Arecanut price: ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಅಕ್ಟೋಬರ್ 31ರ ದರಪಟ್ಟಿ
Arecanut Price: ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ಕ್ವಿಂಟಾಲ್ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿತ್ತು. ಆದರೆ ಇದೀಗ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಇಳಿಕೆಮುಖದತ್ತ ಹೊರಟಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಕುಗ್ಗಿದಂತಾಗಿದೆ. ಹಾಗಾದ್ರೆ ಪ್ರಸ್ತುತ ದರಪಟ್ಟಿ ಎಷ್ಟಿದ ಎನ್ನುವ ಸಂಪೂರ್ಣ ಅಂಕಿಅಂಶಗಳವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೊಯ್ಲಿನ ಸಮಯದಲ್ಲೇ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿ ಇದೀಗ ಕಳೆದ ಕೆಲ ದಿನಗಳಿಂದ ಇಳಿಕೆಯಾಗುತ್ತಲಿದೆ. ಇನ್ನು ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಅಕ್ಟೋಬರ್ 31) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 31) ಸಹ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್ಗಳಲ್ಲಿ) ಗರಿಷ್ಠ ದರ 65,821 ರೂಪಾಯಿ, ಕನಿಷ್ಠ ದರ 58,279 ರೂಪಾಯಿ ಇದ್ದು, ಸರಾಸರಿ ಬೆಲೆ 61,867 ರೂಪಾಯಿ ಇದೆ. ಈ ಮೂಲಕ ನಿನ್ನೆಯ ದರವನ್ನೇ ಕಾಯ್ದುಕೊಂಡಿದೆ. ಕಳೆದ ಕೆಲ ದಿನಗಳಿಂದ ಭರ್ಜರಿ ಏರಿಕೆಯತ್ತ ಮುಖ ಮಾಡಿದ್ದ ಅಡಿಕೆ ಧಾರಣೆಯಲ್ಲಿ ಇದೀಗ ದಿಢೀರ್ ಕುಸಿತ ಆಗಿದೆ.
ಸದ್ಯ ಅಡಿಕೆ ಧಾರಣೆ ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.
ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ದೀಪಾವಳಿ ಸಮಯದಲ್ಲಿ ಅಂದರೆ ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲಿಯೇ ಧಾರಣೆ ಭಾರೀ ಇಳಿಕೆಯಾಗಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ನಂತರ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಎರಡನೇ ವಾರದಿಂದ ನಾಲ್ಕನೆ ವಾರದ ಆರಂಭದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಆದರೆ ಇದೀಗ ಕಳೆದ ಕೆಲ ದಿನಗಳಿಂದ ಸತತ ಇಳಿಕೆಯಾಗುತ್ತಲಿದೆ
2025ರ ಜೂನ್ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಅಡಿಕೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಇದೇ ವೇಳೆ ಧಾರಣೆ ಸತತವಾಗಿ ಕುಸಿತ ಕಾಣುತ್ತಿರುವುದು ಬೆಳೆಗಾರರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ. ಮತ್ತೊಂದೆಡೆ ಮುಂದಿನ ದಿನಗಳಲ್ಲಿ ಏರಿಕೆಯಾಗುವ ಭರವಸೆ ಬೆಳೆಗಾರರದ್ದಾಗಿದೆ.
-
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
LPG ಸಿಲಿಂಡರ್ ಕೊರತೆ: ಗಗನಕ್ಕೇರಿದ ಸೌದೆ ಬೆಲೆ, ಸ್ಟೌವ್ ರಿಪೇರಿ ಅಂಗಡಿಗಳಿಗೆ ಫುಲ್ ಡಿಮ್ಯಾಂಡ್ -
Karan Adani: ತಂದೆ-ತಾಯಿಯಿಂದ ಕಲಿತ ನಾಯಕತ್ವದ ಪಾಠಗಳನ್ನ ಬಿಚ್ಚಿಟ್ಟ ಕರಣ್ ಅದಾನಿ -
Adani Group: ಭಾರತದಾದ್ಯಂತ 300 ಶಾಲೆಗಳು, 30 ಆಸ್ಪತ್ರೆಗಳ ನಿರ್ಮಾಣಕ್ಕೆ ಅದಾನಿ ಗ್ರೂಪ್ ₹60,000 ಕೋಟಿ ಹೂಡಿಕೆ: ಕರಣ್ ಅದಾನಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications