ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಪೂರ್ಣಗೊಂಡರೇ ಯಾವೆಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಗೊತ್ತಾ?
ಚಿತ್ರದುರ್ಗ, ಜುಲೈ, 29: ಜಿಲ್ಲೆಯಲ್ಲಿ ಧೀನ ಪ್ರಕರಣಹಾದುಹೋಗಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150ರಲ್ಲಿನ ರಸ್ತೆ ಅಡಚಣೆ, ಭೂಸ್ವಾಗಳನ್ನು ಇತ್ಯರ್ಥಪಡಿಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಇದು ಪೂರ್ಣಗೊಂಡೆ ಏನೆಲ್ಲಾ ಪ್ರಯೋಜನೆಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಜುಲೈ 29) ರಾಷ್ಟ್ರೀಯ ಹೆದ್ದಾರಿ 150ರಲ್ಲಿನ ಭೂಸ್ವಾಧೀನ ಪ್ರಕರಣಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಜಮೀನನ್ನು ಅಕ್ರಮವಾಗಿ ಬೇರೆಯವರ ಹೆಸರಿನಲ್ಲಿ ಇ-ಸ್ವತ್ತು ಮಾಡಿ, ರಾಷ್ಟ್ರೀಯ ಹೆದ್ದಾರಿಗಾಗಿ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿ, ಭೂಸ್ವಾಧೀನದ ಪರಿಹಾರ ಮೊತ್ತವನ್ನು ಅಕ್ರಮವಾಗಿ ಬೇರೆಯವರ ಹೆಸರಿಗೆ ಪಾವತಿಸಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಅಲ್ಲದೆ, ಕಂಪನಿಯವರು ರಸ್ತೆ ನಿರ್ಮಾಣಕ್ಕಾಗಿ ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಗ್ರಾವಲ್ ಮಣ್ಣು ಎತ್ತಿ, ಇದಕ್ಕೆ ಯಾವುದೇ ರಾಜಧನ ಪಾವತಿಸದೇ ಇರುವ ಬಗ್ಗೆಯೂ ದೂರುಗಳು ಬಂದಿವೆ ಎಂದರು.
ಅಲ್ಲದೆ, ಇವೆಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಯಾರೇ ತಪ್ಪು ಮಾಡಿದ್ದರೂ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದವರ ವಿರುದ್ಧ ನಿಯಮಾನುಸಾರ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯಲ್ಲಿನ ಭೂಸ್ವಾಧೀನ ಸಮಸ್ಯೆ, ರೈತರಿಗೆ ಪರಿಹಾರ ಸಮಸ್ಯೆ ಸೇರಿದಂತೆ ಇತ್ಯಾದಿ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚೆ ಮಾಡಿ, ಶೀಘ್ರವಾಗಿ ಪರಿಹರಿಸಿ. ಈ ಮೂಲಕ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಹಿರಿಯೂರಿನಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿದ್ದು, ಈ ಹಿಂದೆ ಇರುವ ರಸ್ತೆಯಲ್ಲಿ ಬಳ್ಳಾರಿ, ಹುಳಿಯಾರು ಕಡೆಯಿಂದ ಬರುವ ವಾಹನಗಳು ಕೆಲವು ಬೆಂಗಳೂರು ಹಾಗೂ ಚಿತ್ರದುರ್ಗ ಕಡೆಗೆ ಚಲಿಸುತ್ತವೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯು ನೇರವಾಗಿ ಮಾಡಲಾಗಿದ್ದು, ಇದರಿಂದಾಗಿ ವಾಹನ ಚಾಲನೆಗೆ ತೊಂದರೆಯಾಗುತ್ತಿದೆ.
ಹೀಗಾಗಿ ಹಿರಿಯೂರನ್ನು ಜಂಕ್ಷನ್ ಮಾಡಿಕೊಂಡು, ಬಟರ್ಪ್ಲೈ ಡಿಸೈನ್ ಮೂಲಕ ಎರಡೂ ರಾಷ್ಟ್ರೀಯ ಹೆದ್ದಾರಿಗೆ ಸಾಗುವ ರಸ್ತೆಯನ್ನು ವಿಭಜಿಸಬೇಕು. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದು, ಕೂಡಲೇ ಯೋಜನೆಯಲ್ಲಿ ಮರು ಸೇರ್ಪಡೆ ಮಾಡಿಕೊಂಡು ಹಿರಿಯೂರಿನಲ್ಲಿ ಬಟರ್ಪ್ಲೈ ಡಿಸೈನ್ ಜಂಕ್ಷನ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯಲ್ಲಿನ ನ್ಯೂನತೆಯನ್ನು ಸರಿಪಡಿಸಬೇಕು ಹಾಗೂ ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎರಡು ತಿಂಗಳೊಳಗೆ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ರಾಷ್ಟ್ರೀಯ ಹೆದ್ದಾರಿ-150ರ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಪಿಎನ್ಸಿ ಕಂಪನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications