Arecanut price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ದರ ಭಾರೀ ಏರಿಕೆ; ಮೇ 21ರ ಅಂಕಿಅಂಶಗಳು ಇಲ್ಲಿವೆ

Arecanut price: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತದೆ. ಇನ್ನು ಇಳಿಕೆಯತ್ತ ಸಾಗಿದ್ದ ದರ ಮತ್ತೆ ಭಾರೀ ಪ್ರಮಾಣದಲ್ಲಿ ಏರಿಯಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಇದೀಗ ಜಿಲ್ಲೆಯಲ್ಲಿ ಇಂದು (ಮೇ 21) ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಅಂಕಿಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಕ್ವಿಂಟಾಲ್‌ ಅಡಿಕೆಯ ಗರಿಷ್ಠ ದರ 59,312 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಏರಿಕೆಯಾಗಿದ್ದು, ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

Arecanut Price increase in Davanagere market on May 21

ಇದೀಗ ಮೇ 21ರಂದು ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 59,312 ರೂಪಾಯಿ, ಕನಿಷ್ಠ ದರ 55,012 ರೂಪಾಯಿ ಇದ್ದು, ಸರಾಸರಿ ಬೆಲೆ 57,630 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 32,679 ರೂಪಾಯಿ, ಕನಿಷ್ಠ ದರ 27,679 ರೂಪಾಯಿ, ಸರಾಸರಿ ದರ 29,431 ರೂಪಾಯಿ ಆಗಿದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಅದರಲ್ಲೂ ಇದೀಗ ಬೇಸಿಗೆಗೂ ಮುನ್ನ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ.

ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಇಲ್ಲಿಯವರೆಗೂ ಸತತವಾಗಿ ಏರಿಕೆಯಾಗುತ್ತಲೇ ಬಂದಿದ್ದು, ಏಪ್ರಿಲ್‌ ಅಂತ್ಯಕ್ಕೆ 60,000 ರೂಪಾಯಿ ದಾಟಿತ್ತು. ಆದರೆ ಇದೀಗ ಮೇ ಆರಂಭದಲ್ಲಿ ಇಳಿಕೆಯಾಗಿ ಮತ್ತೆ ಏರಿಕೆಯಾಗಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.

2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. ಇದೀಗ 2025ರ ಏಪ್ರಿಲ್ ತಿಂಗಳ ಆರಂಭದಿಂದ ಏರಿಕೆ ಆಗುತ್ತಲೇ ಬಂದಿತ್ತು. ಆದರೆ, ಮತ್ತೆ ಮೇ ಆರಂಭದಲ್ಲಿ ಮತ್ತೆ ಇಳಿಕೆಯಾಗಿ, ಇದೀಗ ಏರಿಕೆಯತ್ತ ಸಾಗಿದೆ.

ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಸಹ ಕಳೆದ ವರ್ಷದಂತೆ ಮುಂಗಾರು ಆರ್ಭಟಿಸುವ ಮುನ್ಸೂಚನೆ ಇದ್ದು, ಉತ್ತಮ ಫಸಲಿನ ಜೊತೆ ಮತ್ತಷ್ಟು ಬೆಲೆ ಹೆಚ್ಚಳ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ.

ಸದ್ಯ ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿದ್ದು, ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಇನ್ನು ದಾವಣಗೆರೆ ಜಿಲ್ಲೆಯಲ್ಲೂ ಸಹ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದು, ಅಡಿಕೆ ಬೆಳಗಾರರಿಗೆ ಸಂತಸ ಮೂಡಿದಂತಾಗಿದೆ. ಅದರಲ್ಲೂ ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+