ಕೊಳೆತ ತರಕಾರಿ, ಬೂಸ್ಟ್ ಬಂದ ಬೇಳೆ: ಮಾಯಕೊಂಡ ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ ಶಾಸಕರ ಮುಂದೆ ಪ್ರಕಟ
ದಾವಣಗೆರೆ ಸೆಪ್ಟೆಂಬರ್ 06:ತರಕಾರಿ ಕೊಳೆತು ಹೋಗಿವೆ, ಬೇಳೆ ಬೂಸ್ಟ್ ಬಂದಿದೆ. ಟೊಮೊಟೊ, ನವಿಲು ಕೋಸು, ಮುಳಗಾಯಿ ಕೊಳೆತು ಹೋಗಿವೆ. ತರಕಾರಿಯಲ್ಲಿ ಹುಳ ಆಡುತ್ತಿವೆ. ಬೇಳೆಯಲ್ಲಿ ದಿನಿಯಾ ಬಿಟ್ಟರೆ ಏನೂ ಇಲ್ಲ. ನೀವು ಮನೆಯಲ್ಲಿ ಬಳಸುವ ಬೇಳೆ ಹಿಂಗೆ ಇರುತ್ತಾ? ಬೇಳೆಯಲ್ಲಿ ಗಂಧವೂ ಇಲ್ಲ, ಸುಹಾಸನೆಯೂ ಇಲ್ಲ. ಧಾನ್ಯ ಹಾಗೂ ತರಕಾರಿ ಪೂರೈಕೆ ಮಾಡಿರುವುದನ್ನು ಪರಿಶೀಲನೆ ಮಾಡಿದವರು ಯಾರು? ಮಕ್ಕಳು ಇದನ್ನು ತಿನ್ನಲು ಸಾಧ್ಯನಾ...?
ಇದು ಮಾಯಕೊಂಡದ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿದ ಮಾಯಕೊಂಡ ಶಾಸಕ ಕೆ. ಎಸ್. ಬಸವಂತಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿಯಾಗಿದೆ. 38ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಹಾಸ್ಟೆಲ್ಗೆ ಶಾಸಕ ಬಸವಂತಪ್ಪ ಭೇಟಿ ನೀಡಿದ್ದು, ಅವ್ಯವಸ್ಥೆಗಳೇ ಕಣ್ಮುಂದೆ ಅವರ ಬಂದವು. ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಭೇಟಿ ನೀಡಿದ ಬಸವಂತಪ್ಪ ಅವರು, ಹಾಸ್ಟೆಲ್ ದುಃಸ್ಥಿತಿಗೆ ಕಂಡು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಆರೋಗ್ಯಾಧಿಕಾರಿಗಳು ಸರಿಯಾಗಿ ಪರಿಶೀಲನೆ ನಡೆಸಿಲ್ಲ. ಇಲ್ಲಿಗೆ ಭೇಟಿ ನೀಡಿ ಯಾವ ರೀತಿ ಇದೆ ಎಂದು ನೋಡಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಬೇಳೆ, ತರಕಾರಿ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ಪರಿಶೀಲಿಸಿದ ಶಾಸಕರು, ಅಧಿಕಾರಿಗಳಿಗೆ ಇದರ ವಾಸನೆ ನೋಡಿ ಎಂದ್ರು. ಮಾತ್ರವಲ್ಲ, ಹುಳ ಹಿಡಿದಿದ್ದ ತರಕಾರಿ ತೋರಿಸಿ ನೋಡಿ ಇಂಥದ್ದನ್ನು ಮಕ್ಕಳು ಸೇವಿಸಲು ಆಗುತ್ತಾ? ಹಾಸ್ಟೆಲ್ ವಾರ್ಡನ್ ಬದಲಾವಣೆ ಮಾಡಿ ಎಂದು ಹೇಳಿದ್ದರೂ ಇದುವರೆಗೆ ಕ್ರಮ ಆಗಿಲ್ಲ. ಯಾಕೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೊದಲು ಹಾಸ್ಟೆಲ್ ವಾರ್ಡನ್ ವಿರುದ್ಧ ಕ್ರಮ ಆಗಲೇಬೇಕು. ಕೂಡಲೇ ಸಸ್ಪೆಂಡ್ ಮಾಡಿ ಎಂದು ಶಾಸಕರು ಹೇಳುತ್ತಿದ್ದಂತೆ ಸ್ಥಳದಲ್ಲಿದ್ದವರು, ಇದರಲ್ಲಿ ಯಾವ ರಾಜಕೀಯವೂ ಬೇಡ. ವಾರ್ಡನ್ ಹಾಗೂ ಸಿಬ್ಬಂದಿಯನ್ನು ಬದಲಾಯಿಸಿ ಎಂದು ಹೇಳಿದರು. ಅಧಿಕಾರಿಗಳು ಸಹ ಕೊಳೆತು ಹೋದ ತರಕಾರಿ, ಧಾನ್ಯಗಳು ಹಾಗೂ ಅವ್ಯವಸ್ಥೆಯನ್ನು ನೋಡಿದರಲ್ಲದೇ, ಸೂಕ್ತ ಕ್ರಮದ ಭರವಸೆ ನೀಡಿದರು.

ಬೇಳೆಯಲ್ಲಿ ಗಂಧವೂ ಇಲ್ಲ, ಸುವಾಸನೆಯನೂ ಇಲ್ಲ. ಅಧಿಕಾರಿಗಳು ತಮ್ಮ ಮನೆಗೆ ಖರೀದಿಸಿಕೊಂಡು ಹೋಗುವ ಬೇಳೆ ಘಮ ಘಮ ಎನ್ನುತ್ತದೆ. ಮಕ್ಕಳು ಸೇವಿಸುವ ಈ ಬೆೇಳೆ ನೋಡಿದರೆ ದನಿಯಾ ಬಿಟ್ಟರೆ ಏನೂ ಇಲ್ಲ. ಮಸಾಲೆ ಪದಾರ್ಥವೂ ಸರಿಯಿಲ್ಲ. ಈ ರೀತಿಯಾದ ಅಡುಗೆ ಮಾಡಿದರೆ ಮಕ್ಕಳು ಸೇವಿಸುವುದಾದರೂ ಹೇಗೆ?
150 ಮಕ್ಕಳು ಇಲ್ಲಿದ್ದಾರೆ. ಕೇವಲ 4 ಕೆಜಿ ಬೇಳೆ ತಿಂಗಳಿಗೆ ಸಾಕಾಗುತ್ತಾ? ಅಥವಾ ಒಂದು ದಿನಕ್ಕೆ ಸಾಕಾ? ಸರ್ಕಾರ ಎಲ್ಲಾ ರೀತಿಯ ನೆರವು ನೀಡುತ್ತಿದೆ. ಮಕ್ಕಳ ವಸತಿ, ಉಟೋಪಾಚಾರಕ್ಕೆ ಹಣ ಖರ್ಚು ಮಾಡುತ್ತದೆ. ಇಲ್ಲಿಗೆ ಪೂರೈಕೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಸ್ಟೆಲ್ನಲ್ಲಿ ವ್ಯವಸ್ಥೆ ನೋಡಿದ ಬಳಿಕ ಅಸಮಾಧಾನ ವ್ಯಕ್ತಪಡಿಸಿದ ಬಸವಂತಪ್ಪ ಅವರು, ಹಾಸ್ಟೆಲ್ ಶುಚಿಯಾಗಿರಬೇಕು. ಗುಣಮಟ್ಟದ ಆಹಾರಧಾನ್ಯಗಳು, ತರಕಾರಿ ಬೆಳೆಸಬೇಕು. ಫ್ರೆಶ್ ಆದ ತರಕಾರಿ ಉಪಯೋಗಿಸಲು ಏನಾಗಿದೆ? ಇನ್ನು ಮುಂದೆ ಈ ರೀತಿಯ ಅವ್ಯವಸ್ಥೆ ಕಂಡು ಬಂದರೆ ಸಹಿಸುವ ಪ್ರಶ್ನೆಯೇ ಇಲ್ಲ. ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡಿ ಆಗಾಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.
ಮೊರಾರ್ಜಿ ವಸತಿ ಶಾಲೆಯ 38 ವಿದ್ಯಾರ್ಥಿಗಳು ಅಸ್ವಸ್ಥ
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ 38 ಮಕ್ಕಳು ಅಸ್ವಸ್ಥರಾಗಿದ್ದು, ಈ ಪೈಕಿ 15 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಸಿಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸ್ಟೆಲ್ನಲ್ಲಿನ ಕುಡಿಯುವ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ವಿದ್ಯಾರ್ಥಿನಿಯರು ಅಸ್ವಸ್ಥರಾದ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಇಲ್ಲಿನ ಕುಡಿಯಲು ನೀರು ಯೋಗ್ಯವಾಗಿದೆಯೋ ಅಥವಾ ಇಲ್ಲವೋ ಎಂಬ ಕುರಿತಂತೆ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು. ವರದಿ ಬಂದಿದ್ದು, ಕುಡಿಯಲು ನೀರು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ. ಜೊತೆಗೆ ಫುಡ್ ಪಾಯಿಸನ್ ಆಗಿರುವುದೂ ಸಹ ಗೊತ್ತಾಗಿದ್ದು, ಈ ಎರಡು ಕಾರಣಗಳಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಹೂಕೋಸಿನ ಸಾಂಬಾರು ಮಾಡಲಾಗಿತ್ತು. ರಾತ್ರಿ ಈ ಸಾಂಬಾರು ಹಾಗೂ ಅನ್ನ ಊಟ ಮಾಡಿದ್ದರು. ಕಳೆದ ಭಾನುವಾರ ಚಿಕನ್ ಸಾಂಬಾರು ಮಾಡಲಾಗಿತ್ತು. ಆ ಸಾಂಬಾರನ್ನು ಅಂದು ಮತ್ತು ಮಾರನೇ ದಿನವೂ ವಿದ್ಯಾರ್ಥಿಗಳು ಸೇವಿಸಿದ್ದರು. ಜೊತೆಗೆ ರಾತ್ರಿ ಮಾಡಿದ್ದ ಹೂಕೋಸಿನ ಸಾಂಬಾರು ಹಾಗೂ ಬೆಳಿಗ್ಗೆ ಪುಳಿಯೊಗರೆ ಸೇವಿಸಿದ್ದ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ವಾಂತಿ, ಬೇಧಿ ಮಾಡಿಕೊಳ್ಳಲು ಶುರು ಮಾಡಿದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದರು.
32 ವಿದ್ಯಾರ್ಥಿಗಳಿಗೆ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಚೇತರಿಸಿತೊಂಡಿದ್ದು, ಯಾವುದೇ ಅಪಾಯ ಇಲ್ಲ. ವಿಷಾಹಾರ ಹಾಗೂ ನೀರು ಸೇವನೆ ಕಾರಣದಿಂದ ವಿದ್ಯಾರ್ಥಿಗಳು ಸುಸ್ತಾಗಿದ್ದಾರೆ. ಸದ್ಯಕ್ಕೆ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಆರು ವಿದ್ಯಾರ್ಥಿಗಳು ಮಾತ್ರ ತೀವ್ರವಾಗಿ ಸುಸ್ತಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆಯ ಸಿ. ಜೆ. ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ವಿದ್ಯಾರ್ಥಿಗಳು ಸಹ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications