ಬೊಮ್ಮಾಯಿ ಸಂಪುಟ ಸೇರಲಿದ್ದಾರೆಯೇ ಗೂಳಿಹಟ್ಟಿ ಶೇಖರ್?
ಚಿತ್ರದುರ್ಗ, ಆಗಸ್ಟ್ 03; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ರಚನೆ ಕಸರತ್ತು ನಡೆಯುತ್ತಿದೆ. ಹಲವಾರು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಡಿ. ಶೇಖರ್ ಕೂಡ ತೆರೆಮರೆಯಲ್ಲಿ ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದಾರೆ.
ಚಿತ್ರದುರ್ಗದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. "ಬಿಜೆಪಿ ಪಕ್ಷದಲ್ಲಿ ನನಗೆ ಯಾರು ಗಾಡ್ ಫಾದರ್ ಇಲ್ಲ. ದಕ್ಷಿಣ ಭಾರತದಲ್ಲಿ ಬಿಜೆಪಿ ತಂದ ಮೊದಲ ವ್ಯಕ್ತಿ ಗೂಳಿಹಟ್ಟಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನನಗೆ 2008 ಮಂತ್ರಿ ಮಾಡುವಾಗ ಅನ್ಯಾಯ ಮಾಡಿದ್ದರು. ನನ್ನ ಕರೆದುಕೊಂಡು ಹೋದ ಮೂವರು ಮಂತ್ರಿಗಳಾದರು" ಎಂದರು.
"ಗೂಳಿಹಟ್ಟಿ ಶೇಖರ್ ಕೋಟಿ ಕೋಟಿ ಹಣ ಪಡೆದಿದ್ದಾರೆ ಎಂದು ಬಿಂಬಿಸಿದರು. ನಾನೊಬ್ಬ ಸಾಮಾನ್ಯ ಕ್ಷೇತ್ರದಲ್ಲಿ ಗೆದ್ದ ಎಸ್ಸಿ ಸಮುದಾಯದ ವ್ಯಕ್ತಿಯಾಗಿದ್ದೇನೆ. ಮೋದಿ ಅಲೆಯಲ್ಲೂ ನಾನು ಹಿಂದೆ ಜೆಡಿಎಸ್ನಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಲಕ್ಷ ಮತ ಪಡೆದಿದ್ದೆ" ಎಂದು ಹೇಳಿದರು.
"ಮಂತ್ರಿ ಸ್ಥಾನ ಸಿಗದೇ ಈ ಹಿಂದೆ ಅನ್ಯಾಯವಾಗಿದೆ. ಈಗ ಕೊಡಿ ಎಂದು ಕೇಳಿದ್ದೇವೆ. ಹೈಕಮಾಂಡ್ ನಾಯಕರು ಎಲ್ಲರೂ ಸೇರಿ ಕೇಂದ್ರ ಸರ್ಕಾರ ಮಾದರಿಯಲ್ಲಿ ಸಚಿವ ಸಂಪುಟ ಮಾಡಿದರೆ ನಮಗೆ ಅವಕಾಶ ಸಿಗುತ್ತದೆ. ಇಲ್ಲವಾದರೆ ಬೇಕಾ ಬಿಟ್ಟಿ ಸಂಪುಟ ರಚನೆ ಮಾಡಿದರೆ ನಮಗೆ ಅವಕಾಶ ಸಿಗಲ್ಲ" ಎಂದು ಗೂಳಿಹಳ್ಳಿ ಶೇಖರ್ ಹೇಳಿದರು.

ಯಾವುದೇ ನಾಯಕರನ್ನು ಭೇಟಿಯಾಗಿಲ್ಲ
"ನಾನು ಯಾವುದೇ ನಾಯಕರನ್ನು ಭೇಟಿ ಮಾಡಿಲ್ಲ. ನನಗೆ ಗಾಡ್ ಫಾದರ್ ಇಲ್ಲ, ನಾನು ಯಾವಾಗಲೂ ಕೂಡಾ ಕ್ಷೇತ್ರದಲ್ಲಿ ಇರುತ್ತೇನೆ. ನಾನು ಸಚಿವ ಸ್ಥಾನ ಪಡೆಯಲು ದೆಹಲಿ, ಬೆಂಗಳೂರಿಗೆ ಹೋಗಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಅವರಿಂದ ಸಹಾಯ ಪಡೆದುಕೊಂಡಿದ್ದೆವು. ಆದ್ದರಿಂದ ಸೌಜನ್ಯಕ್ಕೆ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಬಂದಿದ್ದೇನೆ" ಎಂದು ಗೂಳಿಹಟ್ಟಿ ಶೇಖರ್ ಹೇಳಿದರು.

ಅಭಿನಂದನೆ ಸಲ್ಲಿಸಿ ಬಂದಿದ್ದೇನೆ
"ಯಡಿಯೂರಪ್ಪ ಭೇಟಿಯಾದ ಸಮಯದಲ್ಲಿ ಪದವಿ ವಿಚಾರವಾಗಿ ಯಾವುದೇ ಪ್ರಸ್ತಾಪ ಮಾಡಿಲ್ಲ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಅವರಿಗೂ ಅಭಿನಂದನೆ ಸಲ್ಲಿಸಿ ಬಂದಿದ್ದೇನೆ. ಆಪರೇಷನ್ ಕಮಲದಲ್ಲಿ ಬಂದ ಎಲ್ಲರಿಗೂ ಉತ್ತಮ ಸ್ಥಾನ ನೀಡುತ್ತಾರೆ. ಪಕ್ಷದಲ್ಲಿ ಇರುವವರೆಗೂ ನಿಯತ್ತಾಗಿ ಇರುತ್ತೇನೆ. ನಾನು ಪಕ್ಷೇತರನಾಗಿ ಬಂದವನು, ಪಕ್ಷದಲ್ಲಿ ಇರುವವರೆಗೂ ನಿಯತ್ತಾಗಿ ಇರುವೆ" ಎಂದು ಹೇಳಿದರು.

ಪಕ್ಷದ ತೀರ್ಮಾನಕ್ಕೆ ಬದ್ದ
"ಪಕ್ಷ ನಿಷ್ಠೆ ನಮ್ಮಲ್ಲಿ ಇದೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಮ್ಮ ಶಕ್ತಿ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ತೋರಿಸುತ್ತೇನೆ. ನಮ್ಮ ಪಕ್ಷವನ್ನು ಗೆಲ್ಲಿಸುತ್ತೇವೆ, ಪಕ್ಷದ ಪರ ಇರುತ್ತೇವೆ, ಡಬಲ್ ಗೇಮ್ ಮಾಡಲ್ಲ. ಕೆಲವರು ಟೀ ಪಾರ್ಟಿ ಮಾಡಿಕೊಂಡು ಮಂತ್ರಿಗಳಾದರು" ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದರು.
Recommended Video

ನಾನು ಪಕ್ಷದಲ್ಲಿಯೇ ಇರುತ್ತೇನೆ
"ಕೆಲವರು ಬ್ಲಾಕ್ ಮೇಲ್ ಮಾಡಿ ಮಂತ್ರಿ ಆಗುತ್ತಾರೆ. ಪಕ್ಷದಲ್ಲಿ ಇದ್ದು ನಾನು ಜಾಸ್ತಿ ಮಾತನಾಡುವುದಿಲ್ಲ. ಮಂತ್ರಿ ಸ್ಥಾನ ನೀಡಿಲ್ಲ ಎಂದರೂ ಪಕ್ಷದಲ್ಲಿಯೇ ಇರುತ್ತೇನೆ. ನನ್ನ ವಾಟ್ಸಪ್ ಸ್ಟೇಟಸ್ ನನ್ನ ಹಾಜರಾತಿ" ಎಂದು ಗೂಳಿಹಟ್ಟಿ ಶೇಖರ್ ಪಕ್ಷದ ಕೆಲವು ನಾಯಕರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications