ದಾವಣಗೆರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ದಾವಣಗೆರೆ, ಫೆಬ್ರವರಿ, 28: ಸಾಮಾನ್ಯವಾಗಿ ಅವಳಿ ಮಕ್ಕಳಿಗೆ ಜನ್ಮ ನೀಡಿರುವುದನ್ನು ಕೇಳಿರುತ್ತೇವೆ. ಆದರೆ, ಇದೀಗ ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ವರ್ಲಹಳ್ಳಿಯ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಚಾಮರಾಜಪೇಟೆಯಲ್ಲಿರುವ ಮಹಿಳೆಯರ ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರ್ಲಹಳ್ಳಿಯ ಅನಿತಾ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಎರಡು ಗಂಡು, ಒಂದು ಹೆಣ್ಣು ಮಗು ಜನಿಸಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು ಇದೇ ಮೊದಲು. ನಾಲ್ಕೈದು ವರ್ಷಗಳಿಂದ ಈ ದಂಪತಿಗೆ ಮಕ್ಕಳು ಆಗಿರಲಿಲ್ಲ. ಇತ್ತೀಚೆಗಷ್ಟೇ ಗರ್ಭ ಧರಿಸಿದ್ದಾಗ ಸ್ಕ್ಯಾನ್ ಮಾಡಲಾಗಿತ್ತು. ಆಗ ಗರ್ಭದಲ್ಲಿ ಮೂರು ಮಕ್ಕಳಿರುವುದು ತಿಳಿದುಬಂದಿತ್ತು. ಈ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದೆವು. ಕಳೆದ ದಿನ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಿದರು.
ಅಲ್ಲದೆ, ನಾವು ಸಹಜ ಹೆರಿಗೆ ಮಾಡಿಸುವ ಉದ್ದೇಶ ಹೊಂದಿದ್ದೆವು. ಆದರೆ ಒಂದು ಮಗುವಿನ ಪೊರೆ ಒಡೆದು ಹೋಗಿ ಶೌಚ ಮಾಡಿಕೊಂಡಿದ್ದರಿಂದ ಹಿರಿಯ ಪ್ರಸೂತಿ ತಜ್ಞರಿಂದ ಮಾಹಿತಿ ಪಡೆದು, ಸಿಸೇರಿಯನ್ ಮಾಡಿ ಮಕ್ಕಳನ್ನು ಹೊರತೆಗೆದಿದ್ದೇವೆ. ಇದೇ ಮೊದಲ ಬಾರಿ ಇಂತಹ ಕೇಸ್ ನೋಡಿದ್ದೇನೆ ಎಂದು ಡಾ.ಮಹೇಶ್ ಹೇಳಿದ್ದಾರೆ.
ನವಜಾತ ಶಿಶುಗಳು ಆರೋಗ್ಯಕರವಾಗಿದ್ದು, ಉತ್ತಮ ತೂಕ ಹೊಂದಿವೆ. ಒಂದು ಮಗು 1 ಕೆಜಿ 900 ಗ್ರಾಂ, ಎರಡನೇ ಮಗು 1 ಕೆಜಿ 800 ಗ್ರಾಂ, ಮೂರನೇ ಮಗು 1 ಕೆಜಿ 600 ಗ್ರಾಂ ಇದೆ ಎಂದು ತಿಳಿಸಿದರು. ಹಿರಿಯ ಮಕ್ಕಳ ತಜ್ಞೆ ಡಾ.ಸುಧಾ ಪಾಟೀಲ್ ಮಾತನಾಡಿ, ನನದೆ ಇದು 5ನೇ ಅಪರೂಪದ ಘಟನೆಯಾಗಿದೆ. ಮಕ್ಕಳಿಗೆ ಒಳ್ಳೆಯ ಔಷಧ ನೀಡಿದ್ದು, ಆರೋಗ್ಯವಾಗಿವೆ ಎಂದು ಹೇಳಿದರು ಅಂತಾ ಈ ಟಿವಿ ಭಾರತ್ ಕನ್ನಡ ವರದಿ ಮಾಡಿದೆ.
ಅಲ್ಲದೆ, ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ ಅನಿತಾ ಅವರೂ ಕೂಡ ಆರೋಗ್ಯವಾಗಿದ್ದಾರೆ. ಮಕ್ಕಳು ಚೆನ್ನಾಗಿ ಉಸಿರಾಡುತ್ತಿವೆ. ಸ್ತನ್ಯಪಾನ ಮಾಡಿಸುವಂತೆ ತಾಯಿಗೆ ಧೈರ್ಯ ತುಂಬಿದ್ದೇವೆ. ಅವರಿಗೆ ಮನೆಯವರ ಸಹಕಾರ ಸಂಪೂರ್ಣವಾಗಿದೆ ಎಂದು ಹೇಳಿದರು. ಒಟ್ಟಿನಲ್ಲಿ ವೈದ್ಯರು ಹೇಳುವ ಪ್ರಕಾರ ಇಂತಹ ಪ್ರಕರಣಗಳು ಆಗುವುದು ಅಪರೂಪ. ಹಾಗೂ ಇದು ಅದೃಷ್ಟ ಎಂದು ಹೇಳಿದರೆ ತಪ್ಪಾಗಲಾರದು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications