ದಾವಣಗೆರೆ: ಹರಪನಹಳ್ಳಿ ತಾಲ್ಲೂಕು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು: ಆರೋಪ
ದಾವಣಗೆರೆ, ಜೂನ್, 14: ಸಿಸೇರಿಯನ್ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಎರಡೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟ ಘಟನೆ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಮೃತ ಬಾಣಂತಿಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ದುರ್ಗಮ್ಮ (21) ಎಂಬವವರು ಮೃತ ಬಾಣಂತಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣವೇ ಹತ್ತಿರದ ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿಸಿದ್ದು, ಹರಪನಹಳ್ಳಿ ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ಹೆಣ್ಣು ಮಗು ಜನಿಸಿದ್ದು, ಬಳಿಕ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆರಿಗೆಗಾಗಿ ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ಮಗಳನ್ನು ದಾಖಲು ಮಾಡಿದ್ದೆವು. ಸಿಸೇರಿಯನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದರು. ಆದರೆ, ಹೆರಿಗೆ ಬಳಿಕ ಹೊಲಿಗೆ ಹಾಕುವ ವೇಳೆ ವೈದ್ಯರು ಎಡವಟ್ಟು ಮಾಡಿದ್ದಾರೆ. ಬಳಿಕ ನಿಮ್ಮ ಮಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ಕಳುಹಿಸಿದ್ದರು. ಅಲ್ಲಿ 12 ಬಾಟಲ್ ರಕ್ತ ಹಾಕಿ ಗರ್ಭಕೋಶ ಹೊರತೆಗೆಯಬೇಕು ಎಂದರು.
ಈ ಎಲ್ಲಾ ಪ್ರಯತ್ನ ಮಾಡಿದರೂ ನಮ್ಮ ಮಗಳನ್ನು ಉಳಿಸಿಕೊಳ್ಳಲು ಆಗಲಿಲ್ಲ. ರಕ್ತ ಇಲ್ಲ, ರಕ್ತಸ್ರಾವ ಆಗುತ್ತಿದೆ ಎಂದು ಏನೂ ಹೇಳಲಿಲ್ಲ. ನಮಗೆ ನೋಡಲು ಸಹ ಬಿಡಲಿಲ್ಲ. ಹರಪನಹಳ್ಳಿ ತಾಲೂಕು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಮಗಳು ಸಾವನಪ್ಪಿದ್ದಾಳೆ ಎಂದು ಮೃತರ ತಾಯಿ ಹುಲಿಗೆಮ್ಮ ಆರೋಪ ಮಾಡಿದ್ದಾರೆ.
ಭೀಮ್ ಆರ್ಮಿ ಸಂಘಟನೆಯ ಜಿಲ್ಲಾಧ್ಯಕ್ಷ ನಿಂಗಪ್ಪ ಮಾತನಾಡಿದ್ದು, ಬಾಣಂತಿಗೆ ಸ್ವಚ್ಛಗೊಳಿಸದೆ ಹೊಲಿಗೆ ಹಾಕಿದ್ದಾರೆ. ಅಲ್ಲದೆ, ಎರಡು ಹೊಲಿಗೆ ಬಿಡುವಷ್ಟು ಜಾಗವನ್ನು ಬಿಟ್ಟಿದ್ದಾರಂತೆ. ಇದರಿಂದಲೇ ದುರ್ಗಮ್ಮನ ಗರ್ಭಕೋಶದಿಂದ ತೀವ್ರ ರಕ್ತಸ್ರಾವ ಆಗಿದ್ದು, ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಈ ವೇಳೆ ಆಕೆಯ ಪತಿ ನಾರಾಯಣ್ ವೈದ್ಯರು ಮತ್ತು ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದಾರೆ. ಆಗ ಯಾರೂ ಸ್ಪಂದಿಸಿಲ್ಲ ಎಂದರು.
ಇನ್ನು ಮಾರನೇ ದಿನ ದುರ್ಗಮ್ಮಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇದೆ ಎಂದು ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯಿರಿ ಎಂದು ಹೇಳಿದ್ದಾರೆ. ಆಹ ತಕ್ಷಣವೇ ಚಿಗಟೇರಿ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆ ಕೊಟ್ಟಿದ್ದಾರೆ. ಆದರೂ ಅವರು ಬದುಕುಳಿಯಲಿಲ್ಲ ಎಂದು ಹರಪನಹಳ್ಳಿ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದರು. ಅಲ್ಲದ, ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಸೂಕ್ತ ಶಿಕ್ಷೆಯಾಗಬೇಕು. ಜೊತೆಗೆ ಹಸುಗೂಸಿಗೆ ಸಮರ್ಪಕ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications