ಮುರುಘಾ ಶರಣದಿಂದ ಸನ್ಯಾಸ ದೀಕ್ಷೆ ಪಡೆದಿದ್ದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ
ಚಿತ್ರದುರ್ಗ, ಜನವರಿ 03: ಕುಣಿಗಲ್ ಯೋಗವನ ಬೆಟ್ಟದ ಸ್ಥಾಪಕರು ಹಾಗೂ ಆಯುರ್ವೇದ ಪಂಡಿತರಾಗಿದ್ದ ಕಪರ್ದಿ ಸಿದ್ದಲಿಂಗ ಸ್ವಾಮೀಜಿ (78) ಶನಿವಾರದಂದು ಲಿಂಗೈಕ್ಯರಾಗಿದ್ದಾರೆ. ಚಿತ್ರದುರ್ಗದ ಮುರುಘಾ ಮಠದಿಂದ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದ ಸಿದ್ದಲಿಂಗ ಸ್ವಾಮೀಜಿ ಇತ್ತೀಚೆಗೆ ಅನಾರೋಗ್ಯ ಪೀಡಿತರಾಗಿದ್ದರು. ಅಲೋಪಥಿ ಪದ್ಧತಿ ಚಿಕಿತ್ಸೆ ನಿರಾಕರಿಸಿ, ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು.
ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ನಾಡಿನಾದ್ಯಂತ ಅಪಾರ ಭಕ್ತರನ್ನು ಹೊಂದಿದ್ದ ಶ್ರೀಗಳು ಲಕ್ಷಾಂತರ ಜನರಿಗೆ ಆಯುರ್ವೇದ ಚಿಕಿತ್ಸೆ ನೀಡಿದ್ದಾರೆ.
ಶ್ರೀಗಳ ಅಂತ್ಯಕ್ರಿಯೆಯು ಹಾಸನ ಜಿಲ್ಲೆ ಆಲೂರು ತಾಲೂಕಿನ ಮರಸು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಬಸವತತ್ವದ ಪ್ರಕಾರ ನೆರವೇರಲಿದೆ ಎಂದು ಯೋಗವನ ಬೆಟ್ಟದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯೋಗವನ ಬೆಟ್ಟಗಳ ಅಧ್ಯಕ್ಷರಾಗಿ ಬಸವಕುಮಾರ ಸ್ವಾಮೀಜಿಗಳನ್ನು ನೇಮಿಸಲಾಗಿದೆ ಎಂದು ಚಿತ್ರದುರ್ಗದ ಮಾಜಿ ಶಾಸಕ ಎಸ್. ಕೆ ಬಸವರಾಜನ್ ತಿಳಿಸಿದ್ದಾರೆ. 30 ವರ್ಷಗಳ ಹಿಂದೆ ಚಿತ್ರದುರ್ಗದ ಮುರುಘಾಮಠದಲ್ಲಿ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಂದ ಸನ್ಯಾಸ ದೀಕ್ಷೆ ಪಡೆದು ಸಿದ್ದಲಿಂಗ ಸ್ವಾಮಿಯಾದವರು ಎರಡು ವರ್ಷಗಳ ಕಾಲ ಬಸವ ತತ್ವ ಅಧ್ಯಯನ ಮಾಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications