B-khata: ಬಿ ಖಾತಾ ಪಡೆಯಲು ಹೆಚ್ಚುವರಿ ಶುಲ್ಕ ಪಾವತಿಸಿದವರಿಗೆ ಮಹತ್ವದ ಮಾಹಿತಿ
B-khata: ಬಿ ಖಾತಾ ನೀಡಲು ಅರ್ಜಿದಾರರಿಂದ ಹೆಚ್ಚುವರಿ ಶುಲ್ಕ ಪಡೆಯಲಾಗುತ್ತದೆ ಎನ್ನುವ ಆರೋಪ ಕೇಳಿಬಂದಿತ್ತು. ದಾವಣಗೆರೆ ಪಾಲಿಕೆಯಲ್ಲಿ ಹೆಚ್ಚುವರಿ ಶುಲ್ಕ ಪಡೆಯಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸರ್ಕಾರ ಸಮರ ಸಾರಲು ಮುಂದಾಗಿದೆ. ಹಾಗಾದ್ರೆ ಅರ್ಜಿದಾರರು ಈ ಹಣವನ್ನು ಪಾಪಾಸ್ ಪಡೆಯಲು ಯಾವೆಲ್ಲಾ ಮಾರ್ಗಗಳನ್ನು ಅನುಸರಿಸಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಅನಧಿಕೃತ ಬಡಾವಣೆಯ ಸೈಟ್, ಮನೆ, ಕಟ್ಟಡಗಳಿಗೆ ಡೋರ್ ನಂಬರ್ ನೀಡಿ, ಇ-ಆಸ್ತಿ ಸೃಷ್ಟಿಸಿ ಬಿ ಖಾತೆ ನೀಡಲು ಅಭಿವೃದ್ಧಿ ಮತ್ತು ಸುಧಾರಣೆಯ ಹೆಸರಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಅರ್ಜಿದಾರರಿಂದ ಹೆಚ್ಚು ಶುಲ್ಕ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಸರ್ಕಾರವು ಪಾಲಿಕೆಯಲ್ಲಿ ಪಡೆಯುತ್ತಿದ್ದ 10,000 ರೂಪಾಯಿ ಶುಲ್ಕವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಆರೋಪಗಳು ಹಾಗೂ ಅರ್ಜಿದಾರರು ಗಮನಿಸಬೇಕಾದ ಅಂಶಗಳು
* ಅಭಿವೃದ್ಧಿ ಮತ್ತು ಸುಧಾರಣೆಯ ಹೆಸರಿನಲ್ಲಿ ಪಡೆಯುತ್ತಿದ್ದ 10,000 ರೂಪಾಯಿ ಹೆಚ್ಚುವರಿ ಶುಲ್ಕ ರದ್ದುಪಡಿಸಲಾಗುತ್ತದೆ.
* ಸರ್ಕಾರ ಬಿ ಖಾತೆಗೆ ನಿಗದಿಪಡಿಸಿದ್ದ ದರದ ಜೊತೆಗೆ ದಾವಣಗೆರೆ ಮಹಾನಗರ ಪಾಲಿಕೆ ಹೆಚ್ಚುವರಿ ಶುಲ್ಕ ಪಡೆಯತ್ತಿತ್ತು.
* ಈಗಾಗಲೇ ಹೆಚ್ಚುವರಿ ಶುಲ್ಕ ಪಾವತಿ ಮಾಡಿದವರು ರಶೀದಿಯೊಂದಿಗೆ ಪಾಲಿಕೆ ವಲಯ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ರೆ ಶುಲ್ಕ ಹಿಂದಿರುಗಿಸಲಾಗುತ್ತದೆ ಎನ್ನವ ಮಾಹಿತಿ ಲಭ್ಯವಾಗಿದೆ.
ಭೂಪರಿವರ್ತನೆ ಆಗದೇ ಅನಧಿಕೃತ ಬಡಾವಣೆಯ ನಿವೇಶನ, ಮನೆ, ಕಟ್ಟಡಗಳಿಗೆ ಬಿ ಖಾತಾ ನೀಡುವ ಅಭಿಯಾನ ನಡೆಯುತ್ತಿದ್ದು, ಈ ವೇಳೆ ದಾವಣಗೆರೆ ಮಹಾನಗರ ಪಾಲಿಕೆಯು ಅರ್ಜಿದಾರರಿಂದ ಬಿ ಖಾತಾ ನೀಡಲು ಹೆಚ್ಚುವರಿ 10,000 ರೂಪಾಯಿ ಶುಲ್ಕ ಪಡೆಯುತ್ತಿರುವ ಆರೋಪ ಕೇಳಿಬಂದಿತ್ತು.
ರಾಜ್ಯದ ಯಾವುದೇ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳಲ್ಲಿ ಅಭಿವೃದ್ಧಿ ಮತ್ತು ಸುಧಾರಣೆ ಶುಲ್ಕ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರಲಿಲ್ಲ. ಆದರೆ, ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮಾತ್ರ ಹೊಸದಾಗಿ ಡೋರ್ ನಂಬರ್ ನೀಡಲು ಶುಲ್ಕ ಪಡೆಯಲಾಗುತ್ತಿತ್ತು ಎನ್ನುವ ಆರೋಪ ಕೇಳಿಬಂದಿತ್ತು.
ನಿಯಮದ ಪ್ರಕಾರ ಖಿ ಖಾತಾ ಮಾಡಿಸಲು ಸರ್ಕಾರ ನಿಗದಿಪಡಿಸಿದ ಶುಲ್ಕವನ್ನು ಮಾತ್ರ ಪಾವತಿಸಬೇಕು. ಬೇರೆ ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯ ಇಲ್ಲ. ಈಗಾಗಲೇ ಹೆಚ್ಚುವರಿ ಶುಲ್ಕ ಪಾವತಿ ಮಾಡಿರುವವರು ರಶೀದಿ ಜೊತೆಗೆ ಮನವಿ ಸಲ್ಲಿಸಿದರೆ, ಕಟ್ಟಿರುವ ಶುಲ್ಕವ್ನು ಹಿಂದಿರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದಾರೆ.
-
Bda: ಬಿಡಿಎ ಮುಕ್ತ ಸಂವಾದದಿಂದ ಸೈನಿಕರ ಸಮಸ್ಯೆಗೆ ಪರಿಹಾರ: ಬೆಂಗಳೂರು ಆಸ್ತಿದಾರರಿಗೆ ಇಲ್ಲಿದೆ ಗುಡ್ನ್ಯೂಸ್ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications