Get Updates
Get notified of breaking news, exclusive insights, and must-see stories!

Arecanut Price: ಕ್ವಿಂಟಾಲ್‌ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಡಿಸೆಂಬರ್ 4ರ ದರಪಟ್ಟಿ

Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ಕಳೆದ ಮೂರ್ನಾಲ್ಕು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇದೀಗ ಮತ್ತಷ್ಟು ಕುಸಿತ ಕಂಡಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 4) ದರ ಎಷ್ಟಿದೆ ತಿಳಿಯಿರಿ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 4) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,200 ರೂಪಾಯಿ, ಕನಿಷ್ಠ ದರ 53,099 ರೂಪಾಯಿ ಇದ್ದು, ಸರಾಸರಿ ಬೆಲೆ 57,212 ರೂಪಾಯಿ ಇದೆ. ಕಳೆದ ಒಂದು ವಾರದಿಂದಲೂ ಕುಸಿತ ಕಾಣುತ್ತಿದ್ದು, ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

Arecanut price Detials on December 4 Know details

ಇದೀಗ ಅಡಿಕೆ ಧಾರಣೆ ಮತ್ತೆ ಆಡಿದ್ದೇ ಆಟ ಎನ್ನುವಂತೆ ಮತ್ತೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಹೆಚ್ಚಳ ಆಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು.

ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಮುಖ ಮಾಡಿತ್ತು. ಬಳಿ ತುಸು ಸುಧಾರಣೆ ಆಗಿ ಇದೀಗ ಮತ್ತೆ ಇಳಿಕೆಮುಖದತ್ತ ಸಾಗಿದೆ.

ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ಇದೀಗ ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ ಕಳೆದ ಒಂದು ವಾರದಿದಂಲೂ ಕುಸಿತ ಕಾಣುತ್ತಲಿದೆ. ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರು ಇದ್ದಾರೆ.

ಇನ್ನೂ ಈ ಬಾರಿ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಪರಿಣಾಮ ಅಡಿಕೆ ಫಸಲು ಕೂಡ ಅಷ್ಟೇ ಚೆನ್ನಾಗಿ ಬಂದಿದೆ. ಆದರೆ ಇದೀಗ ಭಾರೀ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿರುವುದು ಬೆಳೆಗಾರರಲ್ಲಿ ಆತಂಕ ಹೆಚ್ಚಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+