ಹೊಳಲ್ಕೆರೆಯಲ್ಲಿ ಕೋತಿಗೆ ಹೆದರಿ ಪ್ರಾಣ ಬಿಟ್ಟ ಮಹಿಳೆ
ಹೊಳಲ್ಕೆರೆ ತಾಲ್ಲೂಕಿನ ಶ್ರೀ ಲಕ್ಷ್ಮೀ ರಂಗನಾಥ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ಪೂಜೆ ಮಾಡುತ್ತಿದ್ದ ವೇಳೆ ಕೋತಿ ದಾಳಿ ಮಾಡಿದ್ದು, ಮಹಿಳೆ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ, ನವೆಂಬರ್, 28: ಸಿಂಹ, ಹುಲಿ, ಚಿರತೆಯಂತಹ ಕ್ರೂರಪ್ರಾಣಿಗಳ ದಾಳಿಗೆ ಜನ ಸಾವನ್ನಪ್ಪಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. ಆದರೆ ಮಹಿಳೆಯೊಬ್ಬರು ಕೋತಿಗೆ ಹೆದರಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊರಕೆದೇವರಪುರದ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಬಂದಿದ್ದ ಮಹಿಳೆಯೊಬ್ಬರು ಕೋತಿಗಳಿಗೆ ಹೆದರಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಹಿರಿಯೂರು ತಾಲ್ಲೂಕಿನ ಧರ್ಮಪುರದ ವಿದ್ಯಾಶ್ರೀ (20) ಎಂಬುವವರು ಪತಿ ಹಾಗು ಅಜ್ಜಿ ಜತೆ ಶನಿವಾರ ದೇವಸ್ಥಾನಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾಶ್ರೀ ಅವರು ದೇವಸ್ಥಾನದ ಸಂತೆ ಮೈದಾನದ ಪಕ್ಕದಲ್ಲಿರುವ ಹೊಂಡದಲ್ಲಿ ಗಂಗಾಪೂಜೆ ಮಾಡುತ್ತಿದ್ದಾಗ ಕೋತಿಯೊಂದು ಅವರ ಮೇಲೆ ಎರಗಿದ ಪರಿಣಾಮ ಅವರು ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ವಿದ್ಯಾಶ್ರೀ ಅವರು ಪೂಜೆ ಮಾಡುತ್ತಿದ್ದ ವೇಳೆ ಅವರ ಕೈಯಲ್ಲಿದ್ದ ಬಾಳೆಹಣ್ಣನ್ನು ಕೋತಿ ಕಸಿದುಕೊಳ್ಳಲು ಪ್ರಯತ್ನಿಸಿ ಮೇಲೆರಗಿದೆ. ಇದರಿಂದ ಅವರು ಹೆದರಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮಹಿಳೆ ಹೊಂಡಕ್ಕೆ ಬಿದ್ದ ಕೂಡಲೇ ಸಾರ್ವಜನಿಕರು ರಕ್ಷಿಸಿ ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪ್ತಯತ್ನಿಸಿದ್ದಾರೆ. ಆದರೆ ಮಹಿಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ತಾಲ್ಲೂಕಿನ ಚಿತ್ರಹಳ್ಳಿ ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications