ಕೆಪಿಎಸ್ ಸಿ ಪರೀಕ್ಷೆ ಅಕ್ರಮ; ಒಟ್ಟು 14 ಆರೋಪಿಗಳ ಬಂಧನ
ದಾವಣಗೆರೆ, ಜುಲೈ 30: ಕೆಪಿಎಸ್ ಸಿ ಪ್ರವೇಶ ಪರೀಕ್ಷೆಯಲ್ಲಿ ನಡೆದ ಅಕ್ರಮದ ಕುರಿತು ತನಿಖೆ ಮುಂದುವರೆಯುತ್ತಿದೆ. ಈ ಹಿಂದೆ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಿದ್ದ ದಾವಣಗೆರೆ ಪೊಲೀಸರು, ಇದೀಗ ಮತ್ತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು ಜಲ ಮಂಡಳಿಯ ಸಹಾಯಕ-ಸಾಗರ್ ಕರ್ಕಿ, ಕಲಬುರಗಿ ರೇಷ್ಮೆ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಶೈಲ್ ಹಳ್ಳಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ಹಾವೇರಿ ಮೂಲದ ಮಾರುತಿ ಬಂಧಿತ ಆರೋಪಿಗಳು.
ಈ ಹಿಂದೆ 11 ಜನ ಮತ್ತು ಈಗ ಮೂವರು ಸೇರಿ ಈ ಪ್ರಕರಣದಲ್ಲಿ ಒಟ್ಟು 14 ಆರೋಪಿಗಳ ಬಂಧನವಾಗಿದೆ. ಈ ಅಕ್ರಮದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿ ಇದ್ದು, ಬಂಧಿತರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ದಾವಣಗೆರೆ ಅಪರಾಧ ವಿಭಾಗದ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

2017ರ ಅಕ್ಟೋಬರ್ನಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ದೈಹಿಕ ಶಿಕ್ಷಕರ ನೇಮಕಾತಿಗಾಗಿ ಕೆಪಿಎಸ್ಸಿ ಪರೀಕ್ಷೆ ನಡೆಸಿತ್ತು. ಆಗ ದಾವಣಗೆರೆಯ ನೂತನ ಕಾಲೇಜಿನಲ್ಲಿ ನಡೆದ ಪರೀಕ್ಷೆ ವೇಳೆ ಮೂವರು ಪರೀಕ್ಷಾರ್ಥಿಗಳು ಮೈಕ್ರೋ ಫೋನ್ಗಳನ್ನು ಬಳಸಿ ಪರೀಕ್ಷೆ ಬರೆಯುತ್ತಿದ್ದರು ಎಂದು ತಿಳಿದು ಬಂದಿತ್ತು. ಈ ವೇಳೆ ಪರೀಕ್ಷಾ ಮೇಲ್ವಿಚಾರಕರ ಕೈಗೆ ರೆಡ್ ಹ್ಯಾಂಡ್ ಆಗಿ ದಾವಣಗೆರೆ ತಾಲೂಕಿನ ಸುಭಾಷ್, ಶ್ರೀನಿವಾಸ್ ಹಾಗೂ ತಿಪ್ಪೇಶ್ ಎಂಬುವವರು ಸಿಕ್ಕಿಬಿದ್ದಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕಿಂಗ್ ಪಿನ್ ಆಗಿದ್ದ ರಾಮಚಂದ್ರಯ್ಯನನ್ನು 2018ರ ಜೂನ್ನಲ್ಲಿ ದಾವಣಗೆರೆ ಪೊಲೀಸರು ಬಂಧಿಸಿದ್ದರು. ರಾಮಚಂದ್ರಯ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿಯಾಗಿದ್ದು, ಈತನನ್ನು 420 ಕೇಸ್ನಲ್ಲಿ ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸರು ಬಂಧಿಸಿದ್ದರು.
ಒಟ್ಟಿನಲ್ಲಿ 2017ರಲ್ಲಿ ಕೆಪಿಎಸ್ಸಿ ಪರೀಕ್ಷಾ ವೇಳೆ ನಡೆದ ಅಕ್ರಮ ಸಾಕಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇನ್ನೂ ಹಲವು ಮಂದಿ ಈ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಹೀಗಾಗಿ, ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications