ಬಿಜೆಪಿಯಿಂದ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ-ಗೂಳಿಹಟ್ಟಿ ಶೇಖರ್
ಚಿತ್ರದುರ್ಗ, ಡಿಸೆಂಬರ್ 13: ಮುಂಬರುವ 2023ರ ವಿಧಾನಸಭಾ ಚುನಾವಣೆ, ದಿನ ಕಳೆದಂತೆ ರಂಗೇರುತ್ತಿದೆ. ಟಿಕೆಟ್ ಗಿಟ್ಟಿಸಿಕೊಳ್ಳಲು ಆಯಾ ಪಕ್ಷದಲ್ಲಿ ನಾಯಕರ ನಡುವೆ ಪ್ರಬಲ ಪೈಪೋಟಿ ಎದುರಾಗಿದೆ.
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಇಬ್ಬರ ನಾಯಕರ ನಡುವೆ ಟಿಕೆಟ್ ಕದನ ಆರಂಭವಾಗಿದೆ. ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ, ಒಂದು ವೇಳೆ ಟಿಕೆಟ್ ನಿರಾಕರಿಸಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆ ಎದುರಿಸುತ್ತೇನೆ ಎಂದು ಹಾಲಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹೇಳಿದ್ದಾರೆ.
ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಇವರಿಬ್ಬರ ನಡುವೆ ಈಗಾಗಲೇ ಅಸಮಾಧಾನ ಉಂಟಾಗಿದ್ದು, ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಇದಲ್ಲದೆ ಒಬ್ಬರ ವಿರುದ್ಧ ಇನ್ನೊಬ್ಬರು ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ.

ಈ ಇಬ್ಬರ ನಾಯಕರ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ. ಹೀಗಾಗಿ ಅಸಮಾಧಾನಗೊಂಡಿರುವ ನಾಯಕರನ್ನು ಸಮಾಧಾನ ಪಡಿಸಿ, ಒಂದೇ ಪಕ್ಷದವರು ಎಂದು ಒಗ್ಗೂಡಿಸುವ ಕೆಲಸಕ್ಕೆ ಎಂಎಲ್ಸಿ ಕೆ.ಎಸ್ ನವೀನ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ ಹಾಗೂ ಇತರರು ಮುಂದಾಗಿದ್ದರು.
ಇನ್ನು ಈ ಸಂಧಾನ ಸಭೆಯಲ್ಲಿ ಮಾತನಾಡಿರುವ ಶಾಸಕ ಗೂಳಿಹಟ್ಟಿ ಡಿ.ಶೇಖರ್ " ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸಂತೋಷವಾಗಿ ಸ್ಪರ್ಧಿಸಿ, ಮತ್ತೊಮ್ಮೆ ಗೆಲುವು ಸಾಧಿಸಲಾಗುತ್ತದೆ. ಒಂದು ವೇಳೆ ಟಿಕೆಟ್ ತಪ್ಪಿದರೆ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ನಾಯಕರಿಗೆ ನೇರವಾಗಿಯೇ ತಿಳಿಸಿದ್ದಾರೆ.
ಮಾತು ಮುಂದುವರಿಸಿದ ಅವರು, "ಪಕ್ಷದ ಜವಾಬ್ದಾರಿ ಇರುವವರು ಶಿಸ್ತು ಹಾಗೂ ಸಂಯಮದಿಂದ ವರ್ತಿಸಬೇಕು. ನಮ್ಮಲ್ಲಿರುವ ಗೊಂದಲಗಳಿಂದ ಬೇರೆಯವರಿಗೆ ಲಾಭ ಪಡೆದುಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಅವಕಾಶ ನೀಡಬಾರದು. ನಮ್ಮಲ್ಲಿರುವ ಗುಂಪುಗಾರಿಕೆ ಬಿಟ್ಟು ವರಿಷ್ಠರ ಸೂಚನೆ ಮೇರೆಗೆ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿಕೊಂಡು ಚುನಾವಣೆ ಎದುರಿಸಬೇಕು. ಈ ಬಾರಿ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ" ಎಂದು ಹೇಳಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications