ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿದ್ದ ಕಾದಂಬರಿಕಾರ ಬಿ.ಎಲ್.ವೇಣುಗೆ ಅನಾಮಧೇಯ ಪತ್ರ
ಚಿತ್ರದುರ್ಗ ಜೂ.10: ರೋಹಿತ್ ಚಕ್ರತೀರ್ಥ ಪರಿಷ್ಕರಿಸಿದ್ದ ಪಠ್ಯಪುಸ್ತಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಕನ್ನಡದ ಕಾದಂಬರಿಕಾರ ಬಿ.ಎಲ್. ವೇಣು ಅವರಿಗೆ ಅನಾಮಧೇಯ ಪತ್ರ ಬಂದಿದೆ. ಅದರಲ್ಲಿ ಸಾವರ್ಕರ್ ಬಗ್ಗೆ ತಾವು ಹೇಳಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಗ್ರಹಿಸಲಾಗಿದೆ.
ಕಾದಂಬರಿಕಾರ ಬಿ.ಎಲ್.ವೇಣು ಅವರಿಗೆ ರವಾನಿಸಿದ ಎರಡು ಪುಟವುಳ್ಳ ಈ ಪತ್ರದಲ್ಲಿ ಬರೆದವರ ಹೆಸರು, ವಿಳಾಸವಿಲ್ಲ. ಕ್ಷಮೆ ಕೇಳಬೇಕು ಎಂದು ತಾಕೀತು ಮಾಡಿರುವ ಜತೆಗೆ ಸಾಹಿತಿಗಳಿಗೆ ತಿಳಿಹೇಳುವಂತೆ ಬಿ.ಎಲ್.ವೇಣು ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪಾಳೆಗಾರರ ಇತಿಹಾಸಕ್ಕೆ ಸಂಬಂಧಿಸಿದಂತೆ ಬರೆದ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಇತ್ತೀಚಿನ ಬೆಳವಣಿಗೆ ಕುರಿತು ತಾವು ಎಳೆ ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತಬೇಡಿ ಎಂದು ಹೇಳಿದ್ದಿರಿ. ದೇಶದ್ರೋಹಿ ಗುಂಪುಗಳಾದ ಎಸ್ಡಿಪಿಐನಂತಹ ಸಂಘಟನೆಗಳನ್ನು ಮತ್ತು ಭಯೋತ್ಪಾದನೆ, ಎಡಪಂಥದವರನ್ನು ಬೆಂಬಲಿಸುತ್ತೀರಿ. ಅಲ್ಲದೇ 61ಸಾಹಿತಿಗಳು ದುಷ್ಟಗುಂಪನ್ನು ಸೇರಿದ್ದಿರಾ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡಬೇಡಿ:
ವಿಷ ಬೀಜ ಬಿತ್ತುವ ಕೆಲಸ ಎಸ್ಡಿಪಿಐ ಹಾಗೂ ಮುಸ್ಲಿಂ ಸಂಘಟನೆಗಳು ಮಾಡುತ್ತವೆ. ನೀವು ಹಿಂದುಗಳಾಗಿ ಮೊದಲು ಹಿಂದುಗಳ ವಿರುದ್ಧ ಮಾತನಾಡುವುದನ್ನು ಬಿಡಬೇಕು. ದೇಶದ್ರೋಹಿಗಳಿಗೆ ಮೊದಲು ತಿಳಿಹೇಳಿ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಮನಬಂದಂತೆ ಮಾತನಾಡುವ ಧರ್ಮ ಗುರುಗಳು, ರಾಜಕೀಯ ಮುಖಂಡರಿಗೆ ಮಾತನಾಡುವುದನ್ನು ಕಲಿಸಿ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ .ಕುಮಾರಸ್ವಾಮಿ ಅವರನ್ನು ಬೆಂಬಲಿಸುವುದನ್ನು ಬಿಡಿ ಎಂದು ತಾಕೀತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾದಂಬರಿಕಾರರು ಹೇಳಿದ್ದೇನು?:
ಹಿಂದಿನಿಂದಲೂ ಆಗಾಗ ಇಂತಹ ಪತ್ರಗಳು ಬರುವುದು ಸಾಮಾನ್ಯ. ಪ್ರಸ್ತುತ ಈ ಅನಾಮಧೇಯ ಪತ್ರವು ಚಿತ್ರದುರ್ಗದಿಂದಲೇ ಪೋಸ್ಟ್ ಹಾಕಿರುವ ಸಾಧ್ಯತೆ ಇದೆ. ಇಂತಹ ಅನೇಕ ಪತ್ರಗಳನ್ನು ಹರಿದು ಹಾಕಿದ್ದೇನೆ. ಈ ಬಗ್ಗೆ ಭಯಪಡುವ ವ್ಯಕ್ತಿ ನಾನಲ್ಲ ಎಂದು ಕಾದಂಬರಿಕಾರ ಬಿ.ಎಲ್.ವೇಣು ಹೇಳಿದ್ದಾರೆ.
(ಒನ್ಇಂಡಿಯಾ ಸುದ್ದಿ)
Recommended Video
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications