ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ
ದಾವಣಗೆರೆಯ ಸರಸ್ವತಿ ಬಡಾವಣೆಯಲ್ಲಿ ವಾಸವಾಗಿರುವ ವಾಣಿಜ್ಯ ತೆರಿಗೆ ಅಧಿಕಾರಿ ಕರಿಬಸಪ್ಪ ಎಂಬುವವರ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅಕ್ರಮ ಆಸ್ತಿ ಪತ್ತೆಮಾಡುವಲ್ಲಿ ಸಫಲರಾಗಿದ್ದಾರೆ.
ದಾವಣಗೆರೆ, ಏಪ್ರಿಲ್ 6: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾವಣಗೆರೆ ಕಮರ್ಶಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ದಾವಣಗೆರೆಯ ಸರಸ್ವತಿ ಬಡಾವಣೆಯಲ್ಲಿ ವಾಸವಾಗಿರುವ ವಾಣಿಜ್ಯ ತೆರಿಗೆ ಅಧಿಕಾರಿ ಕರಿಬಸಪ್ಪ ಎಂಬುವವರ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅಕ್ರಮ ಆಸ್ತಿ ಪತ್ತೆಮಾಡುವಲ್ಲಿ ಸಫಲರಾಗಿದ್ದಾರೆ.
ವಾಣಿಜ್ಯ ತೆರಿಗೆ ಅಧಿಕಾರಿಯಾಗಿರುವ ಕರಿಬಸಪ್ಪ ಅವರ ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ, ಈತ 7 ಮನೆ, 3 ಬೈಕ್, ಜಮೀನು ಸೇರಿದಂತೆ ಸಾಕಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದರು ಎಂಬುದು ಪತ್ತೆಯಾಗಿದೆ.
Comments
English summary
The officials of Anti-Corruption Bureau (ACB) of Karnataka attack on a commercial tax officer's house in Davanagere district.