''ಯಡಿಯೂರಪ್ಪ ಸಿಎಂ ಆದಾಗಲೆಲ್ಲಾ ರಾಜ್ಯದಲ್ಲಿ ಸಂಕಷ್ಟ'' : ಬಿಜೆಪಿ ಶಾಸಕ
ಚಿತ್ರದುರ್ಗ, ಜೂ. 10: ''ಯಡಿಯೂರಪ್ಪ ಮುಖ್ಯಮಂತ್ರಿ ಆದಾಗಲೆಲ್ಲಾ ರಾಜ್ಯದಲ್ಲಿ ಸಂಕಷ್ಟ ಎದುರಾಗುತ್ತದೆ. ಅವರಿಗೆ ಯಾವ ಗ್ರಹಚಾರ ಇದೆಯೋ ನಮಗೆ ತಿಳಿಯದು'' ಎಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
ಹೊಸದುರ್ಗ ನಗರದ ಸ್ಲಂ ನಿವಾಸಿಗಳು ಹಾಗೂ ಕಡು ಬಡವರಿಗೆ ಉಚಿತವಾಗಿ 6,500 ಆಹಾರ ಕಿಟ್ ವಿತರಿಸಿದ ಬಳಿಕ ಈ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ''ಕೆಲವರು ನಾನು ರಾಜ್ಯದ ಆಡಳಿತದ ನೇತೃತ್ವ ವಹಿಸಿಕೊಂಡರೆ ನಮ್ಮ ಹಣೆ ಬರಹವೇ ಬದಲಾಗುತ್ತದೆ ಎಂಬ ಕನಸು ಕಾಣುತ್ತಾರೆ. ಆದರೆ ನಮ್ಮ ಬಿ.ಎಸ್. ಯಡಿಯೂರಪ್ಪನವರ ಗ್ರಹಚಾರವೋ ಏನೋ ತಿಳಿಯದು. ಅವರು ಅಧಿಕಾರ ವಹಿಸಿಕೊಂಡಾಗಲೆಲ್ಲಾ ಯಾವುದಾದರೂ ಸಂಕಷ್ಟ ಎದುರಾಗುತ್ತದೆ'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
''ಯಡಿಯೂರಪ್ಪ ಕಳೆದ ಬಾರಿ ಮುಖ್ಯಮಂತ್ರಿಯಾದಾಗ ಎಲ್ಲೆಡೆ ನೆರೆ ಹಾವಳಿಯ ಸಂಕಷ್ಟ ಉಂಟಾಗಿತ್ತು. ಆ ಸಂದರ್ಭದಲ್ಲಿ ಅವರು ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿದ್ದರು. ಈ ಬಾರಿ ಕೋವಿಡ್ ಸಂಕಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ಬಿಎಸ್ವೈ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ'' ಎಂದು ಅಭಿಪ್ರಾಯಿಸಿದರು.

''ಒಂದೆಡೆ ಕೊರೊನಾ ಸಂಕಷ್ಟ ಇನ್ನೊಂದೆಡೆ ಈ ವದಂತಿಗಳು ಈ ಎಲ್ಲಾ ಒತ್ತಡದಿಂದ ನಡುವೆಯೇ ಸಿಎಂ ಯಡಿಯೂರಪ್ಪ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ರೀತಿ ಒತ್ತಡವಿದ್ದಾಗ ಮುಖ್ಯಮಂತ್ರಿಯಾಗಿ ಸರಿಯಾಗಿ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗುತ್ತದೆ'' ಎಂದು ಹೇಳಿದರು.
ಇನ್ನು ಈ ಸಂದರ್ಭದಲ್ಲೇ, ''ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರ ಸ್ಥಾನ ಬದಲಾವಣೆ ಬಗ್ಗೆ ಪಕ್ಷ ಯಾವ ನಿರ್ಧಾರ ಕೈಗೊಳ್ಳುತ್ತದೋ ಆ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದ ಶಾಸಕರು, ಸಿಎಂ ಬದಲಾವಣೆ ಬಗ್ಗೆ ನಾನು ಬೇರೆ ಯಾವುದೇ ಹೇಳಿಕೆ ನೀಡುವುದಿಲ್ಲ'' ಎಂದಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications