ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ: ಪ್ರತಿಭಟನೆ
ದಾವಣಗೆರೆ, ಜನವರಿ 11: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ(ಚಿಗಟೇರಿ) ನಾಲ್ಕುತಿಂಗ ಮಗು ಮೃತವಾಗಿದ್ದು ಮಗು ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ ನಡೆದಿದೆ. ಜಿಲ್ಲಾಸ್ಪ್ರತ್ರೆ ಎದುರು ವೈದ್ಯರು ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆಯ ಅವರಗೆರೆ ನಿವಾಸಿಗಳು ನಾಲ್ಕು ತಿಂಗಳ ಮಗುವನ್ನು ಹಾಲು ಕುಡಿಯುತ್ತಿಲ್ಲ ಎಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ್ದು, ಶ್ವಾಸಸಂಬಂಧಿ ತೊಂದರೆಯಿಂದ ಮಗು ಬುಧವಾರ ಬೆಳಗ್ಗೆ 4 ಗಂಟೆ ವೇಳೆ ಮೃತವಾಗಿದೆ. ಆಕ್ರೋಶಗೊಂಡ ಮಗುವಿನ ಸಂಬಂಧಿಕರು ಆಸ್ಪತ್ರೆಯ ವೈದ್ಯರ ಕಪಾಳಕ್ಕೆ ಬಾರಿಸಿ ಹಲ್ಲೆ ಮಾಡಿದ್ದಾರೆ. ಸಿಬ್ಬಂದಿ ಮತ್ತು ನರ್ಸ್ ಗಳನ್ನು ಥಳಿಸಿದ್ದಾರೆ ಎನ್ನಲಾಗಿದೆ.[ವ್ಯಾಕ್, ಗಬ್ಬು ನಾರುತ್ತಿರುವ ಚಾಮರಾಜನಗರ ಜಿಲ್ಲಾಸ್ಪತ್ರೆ!]

ಮಗುವಿನ ಸಂಬಂಧಕರು ಐದಾರು ಜನರಿದ್ದು ರಾತ್ರಿ ಪಾಳಿಯಲ್ಲಿ ಮೂವರು ವೈದ್ಯರು ಇದ್ದರು ಮಗು ಅಸುನೀಗಿರುವ ಕುರಿತು ಸಂಬಂಧಿಕರು ಖಾಸಗಿ ಕೊಠಡಿಯಲ್ಲಿ ಓಡಾಡಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಹೀಗಾಗಿ ವೈದ್ಯರು ತಮ್ಮ ಕರ್ತವ್ಯವನ್ನು ತ್ಯಜಿಸಿ ಜಿಲ್ಲಾ ಆಸ್ಪತ್ರೆ ಎದಿರು ಪ್ರತಿಭಟಿಸುತ್ತಿದ್ದಾರೆ ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ಮುಖ್ಯ ವೈದ್ಯೆ ಡಾ. ನಿಲಾಂಬಿಕೆ ತಿಳಿಸಿದರು.

ಮಗು ಕಳೆದುಕೊಂಡ ಆಕ್ರೋಶದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ವೈದ್ಯರು ದಾವಣಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವೈದ್ಯರು ಈ ಕುರಿತು ತಮ್ಮ ಜೀವ ಭದ್ರತೆಗಾಗಿ ಪ್ರತಿಭಟಿಸುತ್ತಿದ್ದು ರೋಗಿಗಳನ್ನು ಯಾರು ಗಮನಿಸಬೇಕು ಎಂಬುದೇ ಪ್ರಶ್ನೆಯಾಗಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications