ದಾವಣಗೆರೆ; ಹೋಟೆಲ್ ಉಪಾಹಾರ ಸೇವಿಸಿ 30 ಗ್ರಾಹಕರು ಅಸ್ವಸ್ಥ
ದಾವಣಗೆರೆ, ನವೆಂಬರ್ 23: ಹದಡಿ ರಸ್ತೆಯ ಹೋಟೆಲ್ ವೊಂದರಲ್ಲಿ ಆಹಾರ ಸೇವಿಸಿದ ಸುಮಾರು 30 ಗ್ರಾಹಕರು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆಯ ಹಳ್ಳಿ ಸೊಗಡು ಹೋಟೆಲ್ ನಲ್ಲಿ ಭಾನುವಾರ ಇಡ್ಲಿ, ದೋಸೆ ಸೇವಿಸಿದ್ದ ಗ್ರಾಹಕರು ಮನೆಗೆ ಹಿಂತಿರುಗಿದ್ದಾರೆ. ಆನಂತರ ಅವರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫುಡ್ ಪಾಯ್ಸನ್ ಆಗಿ ಇವರು ಅಸ್ವಸ್ಥಗೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ನಡೆದ ಬೆನ್ನಲ್ಲೇ ಹೋಟೆಲ್ ಗೆ ಆರೋಗ್ಯ ಶಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪಾಲಿಕೆಯಿಂದ ಹೋಟೆಲ್ ಗೆ ಈ ಮುನ್ನ ಎರಡು ಬಾರಿ ನೋಟಿಸ್ ನೀಡಿದ್ದರೂ ಒಂದು ವರ್ಷದಿಂದ ಪರವಾನಗಿಯನ್ನು ನವೀಕರಿಸಲಿಲ್ಲ. ಆಹಾರ ಸುರಕ್ಷತಾ ಇಲಾಖೆಯಡಿ ಲೈಸೆನ್ಸ್ ಪಡೆದಿರಲಿಲ್ಲ ಎಂದು ತಿಳಿದುಬಂದಿದೆ. ಜೊತೆಗೆ ಹೋಟೆಲ್ ನಲ್ಲಿ ಶುದ್ಧವಾದ ಕುಡಿಯುವ ನೀರು ವಿತರಣೆಗೆ ಕ್ರಮ ವಹಿಸಿರಲಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಪಾಲಿಕೆ ಸಿಬ್ಬಂದಿ ಹೋಟೆಲ್ ಗೆ ಬೀಗ ಜಡಿದಿದ್ದಾರೆ. ಹೋಟೆಲ್ ಬಂದ್ ಮಾಡಿ ಕ್ರಮ ತೆಗೆದುಕೊಂಡಿರುವುದಾಗಿ ಪಾಲಿಕೆ ಆರೋಗ್ಯ ಶಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications