ದಾವಣಗೆರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ದಾವಣಗೆರೆ, ಫೆಬ್ರವರಿ, 28: ಸಾಮಾನ್ಯವಾಗಿ ಅವಳಿ ಮಕ್ಕಳಿಗೆ ಜನ್ಮ ನೀಡಿರುವುದನ್ನು ಕೇಳಿರುತ್ತೇವೆ. ಆದರೆ, ಇದೀಗ ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ವರ್ಲಹಳ್ಳಿಯ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಚಾಮರಾಜಪೇಟೆಯಲ್ಲಿರುವ ಮಹಿಳೆಯರ ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರ್ಲಹಳ್ಳಿಯ ಅನಿತಾ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಎರಡು ಗಂಡು, ಒಂದು ಹೆಣ್ಣು ಮಗು ಜನಿಸಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು ಇದೇ ಮೊದಲು. ನಾಲ್ಕೈದು ವರ್ಷಗಳಿಂದ ಈ ದಂಪತಿಗೆ ಮಕ್ಕಳು ಆಗಿರಲಿಲ್ಲ. ಇತ್ತೀಚೆಗಷ್ಟೇ ಗರ್ಭ ಧರಿಸಿದ್ದಾಗ ಸ್ಕ್ಯಾನ್ ಮಾಡಲಾಗಿತ್ತು. ಆಗ ಗರ್ಭದಲ್ಲಿ ಮೂರು ಮಕ್ಕಳಿರುವುದು ತಿಳಿದುಬಂದಿತ್ತು. ಈ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದೆವು. ಕಳೆದ ದಿನ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಿದರು.
ಅಲ್ಲದೆ, ನಾವು ಸಹಜ ಹೆರಿಗೆ ಮಾಡಿಸುವ ಉದ್ದೇಶ ಹೊಂದಿದ್ದೆವು. ಆದರೆ ಒಂದು ಮಗುವಿನ ಪೊರೆ ಒಡೆದು ಹೋಗಿ ಶೌಚ ಮಾಡಿಕೊಂಡಿದ್ದರಿಂದ ಹಿರಿಯ ಪ್ರಸೂತಿ ತಜ್ಞರಿಂದ ಮಾಹಿತಿ ಪಡೆದು, ಸಿಸೇರಿಯನ್ ಮಾಡಿ ಮಕ್ಕಳನ್ನು ಹೊರತೆಗೆದಿದ್ದೇವೆ. ಇದೇ ಮೊದಲ ಬಾರಿ ಇಂತಹ ಕೇಸ್ ನೋಡಿದ್ದೇನೆ ಎಂದು ಡಾ.ಮಹೇಶ್ ಹೇಳಿದ್ದಾರೆ.
ನವಜಾತ ಶಿಶುಗಳು ಆರೋಗ್ಯಕರವಾಗಿದ್ದು, ಉತ್ತಮ ತೂಕ ಹೊಂದಿವೆ. ಒಂದು ಮಗು 1 ಕೆಜಿ 900 ಗ್ರಾಂ, ಎರಡನೇ ಮಗು 1 ಕೆಜಿ 800 ಗ್ರಾಂ, ಮೂರನೇ ಮಗು 1 ಕೆಜಿ 600 ಗ್ರಾಂ ಇದೆ ಎಂದು ತಿಳಿಸಿದರು. ಹಿರಿಯ ಮಕ್ಕಳ ತಜ್ಞೆ ಡಾ.ಸುಧಾ ಪಾಟೀಲ್ ಮಾತನಾಡಿ, ನನದೆ ಇದು 5ನೇ ಅಪರೂಪದ ಘಟನೆಯಾಗಿದೆ. ಮಕ್ಕಳಿಗೆ ಒಳ್ಳೆಯ ಔಷಧ ನೀಡಿದ್ದು, ಆರೋಗ್ಯವಾಗಿವೆ ಎಂದು ಹೇಳಿದರು ಅಂತಾ ಈ ಟಿವಿ ಭಾರತ್ ಕನ್ನಡ ವರದಿ ಮಾಡಿದೆ.
ಅಲ್ಲದೆ, ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ ಅನಿತಾ ಅವರೂ ಕೂಡ ಆರೋಗ್ಯವಾಗಿದ್ದಾರೆ. ಮಕ್ಕಳು ಚೆನ್ನಾಗಿ ಉಸಿರಾಡುತ್ತಿವೆ. ಸ್ತನ್ಯಪಾನ ಮಾಡಿಸುವಂತೆ ತಾಯಿಗೆ ಧೈರ್ಯ ತುಂಬಿದ್ದೇವೆ. ಅವರಿಗೆ ಮನೆಯವರ ಸಹಕಾರ ಸಂಪೂರ್ಣವಾಗಿದೆ ಎಂದು ಹೇಳಿದರು. ಒಟ್ಟಿನಲ್ಲಿ ವೈದ್ಯರು ಹೇಳುವ ಪ್ರಕಾರ ಇಂತಹ ಪ್ರಕರಣಗಳು ಆಗುವುದು ಅಪರೂಪ. ಹಾಗೂ ಇದು ಅದೃಷ್ಟ ಎಂದು ಹೇಳಿದರೆ ತಪ್ಪಾಗಲಾರದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications