ದಾವಣಗೆರೆಯಲ್ಲಿ 6 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ: ಡಿಸಿ ಮಾಹಿತಿ
ದಾವಣಗೆರೆ, ಮೇ 18: ದಾವಣಗೆರೆ ಜಿಲ್ಲೆಯಲ್ಲಿ ಆರು ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ.
ಸದ್ಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ 1, ಎಸ್ಎಸ್ ಆಸ್ಪತ್ರೆಯಲ್ಲಿ 1 ಹಾಗೂ ಬಾಪೂಜಿ ಆಸ್ಪತ್ರೆಯಲ್ಲಿ 4 ರೋಗಿಗಳಿದ್ದು, ಬ್ಲ್ಯಾಕ್ ಫಂಗಸ್ ಪ್ರಕರಣಗಳಿಗೆ ಸೂಕ್ತ ಚಿಕಿತ್ಸಾ ವಿಧಾನ ಹಾಗೂ ಔಷಧಿ ಸದ್ಯ ಜಿಲ್ಲೆಯಲ್ಲಿ ಲಭ್ಯವಿಲ್ಲ ಎಂದು ಸಿಎಂ ಜೊತೆ ನಡೆದ ವಿಡಿಯೋ ಸಂವಾದದ ವೇಳೆ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ, ಅಲ್ಲದೆ ಅಧಿಕಾರಿಗಳು, ವೈದ್ಯರ ಪರಿಶ್ರಮದಿಂದ ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ರೆಮ್ಡೆಸಿವರ್ ಔಷಧಿ ಸರ್ಕಾರಿ ಆಸ್ಪತ್ರೆಗಳಿಗಾಗಿ ಸಮರ್ಪಕವಾಗಿ ಜಿಲ್ಲೆಗೆ ಪೂರೈಕೆಯಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಇದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5.32 ಲಕ್ಷ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿತ್ಯ ಸರಾಸರಿ 2 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ರಾಜ್ಯದ ಸರಾಸರಿಗೆ ಹೋಲಿಸಿದಾಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇದೆ. ಆದರೂ ಜಿಲ್ಲೆಯಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸಲಾಗುತ್ತಿದೆ. 2ನೇ ಅಲೆ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 48 ಜನರು ಮೃತಪಟ್ಟಿದ್ದು, ಐಎಲ್ಐ ಪ್ರಕರಣಗಳು ಸೇರಿ ಒಟ್ಟು 78 ಸಾವು ಸಂಭವಿಸಿದೆ. ಜಿಲ್ಲೆಯಲ್ಲಿ ಸದ್ಯ 3656 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್ನ 6 ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಸುಧಾಕರ್ ಅವರು, ಬ್ಲ್ಯಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ ಶಿವಮೊಗ್ಗ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು ಹಾಗೂ ಮೈಸೂರಿನಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಗುರುವಾರದಿಂದ ಪ್ರಾರಂಭವಾಗಲಿದ್ದು, ಅದರನ್ವಯ ರೋಗಿಗಳನ್ನು ಸಮೀಪದ ಜಿಲ್ಲೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ವಿವಿಧ ಸ್ವಾಮೀಜಿಗಳು ಕೂಡ ಸಹಕಾರ ನೀಡುತ್ತಿದ್ದು, ಈಗಾಗಲೇ ತರಳಬಾಳು ಜಗದ್ಗುರುಗಳು ನಗರದಲ್ಲಿ ಹಾಸ್ಟೆಲ್ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ ಹಳೆ ದಾವಣಗೆರೆ ಭಾಗದಲ್ಲಿಯೂ ಕೂಡ ತಾಜ್ ಪ್ಯಾಲೇಸ್, ಇಲ್ಲಿನ ನರ್ಸಿಂಗ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
Recommended Video
ಜಿಲ್ಲೆಗೆ ಹೆಚ್ಚುವರಿಯಾಗಿ 2 ಕೆಎಲ್ ಆಕ್ಸಿಜನ್ ಹಂಚಿಕೆಯಾಗಿದೆ. ಮಹಾನಗರಪಾಲಿಕೆಯಿಂದ 60 ಆಕ್ಸಿಜನ್ ಕಾನ್ಸಟ್ರೇಟರ್ಸ್ ಗಳನ್ನು ನೀಡಲಾಗಿದ್ದು, ಸಂಸದರು ತಮ್ಮ ಟ್ರಸ್ಟ್ ವತಿಯಿಂದ ಹರಿಹರ ಹಾಗೂ ಜಗಳೂರಿನಲ್ಲಿ ಆಕ್ಸಿಜನ್ ಘಟಕ ಹಾಗೂ ಚನ್ನಗಿರಿ ಶಾಸಕರು ಕೆಎಸ್ಎಸ್ಡಿಎಲ್ ವತಿಯಿಂದ ಚನ್ನಗಿರಿಯಲ್ಲಿ ಆಕ್ಸಿಜನ್ ಘಟಕ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದರು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications