ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
ದಾವಣಗೆರೆ, ಮಾರ್ಚ್, 28: ಬುಧವಾರ ನಡೆದ ಸಭೆಯಲ್ಲಿನ ವಿಷಯಗಳು ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಆಗಿದೆ. ಬಹಿರಂಗವಾಗಿ ಹೇಳುವುದಕ್ಕೆ ಆಗುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕುತೂಹಲ ಮೂಡಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಲ್ಲವನ್ನೂ ಮಾಧ್ಯಮದವರ ಮುಂದೆ ಹೇಳುವುದಿಲ್ಲ. ಹೇಳುವುದಕ್ಕೂ ಸಾಧ್ಯವಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಗಲಾಟೆಯಾಗಿರುವ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನೋಡಣ್ಣಾ ಈ ವಿಚಾರದ ಬಗ್ಗೆ ಏನನ್ನೂ ಹೇಳುವುದಿಲ್ಲ, ನೋ ಕಮೆಂಟ್ಸ್ ಎಂದಷ್ಟೇ ಹೇಳಿದರು.

ಬಿಜೆಪಿ ಶಿಸ್ತಿನ ಪಕ್ಷ, ಸಣ್ಣಪುಟ್ಟ ವ್ಯತ್ಯಾಸಗಳಿವೆ. ಜಿಲ್ಲಾಧ್ಯಕ್ಷರ ಬದಲಾವಣೆ, ಕೆಲ ಹುದ್ದೆಗಳನ್ನು ನೀಡಬೇಕು ಎಂಬುದೂ ಸೇರಿದಂತೆ ಯಾವುದೇ ಷರತ್ತುಗಳನ್ನು ಹಾಕಿಲ್ಲ. ನನ್ನದು ಏನಿದ್ದರೂ ಭಾರತೀಯ ಜನತಾ ಪಾರ್ಟಿ. ಪ್ರಧಾನಿ ನರೇಂದ್ರ ಮೋದಿ ಅಷ್ಟೇ. ಎಲ್ಲವನ್ನೂ ಮಾಧ್ಯಮದವರ ಮುಂದೆ ಹೇಳಲು ಆಗದು ಎಂದು ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಒಗಟಾಗಿ ಉತ್ತರಿಸಿದರು.
ನನಗೇನೂ ಮಾಹಿತಿ ಇಲ್ಲ. ಏನಪ್ಪಾ ಅಂದರೆ ಕೆಲವು ಬಾರಿ ನಾವು ದೇವರು ಇದ್ದ ಹಾಗೆ ಇರಬೇಕು. ಕೆಲವು ಬಾರಿ ದೇವರು ಪ್ರತ್ಯಕ್ಷರಾಗ್ತಾರೆ, ಮಾಯವಾಗ್ತಾರೆ. ಇದೆಲ್ಲಾ ಭಗವಂತನ ಇಚ್ಚೆ. ನಾನು ಆಟ ಆಡುವುದಿಲ್ಲ. ಈಗಲೂ ನಾವೆಲ್ಲರೂ ಒಂದೇ. ನಾವೆಲ್ಲರೂ ಬೇರೆ ಏನೂ ಇಲ್ಲ. ಈಗಲೂ ಕುಳಿತು ಚರ್ಚೆ ಮಾಡುತ್ತೇವೆ. ಸಮಸ್ಯೆ ಪರಿಹರಿಸಿಕೊಳ್ಳುತ್ತೇವೆ ಎಂದು ರೇಣುಕಾಚಾರ್ಯ ಹೇಳಿದರು.
ನಾಲ್ಕು ಗೋಡೆಗಳ ಮಧ್ಯೆ ಏನು ಹೇಳಬೇಕೋ ಎಲ್ಲವನ್ನೂ ಹೇಳಿದ್ದೇವೆ. ಎಲ್ಲವೂ ಚರ್ಚೆಯಾಗಿದೆ. ನಾನು ಮೌನಕ್ಕೆ ಜಾರುತ್ತೇನೆ ಎಂದ ಅವರು, ಹೈಕಮಾಂಡ್ ಬೇಡಿಕೆ ಈಡೇರಿಸುವ ಸಂಬಂಧ ಭರವಸೆ ನೀಡಲಾಗಿದೆಯಾ? ಸಭೆ ತೃಪ್ತಿ ತಂದಿದೆಯಾ ಎಂಬ ಪ್ರಶ್ನೆಗೆ ಧನ್ಯವಾದ.. ಧನ್ಯವಾದ ಎಂದಷ್ಟೇ ಹೇಳಿ ತೆರಳಿದರು.
ಜಿ.ಬಿ.ವಿನಯ್ ಕುಮಾರ್ ಹೇಳಿದ್ದೇನು?: ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರೇ ಹೇಳಿರುವಂತೆ ಒಲ್ಲದ ಮನಸ್ಸಿನ ಟಿಕೆಟ್ ಸಿಕ್ಕಿದೆ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ದರಾಗಿ ಚುನಾವಣೆ ಎದುರಿಸುತ್ತೇವೆ ಎಂದಿರುವ ಸಚಿವರು ನನಗೆ ಟಿಕೆಟ್ ಕೊಡಿಸಲಿ ಎಂದು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಔಟ್ ರೀಚ್ ವಿಭಾಗದ ರಾಜ್ಯ ಉಪಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೂ ಕಾಲ ಮಿಂಚಿಲ್ಲ. ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ನಾನು ಒಂದೂವರೆಯಿಂದ ಎರಡು ಲಕ್ಷಗಳ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆ. ಹಿಂದುಳಿದ ನಾಯಕನನ್ನು ಬೆಳೆಸಿದ ಕೀರ್ತಿ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಲ್ಲುತ್ತದೆ. ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಮಾಡಿರುವ ನಿರ್ದರ್ಶನ ಇವೆ. ಈಗಲೂ ಹೈಕಮಾಂಡ್ ಮನಸ್ಸು ಮಾಡಿದರೆ ನನಗೆ ಟಿಕೆಟ್ ನೀಡಬಹುದು ಎಂದು ತಿಳಿಸಿದರು.
ನಾನು ಇನ್ನೊಬ್ಬರನ್ನು ಸೋಲಿಸಲು ಸಲುವಾಗಿ ಪಕ್ಷೇತರನಾಗಿ ಕಣಕ್ಕಿಳಿಯುವುದಿಲ್ಲ. ನಾನು ಗೆಲ್ಲಬೇಕೆಂದು ಸ್ಪರ್ಧೆ ಮಾಡುತ್ತೇನೆ. ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಸರ್ವೆ ನಡೆಸುತ್ತಿದ್ದೇನೆ. ಪಾದಯಾತ್ರೆಯ ವೇಳೆ 620ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪಾದಯಾತ್ರೆ ಮಾಡಿದ್ದೇನೆ. ಟಿಕೆಟ್ ಕೈ ತಪ್ಪಿದ ಬಳಿಕ ಮತ್ತೆ ಗ್ರಾಮಗಳಿಗೆ ಹೋಗುತ್ತಿದ್ದೇನೆ.
ಜನರು ಪ್ರೀತಿ, ವಿಶ್ವಾಸ ತೋರುತ್ತಿದ್ದಾರೆ. 60ರಿಂದ 65 ಹಳ್ಳಿಗಳಿಗೆ ಹೋಗಿದ್ದೇನೆ. ಎಲ್ಲರೂ ನಿಮಗೆ ಅನ್ಯಾಯವಾಗಿದೆ ಎಂದೇ ಹೇಳುತ್ತಿದ್ದಾರೆ ಎಂದರು. ಶೇಕಡಾ 90ರಷ್ಟು ಮಂದಿ ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಾಯ ಮಾಡುತ್ತಿದ್ದಾರೆ. ನಾನು ಇನ್ನೂ ನಿರ್ಧಾರ ಮಾಡಿಲ್ಲ.
ಸಚಿವ ಮಲ್ಲಿಕಾರ್ಜುನ್ ಅವರೇ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿರುವಂತೆ ವಿನಯ್ ಕುಮಾರ್ ದಾವಣಗೆರೆ ಅವರಲ್ಲ ಎಂದು ಟಿಕೆಟ್ ಬೇಡ ಎಂದು ವರಿಷ್ಠರಿಗೆ ಹೇಳಿದ್ದೇನೆ. ನಾವು ಟಿಕೆಟ್ ಕೇಳಿರಲಿಲ್ಲ. ಆದರೂ ಹೈಕಮಾಂಡ್ ಸರ್ವೆ ಆಧರಿಸಿ ನೀಡಿದೆ. ನೀವು ಸ್ಪರ್ಧೆ ಮಾಡಬೇಕೆಂದು ಹೇಳಿದ ಕಾರಣಕ್ಕೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕಣಕ್ಕಿಳಿಸಲಾಗಿದೆ ಎಂದಿದ್ದಾರೆ.
ಆದರೆ ಸಿಇಸಿ ಸಭೆಯ ಪ್ಯಾನಲ್ವರೆಗೂ ನನ್ನ ಹೆಸರು ಹೋಗಿದೆ. ಅಲ್ಲಿಯೂ ಚರ್ಚೆಯಾಗಿದೆ. ಶಾಮನೂರು ಶಿವಶಂಕರಪ್ಪನವರ ಕುಟುಂಬಕ್ಕೆ ಟಿಕೆಟ್ ಬೇಡ ಎಂದರೆ ನಿನಗೆ ಟಿಕೆಟ್ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನನಗೆ ಹೇಳಿದ್ದರು. ಮಲ್ಲಿಕಾರ್ಜುನ್ ಅವರು ಹೇಳಿದಂತೆ ಟಿಕೆಟ್ ಬೇಡ ಎಂದಿದ್ದರೆ ಹಿಂದುಳಿದ ವರ್ಗದ ಯುವ ನಾಯಕನಾದ ನನಗೆ ಕೊಡಿಸಬಹುದಿತ್ತು ಎಂದು ಹೇಳಿದರು.
ಕೇವಲ ಒಂದು ವರ್ಷದಲ್ಲಿ ಜಿಲ್ಲೆಯ ಪ್ರತಿಯೊಬ್ಬರಿಗೂ ವಿನಯ್ ಕುಮಾರ್ ಯಾರು ಎಂಬುದು ಗೊತ್ತಾಗಿದೆ. ಅತ್ಯಂತ ಅಲ್ಪಾವಧಿಯಲ್ಲಿ ಕಾಂಗ್ರೆಸ್ ಹಾಗೂ ಜಿಲ್ಲೆಯ ಜನರ ಮನೆ ಮಾತಾಗುವಂತಹ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ವಿನಯ್ ಕುಮಾರ್ ಹೆಸರು ಚಿರಪರಿಚಿತವಾಗಿದೆ ಎಂದರು.
ನಾನು ಹುಟ್ಟಿದ್ದು, ಬೆಳೆದಿದ್ದು ದಾವಣಗೆರೆ ತಾಲೂಕಿನ ಕಕ್ಕರಗೊಳ್ಳದಲ್ಲಿ. ಬಾಪೂಜಿ ಆಸ್ಪತ್ರೆಯಲ್ಲಿಯೇ ಜನಿಸಿದ್ದು. ಸಾವಿರಾರು ಜನರು ರಕ್ತ ಸಂಬಂಧಿಗಳೂ ಇದ್ದಾರೆ. ತಂದೆ-ತಾಯಿ ಹಾಗೂ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಾರದಾ ವಿದ್ಯಾಪೀಠದಲ್ಲಿ ಒಂದರಿಂದ ನಾಲ್ಕನೇ ತರಗತಿಯವರೆಗೆ ಅಭ್ಯಾಸ ಮಾಡಿದ್ದೇನೆ. ನಿಂಗಪ್ಪ ಮೇಸ್ಟ್ರು ಇದ್ದರು. ಸೆೇಟ್ ಫಾಲ್ಸ್ ಸ್ಕೂಲ್ನಲ್ಲಿ ನವೋದಯ ಪರೀಕ್ಷೆ ಬರೆದು ಪಾಸ್ ಆಗಿದ್ದೆ. ಉನ್ನತ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಹೋಗಿ ಬಿಎಸ್ಸಿ ಸೇರಿಕೊಂಡೆ ಎಂದು ವಿವರಿಸಿದರು.
ಸಚಿವ ಮಲ್ಲಿಕಾರ್ಜುನ್ ಅವರು ಟಿಕೆಟ್ ನೀಡಿಕೆ ವಿಚಾರ, ನಾನು ದಾವಣಗೆರೆಯವನಲ್ಲ ಎಂಬ ಕುರಿತಂತೆ ಯಾಕೆ ಹೀಗೆ ಹೇಳಿದ್ರು ಎಂದು ಗೊತ್ತಿಲ್ಲ. ದೆಹಲಿ ಪ್ಯಾನೆಲ್ ತನಕ ಹೆಸರು ಹೋಗಿದ್ದು ನನ್ನ ಸಾಮರ್ಥ್ಯದಿಂದ. ಕಾಂಗ್ರೆಸ್ ಔಟ್ರೀಚ್ ಯುವ ಘಟಕದ ರಾಜ್ಯ ಉಪಾಧ್ಯಕ್ಷನೂ ಹೌದು. ಕಳೆದ ಕೆಲ ದಿನಗಳ ಹಿಂದೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ನನಗೆ ಆಹ್ವಾನ ಇರಲಿಲ್ಲ. ಯಾರೂ ಫೋನ್ ಮಾಡಿಲ್ಲ, ಕರೆದಿಲ್ಲ. ಹಾಗಾಗಿ ಹೋಗಿಲ್ಲ ಎಂದರು.
ಬೆಳವಣಿಗೆ ತೋರಿಸಿದಾಗ ನಮ್ಮವರಲ್ಲ ಎಂದು ದೂರ ಇಡಬೇಕು ಎಂದು ಸೃಷ್ಟಿ ಮಾಡುವಂಥ ಕೆಲಸ ಇದಾಗಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ದಾವಣಗೆರೆಯವರಲ್ಲ ಎಂದಾಗ ಜಾತಿ ಎತ್ತಿ ಮಾತನಾಡಲು ಆಗಲ್ಲ. ಇದು ನನಗಷ್ಟೇ ಅಲ್ಲ, ಸಮಾಜಕ್ಕೆ ಆದ ಅವಮಾನ. ಇದು ತುಂಬಾ ಬೇಸರ ತಂದಿದೆ ಎಂದು ವಿನಯ್ ಕುಮಾರ್ ಅಸಮಾಧಾನ ಹೊರಹಾಕಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಹೇಳುತ್ತೇನೆ. ಸಂಬಂಧಿಕರು, ಹಿತೈಷಿಗಳು ಸಿದ್ದರಾಮಯ್ಯ ಅವರ ಬಳಿ ಕಳೆದ ಏಳೆಂಟು ತಿಂಗಳ ಹಿಂದೆ ಕೇಳಿಕೊಂಡಿದ್ದರು. ಸಿದ್ದರಾಮಯ್ಯ ಸೂಚನೆ ಕೊಟ್ಟ ಬಳಿಕ ಅವರು ಬಂದು ನನಗೆ ಹೇಳಿದರು. ಆ ನಂತರವೇ ನಾನು ಹೆಚ್ಚಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡೆ. ಸಿದ್ದರಾಮಯ್ಯ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನನ್ನ ಶಕ್ತಿ. ನನ್ನ ಪರವಾಗಿ ಹೇಳಿದ್ದಾರೆ, ಮಾತನಾಡಿದ್ದಾರೆ. ಸಿಎಂಗೂ ಇಂಟಲಿಜೆನ್ಸಿ ಮಾಹಿತಿ ಇರುತ್ತದೆ. ದೆಹಲಿಯಲ್ಲಿಯೂ ನನ್ನ ಹೆಸರು ಹೇಳಿದ್ದಾರೆ. ಸಿದ್ದರಾಮಯ್ಯರ ಆಶೀರ್ವಾದ ಇಲ್ಲದಿದ್ದರೆ ರಾಜಕಾರಣದಲ್ಲಿ ಇಷ್ಟು ಹೆಸರು ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಅಹಿಂದ ಒಕ್ಕೂಟದ ಅಧ್ಯಕ್ಷ ದಳವಾಯಿ ಹೇಮಂತ್, ಕಾಡುಗೊಲ್ಲ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಂಗಸ್ವಾಮಿ, ಹೆಚ್.ಸಿ.ಮಲ್ಲಪ್ಪ, ಶರತ್ ಕುಮಾರ್, ಪುರಂದರ ಲೋಕಿಕೆರೆ, ಕೆ.ಹೆಚ್.ಮಂಜುನಾಥ, ರವಿಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications