ಅಪಾಯಕಾರಿ ಕ್ಯಾಟ್ ಫಿಶ್ ಸಾಕಾಣಿಕೆ ಮೇಲೆ ಎಸಿ ದಾಳಿ
ದಾವಣಗೆರೆ, ಏಪ್ರಿಲ್ 12: ಜೀವಕ್ಕೆ ಅಪಾಯಕಾರಿಯಾಗಿರುವ ಕ್ಯಾಟ್ ಫಿಶ್ ಸಾಕಾಣಿಕೆ ಮೇಲೆ ಎಸಿ ನೇತೃತ್ವದಲ್ಲಿ ದಾಳಿ ಮಾಡಿ ನಾಶಗೊಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದೇಶಾದ್ಯಂತ ಆಫ್ರಿಕನ್ ಕ್ಯಾಟ್ ಫಿಶ್ ಗಳ ಸಾಕಾಣೆ ನಿಷೇಧಿಸಲಾಗಿತ್ತು. ಆದರೂ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿಯ ಮಳಲಿಹಳ್ಳಿ ಗ್ರಾಮದ ಹೊರವಲಯದಲ್ಲಿ ಗೌರಮ್ಮ ಮತ್ತು ರಾಮನಗೌಡ ಅವರಿಗೆ ಸೇರಿದ ಸುಮಾರು ಹತ್ತು ಎಕರೆ ಜಮೀನಿನ 8 ಕೊಳಗಳಲ್ಲಿ ಯಾರಿಗೂ ತಿಳಿಯದಂತೆ ಕ್ಯಾಟ್ ಫಿಶ್ ಸಾಕಲಾಗಿತ್ತು.
ಸ್ಥಳಗಳಿಗೆ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ನೇತೃತ್ವದ ತಂಡ ದಾಳಿ ನಡೆಸಿ, ಕ್ಯಾಟ್ ಫಿಶ್ ಹೊಂಡಗಳ ತೆರವು ಕಾರ್ಯಾಚರಣೆ ಮಾಡಿದ್ದು, ಅಧಿಕಾರಿಗಳ ತಂಡ ಅವುಗಳನ್ನು ನಾಶ ಮಾಡಿದೆ.

ಊರ ಹೊರವಲಯದಲ್ಲಿ ಈ ಕೊಳ ಇದ್ದ ಕಾರಣ ಕ್ಯಾಟ್ ಫಿಶ್ ಸಾಕಾಣೆ ಯಾರ ಗಮನಕ್ಕೆ ಬಂದಿರಲಿಲ್ಲ. ಆದರೂ ಮಾಹಿತಿ ಪಡೆದುಕೊಂಡ ಮೀನುಗಾರಿಕೆ ಇಲಾಖೆ ಎಸಿ ಮಮತಾ ಹೊಸಗೌಡರ ಗಮನಕ್ಕೆ ತಂದಿತ್ತು.
ಈ ಕೊಳದಲ್ಲಿ 10 ರಿಂದ 15 ಟನ್ ಫಿಶ್ ಸಾಕಾಣೆ ಮಾಡಲಾಗುತ್ತಿದ್ದು, ಇಲ್ಲಿನ ಕ್ಯಾಟ್ ಫಿಶ್ ಮೀನುಗಳು ಉತ್ತರ ಪ್ರದೇಶ, ಬಿಹಾರ ರಾಜ್ಯಕ್ಕೆ ಸರಬರಾಜು ಮಾಡಲಾಗುತಿತ್ತು. ಒಂದು ಮೀನು 100 ರೂ. ನಿಂದ 200 ರೂ.ಗೆ ಮಾರಾಟ ಮಾಡಲಾಗುತಿತ್ತು.
ಕ್ಯಾಟ್ ಫಿಶ್ ಗಳನ್ನು ಹಕ್ಕಿಗಳು ತಿನ್ನಬಾರದೆಂದು ಬಲೆ ಹಾಕಲಾಗಿತ್ತು. ಮೀನುಗಳನ್ನು ತಿನ್ನಲು ಬರುತ್ತಿದ್ದ ಹಕ್ಕಿಗಳು ಬಲೆಗೆ ಸಿಲುಕಿ ನರಳಿ ಸಾಯುತ್ತಿದ್ದವು. ಇನ್ನು ಮೀನುಗಳಿಗೆ ಕೋಳಿ ಮಾಂಸ ಹಾಕುತ್ತಿದ್ದ ಕಾರಣ, ನಾಯಿಗಳು ಕೂಡ ಇಲ್ಲಿಗೆ ಬರುತ್ತಿದ್ದವು. ಈ ನಾಯಿಗಳು ಅಕ್ಕಪಕ್ಕದಲ್ಲಿನ ಕೊಳಿ ಫಾರಂನ ಕೋಳಿಗಳನ್ನು ತಿನ್ನುತ್ತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ.

ಎಂಟು ಕೊಳಗಳಲ್ಲಿ ಸಾಕಲಾಗುತ್ತಿದ್ದ ಮೀನುಗಳನ್ನು ಗುಂಡಿಯಲ್ಲಿ ಹಾಕಿ ನಾಶ ಮಾಡಲಾಗುತ್ತಿದೆ. ಕೊಳದ ನೀರನ್ನು ಇನ್ನೊಂದು ಕೊಳದಲ್ಲಿ ಹರಿಬಿಡಲಾಗುತ್ತಿದೆ. ಬೇರೆಯವರ ಜಮೀನಿನನಲ್ಲಿ ಅಕ್ರಮವಾಗಿ ಕ್ಯಾಟ್ ಫಿಶ್ ಸಾಕಲಾಗಿತ್ತು. ಇದು ನಿಷೇಧಿತವಾಗಿದ್ದರಿಂದ ಅದನ್ನು ನಾಶ ಮಾಡುತ್ತಿದ್ದೇವೆ. ಇನ್ನೊಮ್ಮೆ ಹೀಗೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಸಿ ಮಮತಾ ಹೊಸಗೌಡರ್ ಹೇಳಿದರು.
ಕ್ಯಾಟ್ ಫಿಶ್ ಗಳಲ್ಲಿ ಪಾದರಸ ಅಂಶವಿದ್ದು, ಮನುಷ್ಯ ನರವ್ಯೂಹಕ್ಕೆ ತೊಂದರೆಯಾಗುತ್ತದೆ. ಅಷ್ಟೇ ಅಲ್ಲದೇ ಇದರಲ್ಲಿ ಕ್ಯಾನ್ಸರ್ ಕಾರಕ ಅಂಶವಿದ್ದು, ಗರ್ಭಿಣಿಯರು ತಿಂದರೆ ಹುಟ್ಟುವ ಮಕ್ಕಳಲ್ಲಿ ನರ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ ಎನ್ನಲಾಗುತ್ತಿದೆ.
ಈ ಮೀನುಗಳನ್ನು ಕೊಳೆತ ಕೊಳದೊಳಗೆ ಸಾಕಲಾಗುತ್ತದೆ. ಈ ಮೀನಿಗೆ ಆಹಾರವಾಗಿ ಸತ್ತ ಪ್ರಾಣಿಗಳು, ಸತ್ತ ದನ ಮತ್ತು ನಾಯಿಯ ಶವ ಹಾಕಲಾಗುತ್ತದೆ. ಅದನ್ನೇ ತಿಂದ ಕ್ಯಾಟ್ ಫಿಶ್ ಗಳು ದಷ್ಟ ಪುಷ್ಟವಾಗಿ ಬೆಳೆಯುತ್ತದೆ. ಕಡಿಮೆ ಬೆಲೆಗೆ ನಿಗದಿ ಆಗಿರುವ ಕಾರಣ ಗ್ರಾಹಕರು ತಿಳಿಯದೇ ಈ ಮೀನನ್ನು ಖರೀದಿಸುತ್ತಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications