ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: 2651 ಹೆಕ್ಟೇರ್ ಬೆಳೆಹಾನಿ, ಸೂಕ್ತ ಪರಿಹಾರ- ಕೃಷಿ ಸಚಿವ ಬಿ.ಸಿ ಪಾಟೀಲ್

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ21: ರಾಜ್ಯಾದ್ಯಂತ ಬಿದ್ದ ಅಕಾಲಿಕ ಮಳೆಯಿಂದ ದಾವಣಗೆರೆ ಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆ ನಾಶವಾಗಿದೆ. ಹಾನಿಗೊಳಗಾದ ಎಲ್ಲಾ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ಹರಿಹರ ತಾಲ್ಲೂಕಿನ ನಂದಿತಾವರೆ ಬಳಿಯ ಭಾಸ್ಕರರಾವ್ ಕ್ಯಾಂಪಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 40 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಅಕಾಲಿಕ ಮಳೆಯಿಂದ ಪ್ರವಾಹ ಬಂದು ಎಲೆಬಳ್ಳಿ, ಅಡಿಕೆ, ಭತ್ತ ಬೆಳೆ ಹಾನಿಯಾಗಿದೆಯೋ, ಅಲ್ಲೆಲ್ಲಾ ಸಂಪೂರ್ಣ ಸರ್ವೆ ನಡೆಸಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಸಲ್ಲಿಸಿದ ಬಳಿಕ ತಕ್ಷಣ ಸರ್ಕಾರದಿಂದ ರೈತರಿಗೆ ಪರಿಹಾರ ನೀಡುವ ಪ್ರಯತ್ನ ಮಾಡಲಾಗುವುದು. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೊಳ್ಳದೇ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಅಂದಾಜು ಮಾಡುವುದು ಹಾಗೂ ಅವರಿಗೆ ಸೂಕ್ತ ಬೆಳೆಹಾನಿ ಪರಿಹಾರ ನೀಡುವುದರತ್ತ ಗಮನ ಹರಿಸಬೇಕೆಂದರು.

ರೈತರಿಗೆ ಆತಂಕ ಬೇಡ: ಭತ್ತದ ಬೆಳೆಗೆ ಪರಿಹಾರ

ದಾವಣಗೆರೆ ಜಿಲ್ಲೆಯ ಮಲೆಬೇನ್ನೂರು, ಬಿಳಿಚೋಡು, ಚನ್ನಗಿರಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಹಾನಿಯಾಗಿದೆ. ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪರಿಹಾರ ಕೊಡಲಾಗುವುದು. ಕಳೆದ ಬಾರಿ ಕೇಂದ್ರ ಸರ್ಕಾರದ ಎನ್‍ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚಿಗೆ ಪರಿಹಾರ ಹಣ ನೀಡಲಾಗಿದೆ. ಪ್ರಸ್ತುತ ವರ್ಷವೂ ಅಷ್ಟೇ ಪ್ರಮಾಣದಲ್ಲಿ ಪರಿಹಾರ ನೀಡಲಾಗುವುದು. 2021-22 ನೇ ಸಾಲಿನ ವಿಮಾ ಹಣ ಇನ್ನೊಂದು ವಾರದಲ್ಲಿ ರೈತರ ಕೈ ಸೇರಲಿದೆ ಎಂದು ತಿಳಿಸಿದರು.ಭತ್ತದ ಬೆಳೆಗೆ ವಿಮಾ ಪರಿಹಾರ ವಿಷಯದಲ್ಲಿ ರೈತರಿಗೆ ಆತಂಕ ಬೇಡ, ಬಿರುಗಾಳಿಗೆ ಭತ್ತ ನೆಲಕ್ಕೆ ಬಿದ್ದಿರುವುದರಿಂದ ಅದು ಪ್ರಕೃತಿ ವಿಕೋಪ ಪರಿಹಾರದಡಿ ಬರುತ್ತದೆ, ಹಾಗಾಗಿ ಭತ್ತದ ಬೆಳೆಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.

Davanagere: BC Patil visits rain hit agriculture lands in davanagere district

ರಸಗೊಬ್ಬರ-ಬೀಜದ ಕೊರತೆ: ಶೀಘ್ರ ಅಧಿಕಾರಿಗಳ ಜೊತೆ ಸಭೆ

ಈಗಾಗಲೇ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರಸಕ್ತ ವರ್ಷ ಈಗಷ್ಟೇ ಮುಂಗಾರು ಪ್ರಾರಂಭವಾಗಿದೆ, ದುರುದ್ದೇಶದಿಂದ ವ್ಯಾಪಾರಸ್ಥರು ಅಕ್ರಮವಾಗಿ ಸಂಗ್ರಹಣೆ ಮಾಡಿಕೊಂಡು ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕೋಸ್ಕರ ರಸಗೊಬ್ಬರ ಮತ್ತು ಬೀಜದ ಕೊರತೆಯಾಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಸಗೊಬ್ಬರ ಮತ್ತು ಬೀಜಕ್ಕೆ ಯಾವುದೇ ರೀತಿಯ ಕೊರತೆಯಿಲ್ಲ ಹಾಗಾಗಿ ಜಿಲ್ಲಾಧಿಕಾರಿಗಳು, ಕೃಷಿ ಇಲಾಖೆ, ಪೊಲೀಸ್ ಇಲಾಖೆ, ಕೃತಕ ಗೊಬ್ಬರದ ಅಭಾವ ಉಂಟಾಗುವಂತೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಿ, ಯಾವುದೇ ರೀತಿಯ ರಸಗೊಬ್ಬರ ಮತ್ತು ಬೀಜದ ಕೊರತೆಯಾಗದಂತೆ ನೋಡಿಕೊಂಡು ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ರಷ್ಯಾ-ಉಕ್ರೇನ್ ಯುದ್ದ ಹಿನ್ನೆಲೆ ರಸಗೊಬ್ಬರ ಬೆಲೆ ಏರಿಕೆ

ರಷ್ಯಾ-ಉಕ್ರೇನ್ ಯುದ್ದ ನಡೆಯುತ್ತಿರುವ ಹಿನ್ನೆಲೆ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಆದರೆ ಕೇಂದ್ರ ಸರ್ಕಾರ 2 ಲಕ್ಷದ 39 ಸಾವಿರ ಕೋಟಿ ರೂಪಾಯಿಯ ಸಹಾಯಧನವನ್ನು ರಸಗೊಬ್ಬರಗಳಿಗೆ ನೀಡುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಚೀಲ ಡಿಎಪಿ ಬೆಲೆ 3851.ರೂ ಇದೆ ಅದನ್ನು ರೈತರಿಗೆ 2501.ರೂ ಸಹಾಯಧನ ನೀಡಿ 1361 ರೂ.ಗೆ ಮಾರಾಟ ಮಾಡಲಾಗುತ್ತದೆ. ಯೂರಿಯಾ ಬೆಲೆ 1666.ರೂ ಇದೆ, ಅದಕ್ಕೆ 1400.ರೂ ಸಹಾಯಧನ ನೀಡಿ 266 ರೂಗೆ ಮಾರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.

Davanagere: BC Patil visits rain hit agriculture lands in davanagere district

ಬಹು ಬೆಳೆಗೆ ಆದ್ಯತೆ ನೀಡಿ

ರೈತರು ವಿವಿಧ ಬೆಳೆ ಬೆಳೆಯುವ ಮೂಲಕ ಸಮತೋಲನ ಕಾಪಾಡಬೇಕು. ಯಾವುದಾದರೊಂದು ಬೆಳೆ ಬೆಲೆ ಕೈಕೊಟ್ಟರೆ ಮತ್ತೊಂದು ಬೆಳೆ ಕೈ ಹಿಡಿಯುತ್ತದೆ, ಹಾಗಾಗಿ ಒಂದೇ ಬೆಳೆ ಬೆಳೆಯದೆ ಬಹು ಬೆಳೆಗಳನ್ನು ಬೆಳೆಯುವತ್ತ ರೈತರು ಗಮನ ಹರಿಸಬೇಕೆಂದರು.

English summary
Davanagere: Pre Mansoon rain that fell across the state, 2651 hectares crop destroyed in Davanagere district, Agriculture Minister BC Patel proper relief shortly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X