ದಾವಣಗೆರೆಯಲ್ಲಿ ಎಂಟು ವರ್ಷದ ತನ್ಮಯಿ ಡೆಂಗ್ಯೂಗೆ ಬಲಿ
ದಾವಣಗೆರೆ, ಸೆಪ್ಟೆಂಬರ್ 2: ಇಲ್ಲಿನ ಪಿಜೆ ಬಡಾವಣೆಯ ಪಿಸಾಳೆ ಕಾಂಪೌಂಡ್ ನ ಅನಿಲ್ ಹಾಗೂ ಆಶಾ ದಂಪತಿಯ ಪುತ್ರ, ಎಂಟು ವರ್ಷದ ಬಾಲಕ ತನ್ಮಯಿ ಶುಕ್ರವಾರ ಡೆಂಗ್ಯೂಗೆ ಬಲಿಯಾಗಿದ್ದಾನೆ. ಬಚಪನ್ ಶಾಲೆಯಲ್ಲಿ ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದ ಆತನನ್ನು ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಾಲ್ಕು ದಿನಗಳಿಂದ ತನ್ಮಯಿಗೆ ಜ್ವರ ಇತ್ತು. ಆತನನ್ನು ಕುಟುಂಬ ವೈದ್ಯರ ಬಳಿ ತೋರಿಸಲಾಗಿತ್ತು. ಚಿಕಿತ್ಸೆ ಪಡೆದ ನಂತರ ಸ್ವಲ್ಪ ಸುಧಾರಿಸಿಕೊಂಡಿದ್ದ. ಆದರೆ ಮತ್ತೆ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಶುಕ್ರವಾರ ಸಂಜೆ ನಾಲ್ಕು ಗಂಟೆ ಹೊತ್ತಿಗೆ ಬಾಪೂಜಿ ಆಸ್ಪತ್ರೆಗೆ ಸೇರಿಸಲಾಗಿತ್ತು. ರಾತ್ರಿ ಹತ್ತು ಗಂಟೆವರೆಗೆ ಮಾತನಾಡಿಕೊಂಡಿದ್ದ ತನ್ಮಯಿ ರಕ್ತದೊತ್ತಡ ಕಡಿಮೆ ಆಗಿದೆ.

ರಾತ್ರಿ 11.45ರ ಹೊತ್ತಿಗೆ ಆತ ತೀರಿಕೊಂಡಿದ್ದಾನೆ. ತನ್ಮಯಿ ಸಂಬಂಧಿಕರೊಬ್ಬರ ಈ ಬಗ್ಗೆ ಮಾತನಾಡಿದ್ದು, ಮದುವೆಯಾದ ಹನ್ನೆರಡು ವರ್ಷದ ನಂತರ ಹುಟ್ಟಿದ ಮಗು ಅದು. ಒಬ್ಬನೇ ಮಗ ಹೀಗೆ ತೀರಿಕೊಂಡಿದ್ದಾನೆ. ಆ ದಂಪತಿಯ ಸ್ಥಿತಿ ನೋಡಲಿಕ್ಕೆ ಆಗುತ್ತಿಲ್ಲ ಎಂದು ಗದ್ಗದಿತರಾದರು. ವೈಕುಂಠ ಟ್ರಸ್ಟ್ ನಲ್ಲಿ ತನ್ಮಯಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications