ದಾವಣಗೆರೆ: ಜೂನ್ 13ರಂದು ಅಡಿಕೆ ದರ ಮತ್ತೆ ಏರಿಕೆಯತ್ತ.!- ತಾಲೂಕುವಾರು ಅಂಕಿಅಂಶಗಳ ವಿವರ ತಿಳಿಯಿರಿ
Arecanut Price on June 13: ಚಿನ್ನ-ಬೆಳ್ಳಿ ದರದಂತೆ ಅಡಿಕೆ ದರದಲ್ಲಿ ಏರಿಳಿತ ಆಗುತ್ತಲೇ ಇದೆ. ಹಾಗೆಯೇ ದಾವಣಗೆರೆ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯಾಗಿದ್ದು, ಇಲ್ಲಿನ ರೈತರ ಜೀನನಾಧಾರ ಇದೇ ಆಗಿದೆ. ಇನ್ನು ಕಳೆದ ಒಂದು ದಿನದ ಹಿಂದೆ ಅಡಿಕೆ ಬೆಲೆ ಕುಸಿತವಾಗಿದ್ದು, ಇದೀಗ ಮತ್ತೆ ಏರಿಕೆಯತ್ತ ಸಾಗಿದೆ. ಇದರಿಂದ ಬೆಳಗಾರರ ಮುಖದಲ್ಲಿ ಮಂದಹಾಸ ತುಸು ಹೆಚ್ಚಾಗಿಯೇ ಇದೆ. ಹಾಗಾದರೆ ಇಂದು (ಜೂನ್ 13)ದರಗಳ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ ಇದೀಗ ತುಸು ಏರಿಕೆಯಾಗಿದೆ. ಜೂನ್ ಮೊದಲ ವಾರ 55,000 ರೂಪಾಯಿ ಗಡಿಯತ್ತ ಸಾಗಿದ್ದ ಬೆಲೆ, ಎರಡನೇ ವಾರ 53,000 ಕೆಳಗೆ ಇಳಿದಿತ್ತು. ಇನ್ನು ಇದೀಗ ಇಂದು (ಜೂ 13) ಗರಿಷ್ಠ ಬೆಲೆ ಕ್ವಿಂಟಲ್ ಅಡಿಕೆಗೆ 53,829 ರೂಪಾಯಿ ಇದ್ದರೆ, ಕನಿಷ್ಠ ದರ 47,336 ರೂಪಾಗಳಿ ಆಗಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಸಿದರೆ 150 ರೂಪಾಯಿ ಏರಿಕೆ ಆಗಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಇನ್ನು 2023ರ ಜುಲೈನಲ್ಲಿ ಗರಿಷ್ಠ ಬೆಲೆ 57,000 ರೂಪಾಯಿಗೆ ಏರಿತ್ತು. ಆದ್ದರಿಂದ ಇನ್ನೂ ಸ್ವಲ್ಪ ದಿನ ಇಟ್ಟು ಮಾರಾಟ ಮಾಡುವವರಿಗೆ ಇನ್ನೂ ಉತ್ತಮ ದರ ಸಿಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಇದೀಗ ಬಿಸಿಲಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಉತ್ತಮ ಮಳೆಯಾಗಿದೆ. ಇನ್ನು ಕಳೆದ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆ ಬೋರ್ವೆಲ್ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತವಾಗಿತ್ತು.
ಆದರೆ ಇದೀಗ ಈ ಬಾರಿ ಜೂನ್ ಆರಂಭದಿಂದಲೂ ಮುಂಗಾರು ಚುರುಕು ಪಡೆದ ಹಿನ್ನೆಲೆ ಸ್ವಲ್ಪ ಚೇತರಿಕೆ ಕಂಡಿದೆ. ಜಿಲ್ಲೆಯಲ್ಲಿ ಉತ್ತಮ ಮುಂಗಾರುಮಳೆ ಆಗುತ್ತಿದೆ. ಹಾಗೆಯೇ ಮತ್ತೊಂದೆಡೆ ಹಮಾನ ಇಲಾಖೆ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಇದರಿಂದಅಡಿಕೆ ಬೆಳೆಗಾರರಲ್ಲಿ ಮತ್ತಷ್ಟು ಮಂದಹಾಸ ಹೆಚ್ಚಾಗುವಂತೆ ಮಾಡಿದೆ.
2024ರ ಜನವರಿ 15ರಂದು ರಾಶಿ ಅಡಿಕೆ ಗರಿಷ್ಠ ದರ 50,500 ರೂಪಾಯಿ ಗಡಿ ಮುಟ್ಟಿತ್ತು. ಫೆಬ್ರವರಿ ತಿಂಗಳಲ್ಲಿ ದಿಢೀರ್ 48,000 ರೂಪಾಯಿಗೆ ಕುಸಿತವಾಗಿತ್ತು. ಮಾರ್ಚ್ನಲ್ಲಿ ಸ್ವಲ್ಪ ಚೇತರಿಕೆ ಕಂಡು 50,000 ರೂಪಾಯಿಗೆ ಮುಟ್ಟಿತ್ತು. ಇನ್ನು ಏಪ್ರಿಲ್ನಲ್ಲಿ ಗರಿಷ್ಠ 54,000 ರೂಪಾಯಿ ಗಡಿ ಮುಟ್ಟಿತ್ತು. ಮೇನಲ್ಲಿ ಗರಿಷ್ಠ 55,000 ತಲುಪಿ ಮತ್ತೆ ಕುಸಿತ ಕಂಡಿತ್ತು. ಈ ಮೂಲಕ ಜೂನ್ ತಿಂಗಳ ಮೊದಲ ವಾರ ಏರಿಕೆಯಾಗಿ ಮತ್ತೆ ಕುಸಿದಿದ್ದು, ಇದೀಗ ತುಸು ಏರಿಕೆಯತ್ತ ಸಾಗಿರುವುದು ಬೆಳಗಾರರಿಗೆ ಸಂತಸದ ವಿಚಾರವಾಗಿದೆ.
ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜೂ.12ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 47,336,ರೂ., ಗರಿಷ್ಠ ಬೆಲೆ 53,829 ಹಾಗೂ ಸರಾಸರಿ ಬೆಲೆ 52,844 ರೂ.ಗೆ ಮಾರಾಟವಾಗಿದೆ. ಬೆಟ್ಟೆ ಅಡಿಕೆ ಗರಷ್ಠ ಬೆಲೆ 37,200 ರೂ. ಆಗಿದೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications