ಶಾಸ್ತ್ರ ಕೇಳಿ ದರೋಡೆ ಮಾಡುತ್ತಿದ್ದ ಓಜಿ ಕುಪ್ಪಂ ಗ್ಯಾಂಗ್ ಸೆರೆ!
ದಾವಣಗೆರೆ, ಜುಲೈ 19; ಅದು ಅಂತಿಂಥ ಖತರ್ನಾಕ್ ಗ್ಯಾಂಗ್ ಅಲ್ಲ. ಸ್ವಲ್ಪ ಯಾಮಾರಿದರೂ ಹಣ ದೋಚುವಂಥ ತಂಡ. ಜನರ ಗಮನ ಬೇರೆಡೆ ಸೆಳೆದು ಹಣ ದೋಚಿ ಪರಾರಿಯಾಗುತ್ತಿದ್ದ ಇವರು ವಿಚಿತ್ರ ಆಸಾಮಿಗಳು.
ಇಡೀ ಗ್ಯಾಂಗ್ ಕೆಲಸ ಜೊತೆಗೂಡಿ ಹಣ ದೋಚುವುದು. ಅದಕ್ಕೂ ಮೊದಲು ಶಾಸ್ತ್ರ ಕೇಳುತ್ತಿತ್ತು. ಒಂದು ವೇಳೆ ಶಾಸ್ತ್ರ ಹೇಳುವವರು ಬೇಡ ಎಂದರೆ ಹಣ ದೋಚುವ ಕಾರ್ಯಕ್ಕೆ ಹೋಗುತ್ತಿರಲಿಲ್ಲ. ಬ್ಯಾಂಕ್ಗೆ ಬರುವ ಜನರೇ ಇವರ ಮುಖ್ಯ ಟಾರ್ಗೆಟ್. ಇದುವರೆಗೆ ದಾವಣಗೆರೆ ಜಿಲ್ಲೆಯೊಂದರಲ್ಲೇ 13 ಪ್ರಕರಣಗಳಲ್ಲಿ ಬೇಕಾಗಿದ್ದ ದರೋಡೆಕೋರರು ಈಗ ಪೊಲೀಸರ ಅತಿಥಿಗಳು. 11 ಆರೋಪಿಗಳನ್ನು ಪೊಲೀಸರು ಬಂಧಿಸಿರುವುದೇ ರೋಚಕ ಕಥೆ.
ದಾವಣಗೆರೆ ಎಸ್ಪಿ ರಿಷ್ಯಂತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ದರೋಡೆ ಮಾಡುವ ತಂಡವನ್ನು ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಓಜಿ ಕುಪ್ಪಂನವರು. ತಂಡದಲ್ಲಿರುವ ಎಲ್ಲರೂ ಸಂಬಂಧಿಕರೇ.
ಗ್ಯಾಂಗ್ ವಾಸವಾಗಿದ್ದ ಊರಿನಲ್ಲೇ ಇವರನ್ನು ಬಂಧಿಸುವುದು ಅಷ್ಟು ಸುಲಭವಾಗಿರಲಿಲ್ಲ. ಯಾಕೆಂದರೆ ಅಲ್ಲಿ ಈ ಕಳ್ಳರು ಯಾರೂ ಇರುತ್ತಿರಲಿಲ್ಲ. ಮನೆಯಲ್ಲಿ ಮಹಿಳೆಯರು ಮಾತ್ರ ಇರುತ್ತಿದ್ದರು. ತಮಿಳುನಾಡು ಹಾಗೂ ಬೆಂಗಳೂರು ಪೊಲೀಸರು ಮೂವರಿಂದ ನಾಲ್ವರು ಆರೋಪಿಗಳನ್ನು ಮಾತ್ರ ಬಂಧಿಸಿದ್ದರು. ಆದರೆ ಇದೇ ಮೊದಲ ಬಾರಿಗೆ 11 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಯಾರಿಗೂ ಹಿಂಸೆ ಮಾಡುತ್ತಿರಲಿಲ್ಲ
ಜನರ ಗಮನ ಬೇರೆಡೆ ಸೆಳೆದು ಸಂಚು ರೂಪಿಸಿ ಹಣ ದೋಚುತ್ತಿದ್ದ ಖತರ್ನಾಕ್ ಗ್ಯಾಂಗ್ ಇದು. ಆದರೆ ಇವರು ತಮ್ಮ ಕೃತ್ಯದ ವೇಳೆ ಯಾರಿಗೂ ಹಿಂಸೆ ಮಾಡುತ್ತಿರಲಿಲ್ಲ. ಇಂತಹ 11 ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

22 ಲಕ್ಷ ಹಣ, 4 ಬೈಕ್ ವಶಕ್ಕೆ
ಆಂಧ್ರಪ್ರದೇಶದ ಓಜಿ ಕುಪ್ಪಂನ ನಾಗರಾಜ್, ಚಿನ್ನು, ಗೋಗುಲ, ಕೆ. ವೆಂಕಟೇಶ್, ಜಿ. ಸ್ಯಾಮ್ ಸನ್, ವಿನೋದ್, ಸತೀಶ್, ಪಿ. ಮೋಹನ್ ರಾವ್, ಕೆ. ಸುಬ್ರಮಣಿ, ಪಿ. ಸುಬ್ರಹ್ಮಣ್ಯ, ಪಿ. ವೆಂಕಟೇಶಲು ಬಂಧಿತ ಆರೋಪಿಗಳು. ಆರೋಪಿಗಳಿಂದ ಒಟ್ಟು 22 ಲಕ್ಷ ರೂಪಾಯಿ ನಗದು, 4 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಮಾಹಿತಿ ನೀಡಿದ ಎಸ್ಪಿ
"ಆಂಧ್ರ ಪ್ರದೇಶ, ತಮಿಳುನಾಡು ಸೇರಿದಂರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ದಾವಣಗೆರೆ ಜಿಲ್ಲೆಯ ಬಾತಿ ಗುಡ್ಡದಲ್ಲಿ ಮತ್ತೆ ಕೃತ್ಯ ಎಸಗುವ ಯೋಜನೆ ರೂಪಿಸಿದ್ದ ಬಗ್ಗೆ ಮಾಹಿತಿ ಪಡೆದ ಡಿವೈಎಸ್ಪಿ ಬಿ. ಎಸ್. ಬಸವರಾಜ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಇವರೆಲ್ಲರೂ ಸಂಬಂಧಿಕರು ಹಾಗೂ ಒಂದೇ ಊರಿನವರು" ಎಂದು ಎಸ್ಪಿ ರಿಷ್ಯಂತ್ ಹೇಳಿದ್ದಾರೆ.
Recommended Video

13 ಪ್ರಕರಣದಲ್ಲಿ ಬೇಕಾಗಿದ್ದರು
ದಾವಣಗೆರೆ ಜಿಲ್ಲೆಯಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚಿದ 13 ಪ್ರಕರಣಗಳಲ್ಲಿ ಬೇಕಾಗಿದ್ದ ಈ ಆರೋಪಿಗಳು ತಿಂಗಳಿಗೆ ಒಬ್ಬೊಬ್ಬರು 2 ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದರು. ಬಟ್ಟೆ ಮೇಲೆ ಬಣ್ಣ ಹಾಕುವುದು, ದುಡ್ಡು ಬೀಳಿಸಿ ಹಣ ದೋಚುವುದು, ಮೈಮೇಲೆ ಉಗಿಯುವುದು, ಕೆಸರು ಎರಚುವುದು ಸೇರಿದಂತೆ ಆರು ರೀತಿಯಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದರು. ಮಾತ್ರವಲ್ಲ ಶಾಸ್ತ್ರ ತುಂಬಾ ನಂಬುತ್ತಿದ್ದ ಇವರೆಲ್ಲರೂ ಜೂಜಾಡುವ ಚಟ ಹೊಂದಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications