ಪ್ರಧಾನಿ ಮೋದಿ ನನ್ನ ಕೈಗೆ ಸಿಕ್ರೆ ಕಾಲಲ್ಲಿರೋದೊ ತೆಗೆದು ಹೊಡೀತಿನಿ-ಹೀಗೆ ಹೇಳಿದ್ಯಾರು ಹಾಗೂ ಕಾರಣ ಏನು?
ಚಿತ್ರದುರ್ಗ, ಮಾರ್ಚ್, 10: ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ ಎಂದು ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿಎಸ್ ಮಂಜುನಾಥ್ ಹೇಳಿದ್ದಾರೆ. ಹಾಗಾದರೆ ಅವರು ಹೀಗೆ ಆಕ್ರೋಶ ವ್ಯಕ್ತಪಡಿಸಿದ್ದೇಕೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಳಿ ಶನಿವಾರ ಹಮ್ಮಿಕೊಂಡಿದ್ದ ಸಮುದಾಯ ಭವನಗಳ ಮುಂದುವರಿದ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಬಹಿರಂಗ ಕಾರ್ಯಕ್ರಮದಲ್ಲಿ ಜಿ.ಎಸ್.ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಸಚಿವ ಡಿ. ಸುಧಾಕರ್, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಇದ್ದ ವೇದಿಕೆಯ ಮೇಲೆಯೇ ವಾಗ್ದಾಳಿ ನಡೆಸಿರುವ ವೀಡಿಯೋ ಇದೀಗ ವೈರಲ್ ಆಗಿದೆ.

"ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಸಿಲಿಂಡರ್ ಬೆಲೆ 100 ರೂಪಾಯಿ ಕಡಿಮೆ ಮಾಡಿದ್ದಾರೆ. ಈಗ್ಯಾಕಲೇ ಮಾಡ್ತಿಯಾ, ಈ ದೇಶದ ಪ್ರಜೆಗಳಾಗಿ ನಾವೆಲ್ಲ ಪ್ರಶ್ನೆ ಮಾಡಬೇಕು. ಇಷ್ಟು ದಿನ 95 ಸಾವಿರ ಒಂದು ಲಕ್ಷ ಮುಖಕ್ಕೆ ಹೊಡೆದು ಕಿತ್ಕೊಂಡು ಈಗ 100 ಫ್ರೀ ಅಂತಿದಾನೆ," ಎಂದು ಏಕವಚನದಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. "465 ರೂಪಾಯಿ ಇದ್ದ ಸಿಲಿಂಡರ್ ಬೆಲೆ 1,200 ರೂಪಾಯಿ ಯಾಕೆ ಮಾಡ್ದೆ ಅಂತಾ ನಾವು ಪ್ರಶ್ನೆ ಮಾಡಬೇಕು. ಹಾಗೆಯೇ ಚುನಾವಣೆ ಆದ ಮೇಲೆ ಸಿಲಿಂಡರ್ ದರ 1,400 ಮಾಡ್ತೀಯಾ ಅಂತಾ ಪ್ರಶ್ನೆ ಮಾಡ್ಬೇಕು," ಎಂದರು.
"ಲಕ್ಷ ರೂಪಾಯಿ ನಮ್ಮಿಂದ ದೋಚಿ, ನೂರು ಸಿಲಿಂಡರ್ ರೇಟ್ ಕಡಿಮೆ ಮಾಡಿದ್ರು, ನಾವು ದೇವಸ್ಥಾನ ಕಟ್ಟಲಿಲ್ಲ, ನಾವು ಅದನ್ನು ವಿರೋಧ ಮಾಡಿಲ್ಲ. ನಮ್ಮ ಸಂಸ್ಕೃತಿಯೂ ಅದಲ್ಲ, ನಾವು ಯೋನಿವರ್ಸಿಟಿಗಳನ್ನು ಕಟ್ಟಿದ್ದೇವೆ. ಅದರಲ್ಲಿ ಕಲಿತವರೇ ಈಗ ಬಿಜೆಪಿಯಲ್ಲಿ ನಿಂತು, ಕಾಂಗ್ರೆಸ್ ಏನು ಮಾಡಿದೆ ಅಂತಾ ಪ್ರಶ್ನೆ ಮಾಡ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ನವರು, ದೇಶದ ಪ್ರಜೆಗಳು ಮಾತನಾಡುವುದಿಲ್ಲ," ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಿ.ಎಸ್. ಮಂಜುನಾಥ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications