ಚಿತ್ರದುರ್ಗ; ಸೈನ್ಸ್ ಕಾಲೇಜು ಮೈದಾನಕ್ಕೆ ಶಿಫ್ಟ್ ಆದ ಅಗತ್ಯ ವಸ್ತುಗಳ ಮಾರಾಟ
ಚಿತ್ರದುರ್ಗ, ಮಾರ್ಚ್ 28: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
Recommended Video
2 people disobeying home quarentine in Chitradurga | Oneindia Kannada
ಮಾರುಕಟ್ಟೆಗಳಲ್ಲಿ ಮಾರಾಟಗಾರರು ದುಪ್ಪಟ್ಟು ಬೆಲೆ ಕೇಳುತ್ತಿದ್ದ ಹಿನ್ನೆಲೆ, ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟವನ್ನು ಚಿತ್ರದುರ್ಗ ಎಸ್ಪಿ ಒಂದೆಡೆಗೆ ಶಿಫ್ಟ್ ಮಾಡಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಂಡು ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ತಳ್ಳುವ ಗಾಡಿಗಳ ಮೂಲಕ ತೆರಳಿ ಮಾರಾಟ ಮಾಡಲು ಅನುಮತಿ ಸಹ ನೀಡಲಾಗಿದೆ. ರೈತರು ಬೆಳೆದ ತರಕಾರಿಗಳನ್ನು ಮಧ್ಯವರ್ತಿಗಳ ಸಹಾಯವಿಲ್ಲದೆ ನೇರವಾಗಿ ಗ್ರಾಹಕರಿಗೆ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ಮಾಡಲು ಸೂಚಿಸಿದ್ದಾರೆ.












Click it and Unblock the Notifications