ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆಯಲ್ಲಿ ಚಿರತೆ ದಾಳಿಗೆ 25 ಕುರಿ ಮೇಕೆಗಳು ಬಲಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ನವೆಂಬರ್ 28; ಜಮೀನಿನಲ್ಲಿರುವ ಕುರಿ ಹಟ್ಟಿ ಮೇಲೆ ದಾಳಿ ನಡೆಸಿದ ಚಿರತೆಯು 25 ಮೇಕೆ ಮತ್ತು ಕುರಿಗಳನ್ನು ತಿಂದು ಹಾಕಿರುವ ಘಟನೆ ತಾಲೂಕಿನ ದಡಗಾರನಹಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.

ಹೊಳಲು ಗೋಣೆಪ್ಪ, ರಾಜಪ್ಪ ಎಂಬುವರಿಗೆ ಸೇರಿದ ಕುರಿ ಹಟ್ಟಿಗೆ ಚಿರತೆಗಳು ನುಗ್ಗಿ 18 ಕುರಿ ಮರಿಗಳು ಮತ್ತು 7 ಮೇಕೆಗಳನ್ನು ಕೊಂದುಹಾಕಿವೆ. ಬೆಳಿಗ್ಗೆ ಮಾಲೀಕ ರಾಜಪ್ಪ ಕುರಿ ಹಟ್ಟಿಯ ಬಳಿ ಹೋದಾಗ ಕುರಿ ಮತ್ತು ಮೇಕೆಗಳು ಮೃತಪಟ್ಟಿರುವುದನ್ನು ಕಂಡು ಕಂಗಲಾಗಿದ್ದಾರೆ.

ಮಂಡ್ಯದ ಮೇಲುಕೋಟೆ ಸಮೀಪ ಚಿರತೆಗಳ ಹಾವಳಿ: ಸ್ಥಳೀಯರಲ್ಲಿ ಆತಂಕಮಂಡ್ಯದ ಮೇಲುಕೋಟೆ ಸಮೀಪ ಚಿರತೆಗಳ ಹಾವಳಿ: ಸ್ಥಳೀಯರಲ್ಲಿ ಆತಂಕ

ಜೀವನಕ್ಕೆ ಆಧಾರವಾಗಿದ್ದ ಕುರಿಗಳು ಚಿರತೆ ಪಾಲಾಗಿದ್ದು, ಜೀವನ ನಡೆಸುವುದು ಕಷ್ಟವಾಗಿದೆ. ನಮಗೆ ಪರಿಹಾರ ನೀಡಬೇಕೆಂದು ಕುರಿಗಳ ಮಾಲೀಕರು ಅಧಿಕಾರಿಗಳಿಗೆ ಮನವಿ ಮಾಡಿದರು. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ನೀಡಲು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

Davanagere: 25 Sheeps And Goats Dies By Leopard Attack

ಪಶುವೈದ್ಯಾಧಿಕಾರಿ ಡಾ.ಶ್ರೀದೇವಿ ಕುರಿ ಮತ್ತು ಮೇಕೆಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ದಡಗಾರನಹಳ್ಳಿ, ಕಾಯಕದಹಳ್ಳಿ, ಶೃಂಗಾರತೋಟ, ಬಾಗಳಿ ಕೂಲಹಳ್ಳಿ ಕೋಡಿಹಳ್ಳಿ, ಕಣವಿಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮದ ರೈತರು ಹೊಲಗಳಿಗೆ ತೆರಳಲು ಭಯ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Recommended Video

Narendra Modi-ಬ್ರಿಟನ್ ಪ್ರಧಾನಿ Boris Johnson ಮಹತ್ವದ ಮಾತುಕತೆ | Oneindia Kannada

ಕೂಡಲೇ ಚಿರತೆಗಳನ್ನು ಸೆರೆ ಹಿಡಿಯಬೇಕೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಗಳಿ ಕೊಟ್ರೇಶಪ್ಪ, ರಾಜಪ್ಪ, ಬೀಚಿ ಅಭಿಮಾನಿ ಬಳಗದ ಅಧ್ಯಕ್ಷ ಶೃಂಗಾರದೋಟ ನಿಂಗರಾಜ್ ಒತ್ತಾಯಿಸಿದ್ದಾರೆ.

English summary
25 sheeps and goats dies by leopard attack in outskirts of Dadagaranahalli village in Davanagere,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X