ಶಾಸ್ತ್ರ ಕೇಳಿ ದರೋಡೆ ಮಾಡುತ್ತಿದ್ದ ಓಜಿ ಕುಪ್ಪಂ ಗ್ಯಾಂಗ್ ಸೆರೆ!
ದಾವಣಗೆರೆ, ಜುಲೈ 19; ಅದು ಅಂತಿಂಥ ಖತರ್ನಾಕ್ ಗ್ಯಾಂಗ್ ಅಲ್ಲ. ಸ್ವಲ್ಪ ಯಾಮಾರಿದರೂ ಹಣ ದೋಚುವಂಥ ತಂಡ. ಜನರ ಗಮನ ಬೇರೆಡೆ ಸೆಳೆದು ಹಣ ದೋಚಿ ಪರಾರಿಯಾಗುತ್ತಿದ್ದ ಇವರು ವಿಚಿತ್ರ ಆಸಾಮಿಗಳು.
ಇಡೀ ಗ್ಯಾಂಗ್ ಕೆಲಸ ಜೊತೆಗೂಡಿ ಹಣ ದೋಚುವುದು. ಅದಕ್ಕೂ ಮೊದಲು ಶಾಸ್ತ್ರ ಕೇಳುತ್ತಿತ್ತು. ಒಂದು ವೇಳೆ ಶಾಸ್ತ್ರ ಹೇಳುವವರು ಬೇಡ ಎಂದರೆ ಹಣ ದೋಚುವ ಕಾರ್ಯಕ್ಕೆ ಹೋಗುತ್ತಿರಲಿಲ್ಲ. ಬ್ಯಾಂಕ್ಗೆ ಬರುವ ಜನರೇ ಇವರ ಮುಖ್ಯ ಟಾರ್ಗೆಟ್. ಇದುವರೆಗೆ ದಾವಣಗೆರೆ ಜಿಲ್ಲೆಯೊಂದರಲ್ಲೇ 13 ಪ್ರಕರಣಗಳಲ್ಲಿ ಬೇಕಾಗಿದ್ದ ದರೋಡೆಕೋರರು ಈಗ ಪೊಲೀಸರ ಅತಿಥಿಗಳು. 11 ಆರೋಪಿಗಳನ್ನು ಪೊಲೀಸರು ಬಂಧಿಸಿರುವುದೇ ರೋಚಕ ಕಥೆ.
ದಾವಣಗೆರೆ ಎಸ್ಪಿ ರಿಷ್ಯಂತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ದರೋಡೆ ಮಾಡುವ ತಂಡವನ್ನು ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಓಜಿ ಕುಪ್ಪಂನವರು. ತಂಡದಲ್ಲಿರುವ ಎಲ್ಲರೂ ಸಂಬಂಧಿಕರೇ.
ಗ್ಯಾಂಗ್ ವಾಸವಾಗಿದ್ದ ಊರಿನಲ್ಲೇ ಇವರನ್ನು ಬಂಧಿಸುವುದು ಅಷ್ಟು ಸುಲಭವಾಗಿರಲಿಲ್ಲ. ಯಾಕೆಂದರೆ ಅಲ್ಲಿ ಈ ಕಳ್ಳರು ಯಾರೂ ಇರುತ್ತಿರಲಿಲ್ಲ. ಮನೆಯಲ್ಲಿ ಮಹಿಳೆಯರು ಮಾತ್ರ ಇರುತ್ತಿದ್ದರು. ತಮಿಳುನಾಡು ಹಾಗೂ ಬೆಂಗಳೂರು ಪೊಲೀಸರು ಮೂವರಿಂದ ನಾಲ್ವರು ಆರೋಪಿಗಳನ್ನು ಮಾತ್ರ ಬಂಧಿಸಿದ್ದರು. ಆದರೆ ಇದೇ ಮೊದಲ ಬಾರಿಗೆ 11 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಯಾರಿಗೂ ಹಿಂಸೆ ಮಾಡುತ್ತಿರಲಿಲ್ಲ
ಜನರ ಗಮನ ಬೇರೆಡೆ ಸೆಳೆದು ಸಂಚು ರೂಪಿಸಿ ಹಣ ದೋಚುತ್ತಿದ್ದ ಖತರ್ನಾಕ್ ಗ್ಯಾಂಗ್ ಇದು. ಆದರೆ ಇವರು ತಮ್ಮ ಕೃತ್ಯದ ವೇಳೆ ಯಾರಿಗೂ ಹಿಂಸೆ ಮಾಡುತ್ತಿರಲಿಲ್ಲ. ಇಂತಹ 11 ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

22 ಲಕ್ಷ ಹಣ, 4 ಬೈಕ್ ವಶಕ್ಕೆ
ಆಂಧ್ರಪ್ರದೇಶದ ಓಜಿ ಕುಪ್ಪಂನ ನಾಗರಾಜ್, ಚಿನ್ನು, ಗೋಗುಲ, ಕೆ. ವೆಂಕಟೇಶ್, ಜಿ. ಸ್ಯಾಮ್ ಸನ್, ವಿನೋದ್, ಸತೀಶ್, ಪಿ. ಮೋಹನ್ ರಾವ್, ಕೆ. ಸುಬ್ರಮಣಿ, ಪಿ. ಸುಬ್ರಹ್ಮಣ್ಯ, ಪಿ. ವೆಂಕಟೇಶಲು ಬಂಧಿತ ಆರೋಪಿಗಳು. ಆರೋಪಿಗಳಿಂದ ಒಟ್ಟು 22 ಲಕ್ಷ ರೂಪಾಯಿ ನಗದು, 4 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಮಾಹಿತಿ ನೀಡಿದ ಎಸ್ಪಿ
"ಆಂಧ್ರ ಪ್ರದೇಶ, ತಮಿಳುನಾಡು ಸೇರಿದಂರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ದಾವಣಗೆರೆ ಜಿಲ್ಲೆಯ ಬಾತಿ ಗುಡ್ಡದಲ್ಲಿ ಮತ್ತೆ ಕೃತ್ಯ ಎಸಗುವ ಯೋಜನೆ ರೂಪಿಸಿದ್ದ ಬಗ್ಗೆ ಮಾಹಿತಿ ಪಡೆದ ಡಿವೈಎಸ್ಪಿ ಬಿ. ಎಸ್. ಬಸವರಾಜ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಇವರೆಲ್ಲರೂ ಸಂಬಂಧಿಕರು ಹಾಗೂ ಒಂದೇ ಊರಿನವರು" ಎಂದು ಎಸ್ಪಿ ರಿಷ್ಯಂತ್ ಹೇಳಿದ್ದಾರೆ.
Recommended Video

13 ಪ್ರಕರಣದಲ್ಲಿ ಬೇಕಾಗಿದ್ದರು
ದಾವಣಗೆರೆ ಜಿಲ್ಲೆಯಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚಿದ 13 ಪ್ರಕರಣಗಳಲ್ಲಿ ಬೇಕಾಗಿದ್ದ ಈ ಆರೋಪಿಗಳು ತಿಂಗಳಿಗೆ ಒಬ್ಬೊಬ್ಬರು 2 ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದರು. ಬಟ್ಟೆ ಮೇಲೆ ಬಣ್ಣ ಹಾಕುವುದು, ದುಡ್ಡು ಬೀಳಿಸಿ ಹಣ ದೋಚುವುದು, ಮೈಮೇಲೆ ಉಗಿಯುವುದು, ಕೆಸರು ಎರಚುವುದು ಸೇರಿದಂತೆ ಆರು ರೀತಿಯಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದರು. ಮಾತ್ರವಲ್ಲ ಶಾಸ್ತ್ರ ತುಂಬಾ ನಂಬುತ್ತಿದ್ದ ಇವರೆಲ್ಲರೂ ಜೂಜಾಡುವ ಚಟ ಹೊಂದಿದ್ದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications