ಪ್ರಧಾನಿ ಮೋದಿ ನನ್ನ ಕೈಗೆ ಸಿಕ್ರೆ ಕಾಲಲ್ಲಿರೋದೊ ತೆಗೆದು ಹೊಡೀತಿನಿ-ಹೀಗೆ ಹೇಳಿದ್ಯಾರು ಹಾಗೂ ಕಾರಣ ಏನು?
ಚಿತ್ರದುರ್ಗ, ಮಾರ್ಚ್, 10: ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ ಎಂದು ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿಎಸ್ ಮಂಜುನಾಥ್ ಹೇಳಿದ್ದಾರೆ. ಹಾಗಾದರೆ ಅವರು ಹೀಗೆ ಆಕ್ರೋಶ ವ್ಯಕ್ತಪಡಿಸಿದ್ದೇಕೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಳಿ ಶನಿವಾರ ಹಮ್ಮಿಕೊಂಡಿದ್ದ ಸಮುದಾಯ ಭವನಗಳ ಮುಂದುವರಿದ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಬಹಿರಂಗ ಕಾರ್ಯಕ್ರಮದಲ್ಲಿ ಜಿ.ಎಸ್.ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಸಚಿವ ಡಿ. ಸುಧಾಕರ್, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಇದ್ದ ವೇದಿಕೆಯ ಮೇಲೆಯೇ ವಾಗ್ದಾಳಿ ನಡೆಸಿರುವ ವೀಡಿಯೋ ಇದೀಗ ವೈರಲ್ ಆಗಿದೆ.

"ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಸಿಲಿಂಡರ್ ಬೆಲೆ 100 ರೂಪಾಯಿ ಕಡಿಮೆ ಮಾಡಿದ್ದಾರೆ. ಈಗ್ಯಾಕಲೇ ಮಾಡ್ತಿಯಾ, ಈ ದೇಶದ ಪ್ರಜೆಗಳಾಗಿ ನಾವೆಲ್ಲ ಪ್ರಶ್ನೆ ಮಾಡಬೇಕು. ಇಷ್ಟು ದಿನ 95 ಸಾವಿರ ಒಂದು ಲಕ್ಷ ಮುಖಕ್ಕೆ ಹೊಡೆದು ಕಿತ್ಕೊಂಡು ಈಗ 100 ಫ್ರೀ ಅಂತಿದಾನೆ," ಎಂದು ಏಕವಚನದಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. "465 ರೂಪಾಯಿ ಇದ್ದ ಸಿಲಿಂಡರ್ ಬೆಲೆ 1,200 ರೂಪಾಯಿ ಯಾಕೆ ಮಾಡ್ದೆ ಅಂತಾ ನಾವು ಪ್ರಶ್ನೆ ಮಾಡಬೇಕು. ಹಾಗೆಯೇ ಚುನಾವಣೆ ಆದ ಮೇಲೆ ಸಿಲಿಂಡರ್ ದರ 1,400 ಮಾಡ್ತೀಯಾ ಅಂತಾ ಪ್ರಶ್ನೆ ಮಾಡ್ಬೇಕು," ಎಂದರು.
"ಲಕ್ಷ ರೂಪಾಯಿ ನಮ್ಮಿಂದ ದೋಚಿ, ನೂರು ಸಿಲಿಂಡರ್ ರೇಟ್ ಕಡಿಮೆ ಮಾಡಿದ್ರು, ನಾವು ದೇವಸ್ಥಾನ ಕಟ್ಟಲಿಲ್ಲ, ನಾವು ಅದನ್ನು ವಿರೋಧ ಮಾಡಿಲ್ಲ. ನಮ್ಮ ಸಂಸ್ಕೃತಿಯೂ ಅದಲ್ಲ, ನಾವು ಯೋನಿವರ್ಸಿಟಿಗಳನ್ನು ಕಟ್ಟಿದ್ದೇವೆ. ಅದರಲ್ಲಿ ಕಲಿತವರೇ ಈಗ ಬಿಜೆಪಿಯಲ್ಲಿ ನಿಂತು, ಕಾಂಗ್ರೆಸ್ ಏನು ಮಾಡಿದೆ ಅಂತಾ ಪ್ರಶ್ನೆ ಮಾಡ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ನವರು, ದೇಶದ ಪ್ರಜೆಗಳು ಮಾತನಾಡುವುದಿಲ್ಲ," ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಿ.ಎಸ್. ಮಂಜುನಾಥ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications