ನಮಗೆ ದೇವಾಲಯಕ್ಕಿಂತ, ಅಭಿವೃದ್ಧಿ ಬೇಕು: ಎಂಎಲ್ಸಿ ವಿಶ್ವನಾಥ್ ಪತ್ರಕ್ಕೆ ಡಾ.ಪ್ರೇಮ ತಿರುಗೇಟು
ಚಿತ್ರದುರ್ಗ, ಸೆಪ್ಟೆಂಬರ್ 27: ನಮಗೆ ದೇವಾಲಯಗಳ ಅಭಿವೃದ್ಧಿ ಅಗತ್ಯ ಬೇಕಾಗಿಲ್ಲ. ನಮಗೆ ಮುಖ್ಯವಾಗಿ ಬೇಕಾಗಿರುವುದು ರಾಜಕೀಯ, ಶಿಕ್ಷಣ, ಅಭಿವೃದ್ಧಿ ಮತ್ತು ಆಡಳಿತದ ಅವಕಾಶಗಳು ಬೇಕು ಎಂದು ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಡಾ.ಪ್ರೇಮ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಕಾಡುಗೊಲ್ಲರ ಆರಾಧ್ಯ ದೈವ ಜುಂಜಪ್ಪ ದೇವಸ್ಥಾನ ನಿರ್ಮಿಸಲು ಸಿಎಂ ಯಡಿಯೂರಪ್ಪ ಅವರಿಗೆ ಬರೆದ ಪತ್ರಕ್ಕೆ ಡಾ.ಪ್ರೇಮ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ.
ಕಾಡುಗೊಲ್ಲ ಅತ್ಯಂತ ಹಿಂದುಳಿದಿರುವ ಬುಡಕಟ್ಟು ಸಮುದಾಯವಾಗಿದ್ದು, ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ಮೂರು ವರ್ಷ ಕಳೆದರೂ ಕೂಡ ಗೊಲ್ಲರ ಹಟ್ಟಿಗಳು ಯಾವುದೇ ಅಭಿವೃದ್ಧಿಯನ್ನು ಕಾಣದಂತಾಗಿವೆ. ಇಂದಿಗೂ ಇವರಿಗೆ ರಾಜಕೀಯ ಮೀಸಲಾತಿ ದೊರೆತಿಲ್ಲ. ಇದಲ್ಲದೆ ಸಾಮಾಜಿಕ ಮೀಸಲಾತಿ, ಶೈಕ್ಷಣಿಕ ಮೀಸಲಾತಿಯು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಹೊಂದುವುದಕ್ಕೆ ದೇವಸ್ಥಾನಗಳು ಮುಖ್ಯವಲ್ಲ
ನಮಗೆ ಸಮುದಾಯಗಳು ಅಭಿವೃದ್ಧಿ ಹೊಂದುವುದಕ್ಕೆ ದೇವಸ್ಥಾನಗಳು ಮುಖ್ಯವಲ್ಲ ಎಂದು ಡಾ. ಪ್ರೇಮ ಹೇಳಿದ್ದು, ಅಭಿವೃದ್ಧಿ ಹೊಂದಲು ಅಧಿಕಾರಗಳು ಮತ್ತು ರಾಜಕೀಯ ಅವಕಾಶಗಳು, ಮೂಲಭೂತ ಸೌಕರ್ಯಗಳು ಮುಖ್ಯವೆಂದರು.
ಚುನಾವಣೆ ಬಂದಾಗ ದೇವಸ್ಥಾನ ಕಟ್ಟಿಕೊಡ್ತಿವಿ, ನಿಗಮ ಮಂಡಳಿ ಮಾಡುತ್ತೇವೆ, ಪರಿಷತ್ ಸದಸ್ಯ ಮಾಡುತ್ತೇವೆ ಎಂದು ದೇವರ ಹೆಸರಿನಲ್ಲಿ ಅಮಾಯಕ ಕಾಡುಗೊಲ್ಲರನ್ನು ದಿಕ್ಕು ತಪ್ಪಿಸಿ, ಮಂಕುಬೂದಿ ಎರಚಿ ನಮ್ಮಿಂದ ಮತ ಪಡೆಯಲು ಮಾಡುವ ಗಿಮಿಕ್ ಎಂದು ಎಚ್.ವಿಶ್ವನಾಥ್ ಪತ್ರಕ್ಕೆ ಡಾ.ಪ್ರೇಮ ಖಡಕ್ ಎಚ್ಚರಿಕೆ ನೀಡಿದರು. ನಿಮ್ಮ ಗಿಮಿಕ್ ಬಿಟ್ಟು ನಮಗೆ ರಾಜಕೀಯ ಅವಕಾಶ ಗಿಟ್ಟಿಸಿಕೊಡಿ, ರಾಜಕೀಯ ಸ್ಥಾನಮಾನ ಕೊಡಿಸಿ ಎಂದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮಾಡಿ
ಗೊಲ್ಲರ ಹಟ್ಟಿಗಳು ಅಭಿವೃದ್ಧಿ ಹೊಂದಲು ಪ್ರತ್ಯೇಕ ಯೋಜನೆಗಳು ಮಾಡಿ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮಾಡಿ. ಈ ನಿಗಮಕ್ಕೆ ಕಾಡುಗೊಲ್ಲರನ್ನು ನೇಮಕ ಮಾಡಿ, ಅವರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಲಿಸಿಕೊಡಿ ಒತ್ತಾಯಿಸಿದರು. ತ್ವರಿತವಾಗಿ ಗೊಲ್ಲರಹಟ್ಟಿಗಳು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಿ ಎಂದರು.
ನಮಗೆ ದೇವಾಲಯ ಬೇಡ, ಹಟ್ಟಿಗೊಂದು ಶಾಲೆ ಕಟ್ಟಿಕೊಡುವ ಮೂಲಕ ನಮ್ಮ ಮಕ್ಕಳಿಗೆ ಶಿಕ್ಷಣ ಕೊಡಿ, ನಮ್ಮ ಹಟ್ಟಿಗೆ ಕುಡಿಯುವ ನೀರು, ರಸ್ತೆಗಳು ನಿರ್ಮಾಣ, ಶೌಚಾಲಯ, ಚರಂಡಿ ವ್ಯವಸ್ಥೆ ಮಾಡಿಕೊಡಿ. ಬಿದ್ದೊಗಿರುವ ಮನೆಗಳಿವೆ. ಈಗಲೂ ಗುಡಿಸಿಲಿನಲ್ಲಿ ವಾಸ ಮಾಡುತ್ತಿದ್ದಾರೆ. ಮೊದಲು ಗುಡಿಸಲು ಮುಕ್ತ ಗೊಲ್ಲರಹಟ್ಟಿಗಳನ್ನು ಘೋಷಿಸಿ, ನಮಗೆ ಆಸ್ಪತ್ರೆಗಳನ್ನು ಕಟ್ಟಿಸಿಕೊಡಿ ಎಂದು ಆಗ್ರಹಿಸಿದರು.

ಜುಂಜಪ್ಪ ಪ್ರತಿಮೆ ಯಾರು ಕೇಳಿದರು?
ನಿಮಗೆ ಜುಂಜಪ್ಪ ಪ್ರತಿಮೆ ಯಾರು ಕೇಳಿದರು?, ಜುಂಜಪ್ಪನ ಪರಿಷತ್ ಕೇಳಿದ್ಯಾವರು ಯಾರು? ಎಂದು ಪ್ರಶ್ನಿಸಿದರು. ಕಾಡುಗೊಲ್ಲರು ವಿಗ್ರಹ ಆರಾಧಕರು ಅಲ್ಲ, ಕಾಡುಗೊಲ್ಲರಿಗೆ ಬೇನುವಗಳೇ ಪೂಜಿಸಿಕೊಂಡು ಬರುತ್ತಿದ್ದಾರೆ. ಜುಂಜಪ್ಪನ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣ ಮಾಡಿ. ಗೊಲ್ಲರಹಟ್ಟಿಗಳ ಅಭಿವೃದ್ಧಿ ಮಾಡಿ ಎಂದರು. ಚುನಾವಣೆ ಸಂದರ್ಭದಲ್ಲಿ ಗಿಮಿಕ್ ಪ್ರಚಾರ ಮಾಡಬೇಡಿ. ದಯಮಾಡಿ ಚುನಾವಣೆಯಲ್ಲಿ ಮತಗಳಿಸಲು ಮುಗ್ಧ ಜನರನ್ನು ಮೂಢರನ್ನಾಗಿ ಮಾಡಬೇಡಿ, ಕಾಡುಗೊಲ್ಲರಲ್ಲಿ ನಂಬಿಕೆಗಳಿವೆ ಎಂದರು.

ಕಣ್ಣರಿಯದಿದ್ದರೂ ಕರುಳರಿಯದೇ
ಕಳೆದ ಚುನಾವಣೆಯ ವೇಳೆ ಶಿರಾದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಕೊಟ್ಟ ಭರವಸೆ ಎಲ್ಲಿಗೆ ಹೊಯ್ತು?. ಸರ್ಕಾರ ಬಂದ 24 ಗಂಟೆಯಲ್ಲಿ ಕಾಡುಗೊಲ್ಲರಿಗೆ ಜಾತಿ ಪಟ್ಟಿ ಕೊಡ್ತೀನಿ ಅಂತ ಹೇಳಿ, 24 ತಿಂಗಳು ಕಳೆಯುತ್ತಾ ಬರುತ್ತಿದೆ. ಎಲ್ಲಿಗೆ ಹೋಯ್ತು ಆ ಭರವಸೆ ಎಂದು ಪ್ರಶ್ನಿಸಿದರು. ಚುನಾವಣೆ ಬಂದಾಗ ನಮ್ಮ ಸಮುದಾಯದವರು ಮತಕ್ಕಾಗಿ ಸಮುದಾಯವನ್ನು ಬಲಿ ಕೊಡಬೇಡಿ. ಬದಲಿಗೆ ರಾಜಕೀಯ ಸ್ಥಾನಮಾನ, ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿ. ನಮ್ಮವರು ಸಹ ಬೇರೆಯವರ ತರ ವರ್ತನೆ ಮಾಡಬೇಡಿ, ನಮ್ಮ ಸಮಾಜದ ಬಂಧುಗಳು ಅರ್ಥಮಾಡಿಕೊಳ್ಳಬೇಕು. ಕಣ್ಣರಿಯದಿದ್ದರೂ ಕರುಳರಿಯದೇ ಎಂಬ ಕರುಳಿನ ಮಾತು, ಕರುಳಿನ ಭಾಷೆಯನ್ನು ಅರ್ಥಮಾಡಿಕೊಳ್ಳಬೇಕು ತಿಳಿ ಹೇಳಿದರು.
Recommended Video
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications