ಪಾಲಿಕೆ ವ್ಯಾಪ್ತಿಯಲ್ಲಿ 254 ಸಿಸಿಟಿವಿ ಕ್ಯಾಮೆರಾ ಕಣ್ಗಾವಲು: ಏನೆಲ್ಲಾ ವಿಶೇಷತೆ ಇದೆ?
ದಾವಣಗೆರೆ, ನವೆಂಬರ್ 21: ಮಹಾನಗರ ವ್ಯಾಪ್ತಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರೇ ಹುಷಾರ್. ಯಾಕೆಂದರೆ ಮೂಲೆ ಮೂಲೆಯಲ್ಲಿಯೂ ಕಣ್ಗಾವಲು. ಸ್ಮಾರ್ಟ್ ಸಿಟಿ ವತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 109 ಕಡೆಗಳಲ್ಲಿ 254 ಸಿಸಿಟಿವಿ ಕ್ಯಾಮೆರಾ ಇರಲಿದೆ.
ಸ್ಮಾರ್ಟ್ ಸಿಟಿಯ ಮಾಹಿತಿ ಸಂವಹನ ತಂತ್ರಜ್ಞಾನ ವಿಭಾಗದ ವತಿಯಿಂದ ಅಳವಡಿಸುವ ಕಾರ್ಯ ನಡೆದಿದ್ದು, ಈ ಪೈಕಿ ಎರಡು ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಇರಲಿದೆ. ಒಂದು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಮಾನಿಟರ್ ಆಗುತ್ತಿದ್ದರೆ, ಮತ್ತೊಂದು ಸೆಂಟರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ.
ಪಾಲಿಕೆ, ಕೆಎಸ್ಆರ್ಟಿಸಿ, ಆ್ಯಂಬುಲೆನ್ಸ್, ಫೈರ್ ಸೇರಿದಂತೆ ಬೇರೆ ಬೇರೆ ವಿಭಾಗಗಳ ಕುರಿತ ಮಾನಿಟರಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಆಗಲಿದೆ. ಈ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರನ್ನು ಪತ್ತೆ ಹಚ್ಚುವ ಕಾರ್ಯ ಸುಲಭವಾಗಿ ಆಗಲಿದೆ.

ಆಟೋಮ್ಯಾಟಿಕ್ ನಂಬರ್ ಪ್ಲೇಟ್ ಪತ್ತೆ ಹಚ್ಚುವ ಕ್ಯಾಮೆರಾ ಅಳವಡಿಸಲಾಗಿದೆ. ಇದಕ್ಕೆ ಎಎನ್ಪಿಆರ್ ಕ್ಯಾಮೆರಾ ಎನ್ನಲಾಗುತ್ತದೆ. ನಗರಕ್ಕೆ ಬರುವ ಹಾಗೂ ಹೊರ ಹೋಗುವ ವಾಹನಗಳ ದೃಶ್ಯಾವಳಿ ಸೆರೆಯಾಗಲಿದೆ. ಕಳ್ಳತನ ಮಾಡಿದ ವಾಹನಗಳ ನಂಬರ್ ಪ್ಲೇಟ್ ಬದಲಾಯಿಸಿ ಹೋದರೂ ಗೊತ್ತಾಗಲಿದೆ. ಯಾವುದೇ ವಾಹನಗಳು ನಗರದೊಳಗೆ ಬಂದರೂ, ಹೊರಗಡೆ ಹೋದರೂ ಗೊತ್ತಾಗುತ್ತದೆ. ಕಳ್ಳತನ ಮಾಡಿದ ವಾಹನಗಳ ಪತ್ತೆ ಹಚ್ಚುವುದು ಸುಲಭ ಆಗುತ್ತದೆ.
ಸಿಗ್ನಲ್ ಜಂಪ್, ವೇಗವಾಗಿ ವಾಹನ ಚಾಲನೆ ಪತ್ತೆ
ಇನ್ನು ಸಿಗ್ನಲ್ ನಿಯಮ ಉಲ್ಲಂಘನೆ ಕಂಡು ಹಿಡಿಯುವುದಕ್ಕೂ ಕ್ಯಾಮೆರಾ ಅಳವಡಿಸಲಾಗಿದೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಿಗ್ನಲ್ ಜಂಪ್ ಮಾಡುವುದು ಸಹ ಪತ್ತೆ ಹಚ್ಚಬಹುದು. ವೇಗವಾಗಿ ವಾಹನ ಚಲಾಯಿಸುವುದನ್ನು ಪತ್ತೆ ಹಚ್ಚಲು ಆರು ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಬೈಕ್ 40 ಕಿಲೋಮೀಟರ್, ಕಾರು 60 ಕಿಲೋಮೀಟರ್ ವೇಗ ಇರಬೇಕು. ಹೆಚ್ಚಾದರೆ ಕ್ಯಾಮೆರಾದ ಮೂಲಕ ಪತ್ತೆ ಹಚ್ಚಿ ದಂಡ ವಿಧಿಸಬಹುದಾಗಿದೆ.
ಇನ್ನು ಟ್ರಾಫಿಕ್ ಸಮಸ್ಯೆ ಕುರಿತಂತೆ 23 ಕಡೆಗಳಲ್ಲಿ ಟ್ರಾಫಿಕ್ ನಿಯಂತ್ರಣ ಸಿಸ್ಟಂ ಅಂದರೆ ಟ್ರಾಫಿಕ್ ಜಂಕ್ಷನ್ ಅಳವಡಿಕೆ ಮಾಡಲಾಗಿದೆ. ಅದೇ ರೀತಿಯಲ್ಲಿ ಬೇರೆ ಕಡೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದ್ದರೆ ಸಮೀಪದಲ್ಲಿನ ಸಿಗ್ನಲ್ನಲ್ಲಿ ಮಾಹಿತಿ ಸಿಗಲಿದೆ.

ಇನ್ನು ಸ್ಮಾರ್ಟ್ ಸಿಟಿಯಲ್ಲಿನ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ಗೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಸದಸ್ಯ ಎ. ನಾಗರಾಜ್ ಭೇಟಿ ನೀಡಿ, ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಗಡಿಗುಡಾಳ್ ಮಂಜುನಾಥ್, ''ಸ್ಮಾರ್ಟ್ ಸಿಟಿ ವತಿಯಿಂದ ಸಿಸಿಟಿವಿ ಅಳವಡಿಕೆ ಮಾಡಿರುವುದರಿಂದ ವಾಹನ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಬೀಳಲಿದೆ. ಅಡ್ಡಾದಿಡ್ಡಿಯಾಗಿ, ವೇಗವಾಗಿ ವಾಹನ ಓಡಿಸುವವರಿಗೆ ದಂಡ ಬೀಳುವುದು ಖಚಿತ. ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಬೇಕು. ವಾಹನಗಳ ಕಳ್ಳತನಕ್ಕೂ ಬ್ರೇಕ್ ಬೀಳಲಿದೆ. ಸಿಸಿಟಿವಿ ಕಣ್ಗಾವಲು ಜೊತೆಗೆ ದಂಡವೂ ಬೀಳುತ್ತದೆ. ಆದ್ದರಿಂದ ಎಲ್ಲರೂ ಕಾನೂನು ಪಾಲನೆ ಮಾಡಿ. ಸುರಕ್ಷಿತ ವಾಹನ ಚಾಲನೆ ಮಾಡುವ ಮೂಲಕ ಪೊಲೀಸರಿಗೆ ಸಹಕರಿಸೋಣ'' ಎಂದು ಹೇಳಿದರು.
ಮಾಹಿತಿ, ಸಂವಹನ, ತಂತ್ರಜ್ಞಾನ ವಿಭಾಗದ ಡೆಪ್ಯೂಟಿ ಜನರಲ್ ಮ್ಯಾನೇಜರ್ ಮಮತಾ ಹಾಗೂ ಮ್ಯಾನೇಜರ್ ನಿಖಿಲ್ ಮತ್ತಿತರರು ಹಾಜರಿದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications