ಮಗು ಅಪಹರಣಕ್ಕೆ ಯತ್ನ, ಜನರಿಂದ ಕಳ್ಳನಿಗೆ ಧರ್ಮದೇಟು
ದಾವಣಗೆರೆ, ಫೆಬ್ರವರಿ 23: ಮನೆಯ ಮುಂಭಾಗ ಮಕ್ಕಳ ಜೊತೆ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವನ್ನು ಕುಡುಕನೊಬ್ಬ ಅಪಹರಣ ಮಾಡುತ್ತಿದ್ದ ಎಂದು ಆರೋಪಿಸಿ ಕುಡುಕನಿಗೆ ಧರ್ಮದೇಟು ನೀಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ನಗರದ ಶಂಕರ್ ವಿಹಾರ ಬಡಾವಣೆಯಲ್ಲಿ ಅಹ್ಮದ್ ಷರೀಪ್ ಎನ್ನುವವರ ನಾಲ್ಕು ವರ್ಷದ ಹೆಣ್ಣುಮಗು, ಮಕ್ಕಳ ಜೊತೆ ಆಟವಾಡುತ್ತಿದಾಗ ಕುಡಿದ ಅಮಲಿನಲ್ಲಿ ಇರುವ ಪರಸಪ್ಪ ಎಂಬ ವ್ಯಕ್ತಿ ಮಗುವನ್ನು ಅಪಹರಿಸಿಕೊಂಡು ಹೋಗಲು ಮುಂದಾಗಿದ್ದಾನೆ.
ಮಗುವನ್ನು ಅಪಹರಣ ಮಾಡುತ್ತಿರುವುದನ್ನು ಕಂಡ ಅಲ್ಲಿನ ಸ್ಥಳೀಯರು ಹಾಗೂ ಮಗುವಿನ ಪೋಷಕರು ಪರಸಪ್ಪನನ್ನು ಹಿಡಿಯಲು ಹೋದರೆ ಓಡಿ ಹೋಗಲು ಯತ್ನಿಸಿದ್ದು, ಜನರ ಕೈಗೆ ಸಿಕ್ಕ ಪರಸಪ್ಪನಿಗೆ ಧರ್ಮದೇಟು ಕೊಟ್ಟಿದ್ದಾರೆ. ಅಲ್ಲದೆ ಕ್ಷಣಕ್ಕೊಂದು ವಿಳಾಸ ಹೇಳುತ್ತ, ತಾನು ಅಪಹರಣ ಮಾಡಲು ಬಂದಿಲ್ಲ ಎಂದು ಹೇಳುತ್ತಿದ್ದ ಆತನನ್ನು ಹಿಡಿದರು ಮಹಿಳಾ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಂಠ ಪೂರ್ತಿ ಕುಡಿದು ಮಾತನಾಡದ ಸ್ಥಿತಿಯಲ್ಲಿ ಇಲ್ಲದ ಆರೋಪಿಯನ್ನು ಪೊಲೀಸರು ಠಾಣೆಯಲ್ಲಿ ಇರಿಸಿಕೊಂಡಿದ್ದು, ಮಗುವಿನ ಪೋಷಕರು ಪರಸಪ್ಪನ ಮೇಲೆ ಅಪಹರಣ ಕೇಸ್ ದಾಖಲಿಸಲು ಮುಂದಾಗಿದ್ದಾರೆ.
ಇನ್ನು ಶಂಕರ್ ವಿಹಾರ್ ಬಡಾವಣೆಯ ಪಕ್ಕದಲ್ಲಿ ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಕುಡುಕರ ಅಡ್ಡೆಯಾಗಿ ಪರಿಣಮಿಸಿದೆ. ಮಗುವನ್ನು ಅಪಹರಣ ಮಾಡುವಾಗ ನಮ್ಮ ಕಣ್ಣಿಗೆ ಬಿತ್ತು, ಇಲ್ಲವಾಗಿದ್ದರೆ ಮಗು ಅಪಹರಣವಾಗುತ್ತಿತ್ತು ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ. .

ಕೂಡಲೇ ಪೊಲೀಸರು ಅನೈತಿಕ ತಾಣಗಳಲ್ಲಿ ಪೊಲೀಸ್ ಬೀಟ್ ಹಾಕಬೇಕು ಹಾಗೂ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆ ವಿಧಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications