಸಾಲಿನಲ್ಲಿ ಅತೀ ಕಡಿಮೆ ಮಳೆ ಆಗಿರುವುದರಿಂದ, ರೈತರ ಜಮೀನುಗಳಿಗೆ ನೀರು ಹರಿಸುವುದು ಅವಶ್ಯವಿರುತ್ತದೆ. ಈ ಹಿನ್ನೆಲೆ ವಾಣಿವಿಲಾಸ ಸಾಗರ ಜಲಾಶಯ ಅಚ್ಚುಕಟ್ಟು ಪ್ರದೇಶಕ್ಕೆ ಬೇಸಿಗೆ ಹಂಗಾಮಿಗೆ ಎರಡನೇ ಹಂತದ ನೀರು ಬಿಡುಗಡೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಬರಗಾಲ ಹಾಗೂ ಬೇಸಿಗೆಯ ಈ ಸಂದರ್ಭದಲ್ಲಿ ವಿವಿ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ಮುತುವರ್ಜಿವಹಿಸಿ ನೀರು ಸದ್ಭಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರು ವ್ಯರ್ಥ ಮಾಡಬಾರದು. ಎಲ್ಲಿ ಅಗತ್ಯ ಹಾಗೂ ಅನಿವಾರ್ಯ ಇರುವ ಕಡೆ ಮಾತ್ರ ನೀರು ಬಳಕೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಬೀಳು ಭೂಮಿಗೆ ಅನಾವಶ್ಯಕವಾಗಿ ನೀರು ಹರಿಸಬಾರದು ಎಂದು ತಿಳಿಸಿದರು.
ಅಲ್ಲದೆ, ಅನಾವಶ್ಯಕವಾಗಿ ನೀರು ವ್ಯರ್ಥ ಮಾಡುವುದು ಕಂಡು ಬಂದರೆ ನೀರು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ ಅವರು, ಟ್ಯಾಂಕರ್ ಮೂಲಕ ವಾಣಿಜ್ಯ ಉದ್ದೇಶಕ್ಕಾಗಿ ನೀರು ಮಾರಾಟ ಮಾಡಬಾರದು. ಒಂದು ವೇಳೆ ವಾಣಿಜ್ಯ ಬಳಕೆಗಾಗಿ ನೀರು ಬಳಕೆ ಮಾಡುವುದು ಕಂಡು ಬಂದರೆ, ಸಂಬಂಧಪಟ್ಟವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನೀರು ಹರಿಸುವ ಮುನ್ನ ಅಚ್ಚುಕಟ್ಟು ಪ್ರದೇಶದಲ್ಲಿನ ಬೋರ್ವೆಲ್ಗಳಲ್ಲಿ ನೀರಿನ ಮಟ್ಟ ಹಾಗೂ ನೀರು ಹರಿಸಿದ ನಂತರದ ನೀರಿನ ಮಟ್ಟದ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸಮೀಕ್ಷೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ವಿವಿ ಸಾಗರ ನೀರಿನ ಪ್ರಮಾಣದ ವಿವರ: ವಿವಿ ಸಾಗರ ಜಲಾಶಯದ ಒಟ್ಟು ನೀರಿನ ಸಂಗ್ರಹಣಾ ಸಾಮರ್ಥ್ಯವು 30.422 ಟಿಎಂಸಿಗಳಾಗಿದ್ದು, ಜಲಾಶಯದ ವ್ಯಾಪ್ತಿಯಲ್ಲಿ ಒಟ್ಟು 12135.00 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದ್ದು, ಇದರಲ್ಲಿ ಪ್ರಮುಖವಾಗಿ ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ, ಬಾಳೆ 5557.00 ಹೆಕ್ಟೇರ್ ಆಗಿರುತ್ತದೆ. ಉಳಿದಂತೆ 6578.00 ಹೆಕ್ಟೇರ್ ಖುಷ್ಕಿ ಜಮೀನು ಇರುತ್ತದೆ.
ಮೇ 08ರಂದು ವಿವಿ ಸಾಗರ ಜಲಾಶಯದಲ್ಲಿ 112 ಅಡಿಗಳಷ್ಟು ನೀರಿನ ಸಂಗ್ರಹವಿದ್ದು, ಈ ಮಟ್ಟಕ್ಕೆ ನೀರಿನ ಸಂಗ್ರಹಣೆಯು 16.96 ಟಿಎಂಸಿಗಳಾಗಿದ್ದು, ಇದರಲ್ಲಿ 1.87 ಟಿಎಂಸಿ ಬಳಕೆಗೆ ಬಾರದ ಪ್ರಮಾಣವಾಗಿರುತ್ತದೆ ಹಾಗೂ ಬಳಕೆಗೆ ಬರುವ ನೀರಿನ ಪ್ರಮಾಣ 15.09 ಟಿಎಂಸಿ ಇರುತ್ತದೆ. ಹಿರಿಯೂರು ಪಟ್ಟಣ ಹಾಗೂ ಚಿತ್ರದುರ್ಗ ಪಟ್ಟಣದ ಕುಡಿಯುವ ನೀರಿಗಾಗಿ ಮತ್ತು ಚಳ್ಳಕೆರೆ ಪಟ್ಟಣ, ಸಂಶೋಧನಾ ಕೇಂದ್ರಗಳು ಹಾಗೂ 18 ಹಳ್ಳಿಗಳ ಕುಡಿಯುವ ನೀರಿಗಾಗಿ ಒಟ್ಟು 0.2115 ಟಿಎಂಸಿ ಅವಶ್ಯಕವಾಗಿರುತ್ತದೆ.
ಹಾಲಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಜಲಾಶಯದಿಂದ ಮಳೆಗಾಲದ ಬೆಳೆ ಹಾಗೂ ತೋಟಗಾರಿಕೆ ಹದ ನೀರನ್ನು 30 ದಿನ ಹರಿಸಿದರೆ, ಸರಾಸರಿ ನೀರಿನ ಪ್ರಮಾಣ ಸುಮಾರು 1.40 ಟಿಎಂಸಿ ಬೇಕಾಗಲಿದೆ. ಆವಿಯಾಗುವ ನೀರಿನ ಪ್ರಮಾಣ ಸುಮಾರು 0.516 ಟಿಎಂಸಿ, ಒಟ್ಟು ಬಳಕೆಯಾಗುವ ನೀರಿನ ಪ್ರಮಾಣ 2.127 ಟಿಎಂಸಿ, ಜಲಾಶಯದಲ್ಲಿ ಉಳಿಯಬಹುದಾದ ನೀರಿನ ಪ್ರಮಾಣ 14.83 ಟಿಎಂಸಿ (111.55 ಅಡಿಗಳು) ಇರಲಿದೆ.
ಮೇಲ್ಮಟ್ಟದ ಕಾಲುವೆ ಅಚ್ಚುಕಟ್ಟು ಪ್ರದೇಶದ 3 ಗ್ರಾಮಗಳು, ಬಲನಾಲ ಅಚ್ಚುಕಟ್ಟು ಪ್ರದೇಶದ 21 ಗ್ರಾಮಗಳು ಹಾಗೂ ಎಡನಾಲ ಅಚ್ಚುಕಟ್ಟು ಪ್ರದೇಶದ 18 ಗ್ರಾಮಗಳು ಹಾಗೂ ನಾಲೆಗಳಲ್ಲಿ ನೀರನ್ನು ಬಿಟ್ಟಾಗ ಹಿರಿಯೂರು ತಾಲ್ಲೂಕಿನ 38 ಗ್ರಾಮಗಳ ಅಂತರ್ಜಲ ಅಭಿವೃದ್ಧಿಯಾಗಿ ಸಾರ್ವಜನಿಕರಿಗೆ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನೂ ಸಹ ಸುಧಾರಿಸಬಹುದಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications