ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಂತಕುಮಾರ್ ಹೆಗಡೆ ಸಂಸದ ಆಗಲು ಸಹ ನಾಲಾಯಕ್: ಸಿದ್ದರಾಮಯ್ಯ

|
Google Oneindia Kannada News

ದಾವಣಗೆರೆ, ನವೆಂಬರ್ 18: "ಅನಂತಕುಮಾರ್ ಹೆಗಡೆ ಸಚಿವರಾಗುವುದಕ್ಕಲ್ಲ, ಸಂಸದ ಆಗಲು ಸಹ ನಾಲಾಯಕ್" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ವೋಟಿನಾಸೆಗೆ ಬೂಟು ನೆಕ್ತಾರೆ ಎಂದು ನಾಲಿಗೆ ಹರಿಬಿಟ್ಟ ಹೆಗಡೆಸಿದ್ದರಾಮಯ್ಯ ವೋಟಿನಾಸೆಗೆ ಬೂಟು ನೆಕ್ತಾರೆ ಎಂದು ನಾಲಿಗೆ ಹರಿಬಿಟ್ಟ ಹೆಗಡೆ

"ಅಧಿಕಾರಕ್ಕಾಗಿ ಸಿದ್ದರಾಮಯ್ಯ ಬೂಟು ನೆಕ್ಕಲು ಸಿದ್ಧವಾಗಿದ್ದಾರೆ" ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಶುಕ್ರವಾರ ಚನ್ನಮ್ಮನ ಕಿತ್ತೂರಿನಲ್ಲಿ ಟೀಕಿಸಿದ್ದರು. ಇದಕ್ಕೆ ಶನಿವಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅನಂತಕುಮಾರ್ ನಾಲಗೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Ananthkumar Hegade is not even fit to become MP: Siddaramaiah

"ನಾಲ್ಕೂವರೆ ವರ್ಷದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಒಂದೇ ಒಂದು ಹಗರಣವನ್ನು ದಾಖಲೆ ಸಮೇತ ಯಾರಾದರೂ ಸಾಬೀತು ಪಡಿಸಿದರೆ ಇನ್ನು ಮುಂದೆ ನಾನು ರಾಜಕೀಯದ ಬಗ್ಗೆಯೇ ಮಾತನಾಡುವುದಿಲ್ಲ" ಎಂದು ಪಂಥಾಹ್ವಾನ ನೀಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

ಕರ್ನಾಟಕ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವ ಕ್ರಮದ ಬಗ್ಗೆ ಕೂಡ ಅನಂತಕುಮಾರ್ ಹೆಗಡೆ ಕಟುವಾದ ಶಬ್ದಗಳಿಂದ ಟೀಕಿಸಿದ್ದರು. ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕಿದರೆ ವೇದಿಕೆಯಲ್ಲೇ ಟಿಪ್ಪು ವಿರುದ್ಧ ಧಿಕ್ಕಾರ ಕೂಗುವುದಾಗಿ ಹೇಳಿದ್ದರು.

ವೋಟಿಗಾಗಿ ಮಾತ್ರ ಹಿಂದೂ, ಹೆಗಡೆಗೆ ಕೃಷ್ಣ ಬೈರೆಗೌಡ ತಿರುಗೇಟುವೋಟಿಗಾಗಿ ಮಾತ್ರ ಹಿಂದೂ, ಹೆಗಡೆಗೆ ಕೃಷ್ಣ ಬೈರೆಗೌಡ ತಿರುಗೇಟು

ಆ ನಂತರ ಬಿಜೆಪಿಯ ಕೆಲವು ಸಂಸದರ ಅದೇ ರೀತಿ ತಮ್ಮ ಹೆಸರನ್ನು ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹಾಕಬಾರದು ಎಂದಿದ್ದರು. ಕೊನೆಗೆ ರಾಜ್ಯ ಸರಕಾರವೇ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿ, ಒಪ್ಪಿಗೆ ಇಲ್ಲದ ಜನಪ್ರತಿನಿಧಿಗಳ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಬಳಸದಂತೆ ತಿಳಿಸಿತ್ತು.

English summary
Central minister Ananthkumar Hegade is not even fit to become MP, said by Karnataka chief minister Siddaramaiah in Davanagere. He responded to the allegation madeagainst him by Ananthkumar Hegade on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X