P.T. Parameshwar Naik Profile: ಕಾಂಗ್ರೆಸ್ ಅಭ್ಯರ್ಥಿ ಪಿ.ಟಿ.ಪರಮೇಶ್ವರ್ ನಾಯ್ಕ್ ವ್ಯಕ್ತಿ ಪರಿಚಯ
ವಿಜಯನಗರ, ಮಾರ್ಚ್ 29: ಹೂವಿನ ಹಡಗಲಿ ಕ್ಷೇತ್ರದ ಹೆಸರೇ ಸೂಚಿಸುವಂತೆ ಇಲ್ಲಿಯ ಮಲ್ಲಿಗೆ ಹೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಸಿದ್ಧಿ ಪಡೆದಿದೆ. ಹೂವಿನ ಹಡಗಲಿಯ ಏಳು ಕೋಟಿ ಮೈಲಾರಲಿಂಗೇಶ್ವರ ಕಾರ್ಣಿಕವು ಸತ್ಯವಾಕ್ಯ ಎನ್ನುವುದು ರಾಜ್ಯದ ಹಲವರ ಧಾರ್ಮಿಕ ನಂಬಿಕೆ. ವಿಜಯನಗರದ ಹೂವಿನ ಹಡಗಲಿ ಕ್ಷೇತ್ರದ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರ ರಾಜಕೀಯ ಜೀವನದ ಪರಿಚಯ ಇಲ್ಲಿದೆ.
ಪಿ.ಟಿ.ಪರಮೇಶ್ವರ್ ನಾಯ್ಕ್ 1964ರ ಮೇ 11ರಂದು ಪಿ. ಥಾವರ್ಯ ನಾಯ್ಕ ಹಾಗೂ ಗಂಗಿಬಾಯಿ ದಂಪತಿಯ ಪುತ್ರನಾಗಿ ಹರಪನಹಳ್ಳಿ ಬಳಿಯ ಲಕ್ಷ್ಮಿಪುರ ತಾಂಡಾದಲ್ಲಿ ಜನಿಸಿದರು. ಬಿ.ಎ. ಪದವೀಧರರಾಗಿರುವ ಇವರು ಪ್ರೇಮಾ ಎನ್ನುವವರನ್ನು ವಿವಾಹವಾಗಿದ್ದು, ಅವಿನಾಶ್ ಮತ್ತು ಭರತ್ ಎಂಬ ಮಕ್ಕಳಿದ್ದಾರೆ.

ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ರಾಜಕೀಯ ಜೀವನ
1987ರಲ್ಲಿಯೇ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ ಪಿ.ಟಿ.ಪರಮೇಶ್ವರ್ ನಾಯ್ಕ್ 1987ರಲ್ಲಿ ಹಿರೇಮ್ಯಾಗಳಗೇರಿ ಮಂಡಲ ಪಂಚಾಯಿತಿ ಸದಸ್ಯರಾಗಿ, 1993ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಲಕ್ಷ್ಮಿಪುರ ತಾಂಡಾವನ್ನು ಪ್ರತಿನಿಧಿಸಿದ್ದರು. 1995ರಲ್ಲಿ ಹಡಗಲಿ ತಾಲೂಕು ಪಂಚಾಯಿತಿಯ ಹಿರೇ ಮ್ಯಾಗಳಗೇರಿ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಲ್ಲದೇ, 1997ರಲ್ಲಿ ಹರಪನಹಳ್ಳಿ ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಪಿ.ಟಿ.ಪರಮೇಶ್ವರ್ ನಾಯ್ಕ್ 1999ರಿಂದ ವಿಧಾನಸಭಾ ಚುನಾವಣಾ ಕಣಕ್ಕಿಳಿದಿದ್ದು, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ (ಮೀಸಲು) ವಿಧಾನಸಭೆ ಕ್ಷೇತ್ರದಿಂದ 1999 ಹಾಗೂ 2004ರಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿ ಶಾಸಕರಾಗಿದ್ದರು. ಕ್ಷೇತ್ರ ಪುನರ್ ವಿಂಗಡಣೆಯಿಂದಾಗಿ ಹೂವಿನ ಹಡಗಲಿ ಕ್ಷೇತ್ರವು ಪರಿಶಿಷ್ಟ ಜಾತಿಗೂ, ಹರಪನಹಳ್ಳಿ ಕ್ಷೇತ್ರವು ಸಾಮಾನ್ಯ ವರ್ಗಕ್ಕೂ ಮೀಸಲಾಯಿತು. ಹೀಗಾಗಿ ಪಿ.ಟಿ.ಪರಮೇಶ್ವರ್ ನಾಯ್ಕ್ 2008ರಲ್ಲಿ ಎಂ.ಪಿ. ಪ್ರಕಾಶ್ ಅವರಿಗಾಗಿ ಕ್ಷೇತ್ರ ಬದಲಿಸಿದರು.

2008ರಿಂದ ವಿಧಾನಸಭಾ ಚುನಾವಣ ಕಣಕ್ಕಿಳಿದ ಪಿ.ಟಿ.ಪರಮೇಶ್ವರ್ ನಾಯ್ಕ್
2008ರಲ್ಲಿ ಪಿ.ಟಿ.ಪರಮೇಶ್ವರ್ ನಾಯ್ಕ್ ಹೂವಿನ ಹಡಗಲಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಬಿ ಚಂದ್ರ ನಾಯಕ್ ವಿರುದ್ಧ 6,518 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಸ್ಪರ್ಧಿಸಿದ್ದ ಮೊದಲ ಚುನಾವಣೆಯಲ್ಲಿಯೇ ಪಿ.ಟಿ.ಪರಮೇಶ್ವರ್ ನಾಯ್ಕ್ ಹಡಗಲಿ ಕ್ಷೇತ್ರದಲ್ಲಿ ಸೋಲು ಅನುಭವಿಸಿದರು.
ಬಳಿಕ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ ಪಿ.ಟಿ.ಪರಮೇಶ್ವರ್ ನಾಯ್ಕ್ 2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ಚಂದ್ರ ನಾಯಕ್ ಅವರನ್ನು 40,810 ಮತಗಳ ಅಂತರದಲ್ಲಿ ಸೋಲಿಸಿ ಮೊದಲ ಬಾರಿ ಹಡಗಲಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದರು. 2018ರ ವಿಧಾನಸಭಾ ಚುನಾವಣೆಯಲ್ಲಿ 9,178 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ. ಇನ್ನು 2013ರ ಸಿದ್ದರಾಮಯ್ಯ ಸರ್ಕಾರದಲ್ಲಿ ಪಿ.ಟಿ.ಪರಮೇಶ್ವರ್ ನಾಯ್ಕ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಕ್ಷೇತ್ರದ ಈ ಬಾರಿಯ ಚುನಾವಣೆ ಕಣ ರಂಗೇರಿದ್ದು, ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿವುದು ನಿಶ್ಚಿತವಾಗಿದೆ. ಹಾಲಿ ಶಾಸಕ ಪಿ. ಟಿ. ಪರಮೇಶ್ವರ ಮತ್ತು ಬಿಜೆಪಿ ಅಭ್ಯರ್ಥಿಯ ನಡುವಿನ ಕಾದಾಟಕ್ಕೆ ಹೂವಿನ ಹಡಗಲಿ ಕ್ಷೇತ್ರ ಮತ್ತೊಮ್ಮೆ ಸಜ್ಜಾಗಿದೆ.
ಹೂವಿನಹಡಗಲಿ ಕ್ಷೇತ್ರದ ಮತದಾರರ ವಿವರ
ಒಟ್ಟು ಮತದಾರರು-1,90,000
ಪುರುಷ ಮತದಾರರು-1,00,000
ಮಹಿಳಾ ಮತದಾರರು-90,000
ಜಾತಿವಾರು ಮತ ಲೆಕ್ಕಾಚಾರ
ಲಿಂಗಾಯತ-55,000
ಎಸ್ಸಿ-45,000
ಕುರುಬರು-30,000
ಮುಸ್ಲಿಂ-20,000
ಎಸ್ಟಿ-15,000
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications