ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಪ್ರತಿಕ್ರಿಯಿಸಿದ್ದ ಕಾದಂಬರಿಕಾರ ಬಿ.ಎಲ್.ವೇಣುಗೆ ಅನಾಮಧೇಯ ಪತ್ರ
ಚಿತ್ರದುರ್ಗ ಜೂ.10: ರೋಹಿತ್ ಚಕ್ರತೀರ್ಥ ಪರಿಷ್ಕರಿಸಿದ್ದ ಪಠ್ಯಪುಸ್ತಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಕನ್ನಡದ ಕಾದಂಬರಿಕಾರ ಬಿ.ಎಲ್. ವೇಣು ಅವರಿಗೆ ಅನಾಮಧೇಯ ಪತ್ರ ಬಂದಿದೆ. ಅದರಲ್ಲಿ ಸಾವರ್ಕರ್ ಬಗ್ಗೆ ತಾವು ಹೇಳಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಗ್ರಹಿಸಲಾಗಿದೆ.
ಕಾದಂಬರಿಕಾರ ಬಿ.ಎಲ್.ವೇಣು ಅವರಿಗೆ ರವಾನಿಸಿದ ಎರಡು ಪುಟವುಳ್ಳ ಈ ಪತ್ರದಲ್ಲಿ ಬರೆದವರ ಹೆಸರು, ವಿಳಾಸವಿಲ್ಲ. ಕ್ಷಮೆ ಕೇಳಬೇಕು ಎಂದು ತಾಕೀತು ಮಾಡಿರುವ ಜತೆಗೆ ಸಾಹಿತಿಗಳಿಗೆ ತಿಳಿಹೇಳುವಂತೆ ಬಿ.ಎಲ್.ವೇಣು ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪಾಳೆಗಾರರ ಇತಿಹಾಸಕ್ಕೆ ಸಂಬಂಧಿಸಿದಂತೆ ಬರೆದ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಇತ್ತೀಚಿನ ಬೆಳವಣಿಗೆ ಕುರಿತು ತಾವು ಎಳೆ ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತಬೇಡಿ ಎಂದು ಹೇಳಿದ್ದಿರಿ. ದೇಶದ್ರೋಹಿ ಗುಂಪುಗಳಾದ ಎಸ್ಡಿಪಿಐನಂತಹ ಸಂಘಟನೆಗಳನ್ನು ಮತ್ತು ಭಯೋತ್ಪಾದನೆ, ಎಡಪಂಥದವರನ್ನು ಬೆಂಬಲಿಸುತ್ತೀರಿ. ಅಲ್ಲದೇ 61ಸಾಹಿತಿಗಳು ದುಷ್ಟಗುಂಪನ್ನು ಸೇರಿದ್ದಿರಾ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡಬೇಡಿ:
ವಿಷ ಬೀಜ ಬಿತ್ತುವ ಕೆಲಸ ಎಸ್ಡಿಪಿಐ ಹಾಗೂ ಮುಸ್ಲಿಂ ಸಂಘಟನೆಗಳು ಮಾಡುತ್ತವೆ. ನೀವು ಹಿಂದುಗಳಾಗಿ ಮೊದಲು ಹಿಂದುಗಳ ವಿರುದ್ಧ ಮಾತನಾಡುವುದನ್ನು ಬಿಡಬೇಕು. ದೇಶದ್ರೋಹಿಗಳಿಗೆ ಮೊದಲು ತಿಳಿಹೇಳಿ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಮನಬಂದಂತೆ ಮಾತನಾಡುವ ಧರ್ಮ ಗುರುಗಳು, ರಾಜಕೀಯ ಮುಖಂಡರಿಗೆ ಮಾತನಾಡುವುದನ್ನು ಕಲಿಸಿ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ .ಕುಮಾರಸ್ವಾಮಿ ಅವರನ್ನು ಬೆಂಬಲಿಸುವುದನ್ನು ಬಿಡಿ ಎಂದು ತಾಕೀತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾದಂಬರಿಕಾರರು ಹೇಳಿದ್ದೇನು?:
ಹಿಂದಿನಿಂದಲೂ ಆಗಾಗ ಇಂತಹ ಪತ್ರಗಳು ಬರುವುದು ಸಾಮಾನ್ಯ. ಪ್ರಸ್ತುತ ಈ ಅನಾಮಧೇಯ ಪತ್ರವು ಚಿತ್ರದುರ್ಗದಿಂದಲೇ ಪೋಸ್ಟ್ ಹಾಕಿರುವ ಸಾಧ್ಯತೆ ಇದೆ. ಇಂತಹ ಅನೇಕ ಪತ್ರಗಳನ್ನು ಹರಿದು ಹಾಕಿದ್ದೇನೆ. ಈ ಬಗ್ಗೆ ಭಯಪಡುವ ವ್ಯಕ್ತಿ ನಾನಲ್ಲ ಎಂದು ಕಾದಂಬರಿಕಾರ ಬಿ.ಎಲ್.ವೇಣು ಹೇಳಿದ್ದಾರೆ.
(ಒನ್ಇಂಡಿಯಾ ಸುದ್ದಿ)
Recommended Video
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications