ಅಪ್ಪ ಮಗನ ತಂತ್ರ ಇದು ಎಂದು ಜಾಡಿಸಿದ ಆಯನೂರು ಮಂಜುನಾಥ್
ದಾವಣಗೆರೆ, ನವೆಂಬರ್ 26: "ಯಡಿಯೂರಪ್ಪನವರನ್ನು ಎತ್ತಾಕುವ ವಿದ್ಯೆಯನ್ನು ಅಪ್ಪ ಮಗ ಸೇರಿ ಹೆಣೆಯುತ್ತಿದ್ದಾರೆ" ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಎಚ್ ಡಿ ದೇವೇಗೌಡ ಅವರ ವಿರುದ್ಧ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಶಾಸಕ ಎಸ್.ಎ. ರವೀಂದ್ರನಾಥ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, "ಬಿಜೆಪಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಖಚಿತ. ಈ ಕಾರಣಕ್ಕಾಗೇ ಜೆಡಿಎಸ್ ಬಿಜೆಪಿಯನ್ನು ಸಮರ್ಥಿಸಿಕೊಂಡು ಬರುತ್ತಿದೆ. ಒಂದು ಕಡೆ ಅನರ್ಹ ಶಾಸಕರನ್ನು ಸೋಲಿಸುತ್ತೇವೆ ಎನ್ನುತ್ತಾರೆ, ಮತ್ತೊಂದು ಕಡೆ ಯಡಿಯೂರಪ್ಪನವರ ಸರ್ಕಾರ ಬೀಳಲು ಬಿಡೋಲ್ಲ ಎನ್ನುತ್ತಿದ್ದಾರೆ. ಯಾಕಂದ್ರೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತರೆ ಇವರ ಬೆನ್ನ ಮೇಲೆ ಯಡಿಯೂರಪ್ಪನವರನ್ನು ಕೂರಿಸಿಕೊಳ್ಳಬೇಕು ಎನ್ನುವ ತಂತ್ರ ರೂಪಿಸಿದ್ದಾರೆ" ಎಂದು ಹೇಳಿದರು.

"ಹಿಂದಿನ ಸಾರಿ ಎತ್ತಾಕಿದರಲ್ಲ, ಈಗಲೂ ಅದನ್ನೇ ಮಾಡೋಕೆ ಹೊರಟಿದ್ದಾರೆ. ಇಂಥ ಎತ್ತಾಕುವಂತಹ ವಿದ್ಯೆಯನ್ನು ಅಪ್ಪ ಮಗ ಹೆಣೆದಿದ್ದಾರೆ. ಆದರೆ ಜನರಿಗೆ ಇದೆಲ್ಲ ಗೊತ್ತಿದೆ, ಆದಕಾರಣ ಬಿಜೆಪಿಯನ್ನು ಸೋಲಿಸಲು ಬಿಡೋದಿಲ್ಲ. ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಮುಂದುವರೆಯುತ್ತದೆ. ಯಡಿಯೂರಪ್ಪನವರ ನೇತೃತ್ವದಲ್ಲಿ 15ಕ್ಕೆ 15 ಅನ್ನು ಗೆಲ್ಲುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications