ದಾವಣಗೆರೆ: ಅಡಿಕೆ ಧಾರಣೆ ಇಳಿಮುಖದತ್ತ ಸಾಗಲು ಪ್ರಮುಖ ಕಾರಣ ಏನು?-ಇಲ್ಲಿದೆ ಮಾಹಿತಿ
ದಾವಣಗೆರೆ, ಫೆಬ್ರವರಿ, 26: ಅಡಿಕೆ ಬೆಳೆ ದರ ದಿನ ಕಳೆದಂತೆ ಕುಸಿಯುತ್ತಿದೆ. ಕಳೆದ ಹದಿನೈದು ದಿನಗಳಲ್ಲಿ ಬರೋಬ್ಬರಿ 2,300 ರೂಪಾಯಿ ಪ್ರತಿ ಕ್ವಿಂಟಲ್ಗೆ ಕುಂಠಿತವಾಗಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ಅಡಿಕೆ ಧಾರಣೆ ಕುಸಿತಕ್ಕೆ ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈ ಬಾರಿ ಬರಗಾಲ ತಲೆದೋರಿದೆ. ಒಂದೆಡೆ ನೀರಿಲ್ಲ, ಮತ್ತೊಂದೆಡೆ ತೋಟಗಳನ್ನು ಉಳಿಸಿಕೊಳ್ಳಲು ಅಡಿಕೆ ಬೆಳೆಗಾರರು ಪರದಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಂತೂ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಈ ನಡುವೆ ಅಡಿಕೆ ಧಾರಣೆ ಕುಸಿತಗೊಳ್ಳಲು ಅಕ್ರಮವಾಗಿ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದೇ ಕಾರಣ ಎಂಬ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.

ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ. ಅದೇ ರೀತಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿಯೂ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ. ಚನ್ನಗಿರಿ ಭಾಗದಲ್ಲಂತೂ ಯಥೇಚ್ಛವಾಗಿ ಬೆಳೆಯಲಾಗುತ್ತಿದೆ. ಇಲ್ಲಿನ ರೈತರಿಗೆ ಅಡಿಕೆಯೇ ಆಧಾರ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ 57,000 ರೂಪಾಯಿ ಪ್ರತಿ ಕ್ವಿಂಟಲ್ ಅಡಿಕೆ ವಹಿವಾಟು ನಡೆದಿತ್ತು.
ಆದರೆ, ಈ ವರ್ಷ 47,000 ರೂಪಾಯಿ ಆಸುಪಾಸಿನಲ್ಲಿದೆ. ಬರೋಬ್ಬರಿ 10,000 ರೂಪಾಯಿ ಒಂದು ಕ್ವಿಂಟಲ್ ಅಡಿಕೆಗೆ ಕಡಿಮೆಯಾಗಿದೆ. ಇದರಿಂದಾಗಿ ಸಣ್ಣ, ಮಧ್ಯಮ ರೈತರು ನಷ್ಟ ಅನುಭವಿಸಿದ್ದಾರೆ. ಈ ಬಾರಿ ಅಡಿಕೆ ಇಳುವರಿ ಕಡಿಮೆ ಬಂದಿದೆ.
ಒಂದು ಹೇಕ್ಟೇರ್ಗೆ ಕೇವಲ ಐದು ಕ್ವಿಂಟಲ್ ಅಡಿಕೆ ಆಗಿದೆ. ಅಂದರೆ ಒಂದು ಹೆಕ್ಟೇರ್ ಹೊಂದಿದವರು 50,000 ರೂಪಾಯಿ ನಷ್ಟ ಅನುಭವಿಸಿದ್ದಾರೆ. ಬೆಳೆಯೂ ಕಡಿಮೆ, ಧಾರಣೆಯೂ ಕುಸಿತ, ಅಡಿಕೆ ಗಿಡಗಳು ಒಣಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರು ದುಬಾರಿ ಹಣ ಕೊಟ್ಟು, ಅಕ್ರಮವಾಗಿ ಪಂಪ್ಸೆಟ್ ಹಾಕಿ ತೋಟಗಳಿಗೆ ನೀರುಣಿಸಬೇಕಾಗಿದೆ. ಜಿಲ್ಲಾಡಳಿತವು ಅಕ್ರಮವಾಗಿ ಪಂಪ್ಸೆಟ್ ಅಳವಡಿಸಿರುವುದನ್ನು ತೆಗೆದುಹಾಕಲಾಗುತ್ತಿದೆ. ಹಾಗಾಗಿ, ತೋಟ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ.
ಅಡಿಕೆಗೆ ಮತ್ತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಭೀತಿ ಎದುರಾಗಿದೆ. ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಕರಾವಳಿ ಮಾರುಕಟ್ಟೆಗಳಿಗೆ ಆಗಮಿಸುತ್ತಿರುವುದೇ ಈ ಆತಂಕಕ್ಕೆ ಕಾರಣ. ಅತ್ಯಂತ ಹೆಚ್ಚು ಗುಣಮಟ್ಟದ ಅಡಿಕೆ ಬೆಳೆಯುವ ಪ್ರದೇಶವಾದ ಮಲೆನಾಡು, ಬಯಲಸೀಮೆ ಹಾಗೂ ಮಧ್ಯಕರ್ನಾಟಕ, ಕರಾವಳಿ ಭಾಗದ ಅಡಿಕೆಗೆ ಉತ್ತರ ಭಾರತದ ಹಲವೆಡೆ ಭಾರೀ ಬೇಡಿಕೆಯಿದೆ.
ಈ ಬೇಡಿಕೆಗಳಿಗೆ ಅನುಗುಣವಾಗಿ ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯನ್ನು ಬೆಳೆಯುತ್ತಿದ್ದು, ಕೊರೊನಾ ಲಾಕ್ಡೌನ್ ಬಳಿಕ ಅಡಿಕೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಧಾರಣೆ ಲಭಿಸುತ್ತಿತ್ತು. ಕೆ.ಜಿ.ಗೆ 500 ರೂಪಾಯಿ ಗಡಿದಾಟಿದ್ದ ಅಡಿಕೆ ಬೆಲೆ ಇದೀಗ ನಿಧಾನವಾಗಿ ಕುಸಿಯಲಾರಂಭಿಸುತ್ತಿದೆ.
ಹಳೆ ಅಡಿಕೆ ಬೆಲೆ ಕೆ.ಜಿ.ಗೆ 46ರಿಂದ 48 ರೂಪಾಯಿ ಆಸುಪಾಸಿನಲ್ಲಿದೆ. ಆದರೆ ಬರ್ಮಾ ಹಾಗೂ ಇತರ ಕಡೆಗಳಲ್ಲಿ ಇದೇ ರೀತಿಯ ಅಡಿಕೆಯನ್ನು ಬೆಳೆಯಲಾಗುತ್ತಿದೆ. ದೇಶೀ ಮಾರುಕಟ್ಟೆಗೆ ಹೋಲಿಸಿದರೆ, ಅದರ ಬೆಲೆ ತೀರ ಕಡಿಮೆಯಾಗಿದೆ. ಈ ಅಡಿಕೆಯನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲು ಹಲವು ನಿಬಂಧನೆಗಳಿದ್ದರೂ, ಹೆಚ್ಚಿನ ಲಾಭಗಳಿಸುವ ಉದ್ಧೇಶದಿಂದ ಅಡಿಕೆ ಖರೀದಿದಾರರು ವಿದೇಶಿ ಅಡಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿದ್ದಾರೆ.
ಹೀಗೆ ಆಮದಾಗುವ ಅಡಿಕೆಗಳಲ್ಲಿ ಕೆಲವು ಮಾತ್ರ ತೆರಿಗೆ ಕಟ್ಟಿ ದೇಶಿ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಅದಕ್ಕಿಂತ ದುಪ್ಪಟ್ಟು ಪ್ರಮಾಣದ ಅಡಿಕೆ ಅಕ್ರಮವಾಗಿ ಆಮದಾಗುತ್ತಿದೆ. ಈ ಅಡಿಕೆಯನ್ನು ದಕ್ಷಿಣ ಕನ್ನಡ ಭಾಗದಲ್ಲಿ ಬೆಳೆಯುವ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಬೆರೆಸಿ ಉತ್ತರ ಭಾರತಕ್ಕೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆಯ ಗುಣಮಟ್ಟವೂ ಕುಸಿಯುವ ಜೊತೆಗೆ ಬೆಲೆಯೂ ಕುಸಿಯುವ ಆತಂಕವಿದೆ.
ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ಬದಲಾವಣೆಗಳಾದರೂ, ಅದು ನೇರವಾಗಿ ಅಡಿಕೆ ಬೆಳೆಗಾರನ ಬದುಕಿನ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಜಿಲ್ಲೆಯ ಬಹುತೇಕ ವಹಿವಾಟುಗಳಲ್ಲಿ ಅಡಿಕೆಯ ಪಾತ್ರವೂ ಪ್ರಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಡಿಕೆ ಬೆಳೆಗಾರರ ಹಿತ ಕಾಯಬೇಕಿದೆ ಎಂದು ರೈತರು ಒತ್ತಾಯಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications