ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಏಳು ವರ್ಷ ಶಿಕ್ಷೆ
ದಾವಣಗೆರೆ, ಸೆಪ್ಟೆಂಬರ್ 8: ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವ ಉದ್ದೇಶದಿಂದ ಅಪಹರಿಸಿ, ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ ಮೂವತ್ತು ಸಾವಿರ ರುಪಾಯಿ ದಂಡ ವಿಧಿಸಿ ಬುಧವಾರ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಲ್ಲಿನ ಎರಡನೇ ಹೆಚ್ಚುವರಿ ಸೆಷನ್ಸ್ ಮತ್ತು ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯ್ದೆ ಅಡಿ ಈ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ. ಜಾಗೃತ ಮಹಿಳಾ ಸಂಘದ ಆಪ್ತ ಸಮಾಲೋಚಕ ಗೋವಿಂದರಾಜು ಅವರು ಬಾಲಕಿ ಅಪಹರಣದ ಬಗ್ಗೆ 2014 ರ ಅಕ್ಟೋಬರ್ 23ರಂದು ದೂರು ದಾಖಲಿಸಿದ್ದರು. ಬೆಂಗಳೂರಿನಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿದ ಪೊಲೀಸರು ನಗರಕ್ಕೆ ವಾಪಸ್ ಕರೆತಂದಿದ್ದರು.[ಚಿರತೆಗೆ ವಿಷಪ್ರಾಶನ: ಇಬ್ಬರು ಆರೋಪಿಗಳ ಬಂಧನ]

ಆರೋಪಿಯು ನನಗೆ ಲೈಂಗಿಕ ದೌರ್ಜನ್ಯ ನೀಡಿದ ಎಂದು ಬಾಲಕಿ ಹೇಳಿಕೆ ನೀಡಿದ್ದಳು. ಅದರ ಆಧಾರದಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಅರ್ಜುಮನ್ ಬಾನು ಆರೋಪಿಯ ವಿರುದ್ಧ ಬಾಲಕಿ ಅಪಹರಣ ಹಾಗೂ ಪೋಕ್ಸೊ ಕಾಯ್ದೆಯಡಿ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು, ಅಪಹರಣ ಪ್ರಕರಣದಲ್ಲಿ ನಾಲ್ಕು ವರ್ಷ ಸಾದಾ ಜೈಲು ಶಿಕ್ಷೆ, ಹತ್ತು ಸಾವಿರ ರುಪಾಯಿ ದಂಡ ಹಾಗೂ ಪೋಕ್ಸೋ ಕಾಯ್ದೆಯಡಿ ಒಟ್ಟಾರೆ ಏಳು ವರ್ಷ ಶಿಕ್ಷೆ, ಇಪ್ಪತ್ತು ಸಾವಿರ ರುಪಾಯಿ ದಂಡ ವಿಧಿಸಿದರು.
ದಂಡದ ಮೊತ್ತದಲ್ಲಿ ಸಂತ್ರಸ್ತ ಬಾಲಕಿಗೆ ಇಪ್ಪತ್ತೈದು ಸಾವಿರ ರುಪಾಯಿ ಪರಿಹಾರ ನೀಡುವಂತೆ ಆದೇಶಿಸಲಾಯಿತು.
Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ
ಇಬ್ಬರ ಸಾವು: ಮನೆಯ ಅಂಗಳದಲ್ಲಿ ಕುಡಿಯುವ ನೀರಿನ ತೊಟ್ಟಿಯ ಸೆಂಟ್ರಿಂಗ್ ತೆಗೆಯುವಾಗ ಇಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥರಾದ ಘಟನೆ ದಾವಣಗೆರೆಯ ಶಿವಕುಮಾರಸ್ವಾಮಿ ಲೇಔಟ್ ನಲ್ಲಿ ಬುಧವಾರ ಸಂಭವಿಸಿದೆ.[ಬೆಳಗಾವಿ ಯುವತಿ ಮೇಲೆ ಎರಡು ತಿಂಗಳು ಅತ್ಯಾಚಾರ]
ಕುಂದವಾಡದ ರಾಜೇಂದ್ರ, ಚಂದ್ರಪ್ಪ, ರಾಜೇಂದ್ರ ಮೃತಪಟ್ಟವರು. ರಾಜೇಂದ್ರ ಬಡಾವಣೆಯ ಶಿವಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕೆಟಿಜೆ ನಗರ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications