ದೇವರಾಣೆ ನಾವು ಆಪರೇಷನ್ ಕಮಲ ಮಾಡುತ್ತಿಲ್ಲ: ಶ್ರೀರಾಮುಲು
Recommended Video

ಚಿತ್ರದುರ್ಗ, ಡಿಸೆಂಬರ್ 05: ದೇವರ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ ನಾವು ಆಪರೇಷನ್ ಕಮಲ ಮಾಡುತ್ತಿಲ್ಲ, ಯಾವ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಬನ್ನಿ ಎಂದು ಕರೆದಿಲ್ಲವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ಗೆ ಸಿಎಂ ಸ್ಥಾನ ಸಿಕ್ಕಿದೆ, ಹಾಗಾಗಿ ಕಾಂಗ್ರೆಸ್ ಶಾಸಕರು ಆತಂಕಗೊಂಡು ಬಂಡಾಯ ಎದ್ದಿದ್ದಾರೆ ಅದನ್ನು ನಮ್ಮ ತಲೆಗೆ ಕಟ್ಟಲು ಕಾಂಗ್ರೆಸ್ ನೋಡುತ್ತಿದೆ ಎಂದು ರಾಮುಲು ಹೇಳಿದರು.
ಇಷ್ಟು ದಿನ ರಾಮುಲು, ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದರು ಆದರೆ ಈಗ ನಮ್ಮ ಪಿಎಗಳು ಆಪರೇಷನ್ ಕಮಲ ಮಾಡುತ್ತಿದ್ದಾರೆ, ನಿಮ್ಮ ಶಾಸಕರನ್ನು ನೀವು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳು ಎಂದು ರಾಮುಲು ಹೇಳಿದರು.

ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ, ಕುಮಾರಸ್ವಾಮಿ ನಮ್ಮ ಶಾಸಕರನ್ನು ಆಪರೇಷನ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ರಾಮುಲು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಉಲ್ಬಣಿಸಿರುವ ಬರದ ಬಗ್ಗೆ ಗಮನ ನೀಡದೆ, ಆಪರೇಷನ್ ಕಮಲದ ಸುಳ್ಳುಗಳನ್ನು ಹೇಳಿ ಜನರ ದಿಕ್ಕು ತಪ್ಪಿಸುವುದರಲ್ಲಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಿರತವಾಗಿದೆ ಎಂದು ಅವರು ಹೇಳಿದರು.












Click it and Unblock the Notifications