ಲೋಳೆಸರಕ್ಕೆ 50 ಕೆ.ಜಿ ಕಲ್ಲು ನೇತು ಹಾಕಿದರೂ ಬೀಳಲ್ಲ, ಇದು ಬೀರಲಿಂಗೇಶ್ವರ ಪವಾಡ
ದಾವಣಗೆರೆ, ಡಿಸೆಂಬರ್ 9: ಪ್ರತಿ ಕಾರ್ತಿಕ ಮಾಸದಲ್ಲಿ ದಾವಣಗೆರೆಯ ಹರಿಹರದ ಬೆಳ್ಳೋಡಿ ಗ್ರಾಮದಲ್ಲಿ ಹುಣ್ಣಿಮೆಗಿಂತ ಮೊದಲು ನಡೆಯುವ ಈ ಕಾರ್ತಿಕೋತ್ಸವ ಪವಾಡಕ್ಕೆ ಹೆಸರು. ಈ ಬಾರಿಯೂ ಅಂಥದ್ದೊಂದು ಪವಾಡವನ್ನು ಕಾರ್ತಿಕೋತ್ಸವದಲ್ಲಿ ನಡೆಸಲಾಗಿದೆ.
ನಿನ್ನೆ ಭಾನುವಾರ ಗ್ರಾಮದಲ್ಲಿ ಬೀರಲಿಂಗೇಶ್ವರ ಕಾರ್ತೀಕೋತ್ಸವ ನಡೆದಿದೆ. ಈ ಉತ್ಸವದಲ್ಲಿ ಲೋಳೆಸರಕ್ಕೆ ಎರಡು ಕುಡುಗೋಲನ್ನು ಹಾಕಿ ಅದಕ್ಕೆ 50 ಕೆ.ಜಿ ತೂಕದ ಕಲ್ಲು ಕಟ್ಟಿ ತೂಗಿಬಿಟ್ಟು ಪವಾಡ ನಡೆಸಲಾಗಿದೆ.
ಗ್ರಾಮದಲ್ಲಿ ಪ್ರತಿ ಕಾರ್ತಿಕ ಮಾಸದಲ್ಲಿ ಹುಣ್ಣಿಮೆಗಿಂತ ಮೊದಲು ಈ ಕಾರ್ತಿಕೋತ್ಸವ ನಡೆಯುತ್ತಿದ್ದು, ಕಾರ್ತಿಕೋತ್ಸವದಲ್ಲಿ ಪವಾಡವೇ ಪ್ರಮುಖ ಕಾರ್ಯಕ್ರಮವಾಗಿರುತ್ತದೆ. ಈ ಬಾರಿ ದೇವಾಲಯದಲ್ಲಿ ಒಂದು ಲೋಳಸರಕ್ಕೆ ಎರಡು ಕುಡುಗೋಲನ್ನು ಹಾಕಿ ಅದಕ್ಕೆ 50 ಕೆ.ಜಿ ತೂಕದ ಕಲ್ಲಿನ ಗುಂಡನ್ನು ತೂಗುಬಿಟ್ಟಿದ್ದಾರೆ. ಸಾಮಾನ್ಯವಾದ ಲೋಳೆಸರಕ್ಕೆ 50 ಕೆಜಿ ತೂಕದ ಕಲ್ಲಿನ ಗುಂಡನ್ನು ತೂಗಿ ಹಾಕಿದರೂ ಬೀಳದೇ ತಡೆದುಕೊಳ್ಳುತ್ತದೆ ಎಂಬುದೇ ಇಲ್ಲಿನ ಪವಾಡ.

ಕಾರ್ತಿಕ ಮಾಸದಲ್ಲಿ ಬೀರಲಿಂಗೇಶ್ವರ ದೇವಾಲಯದ ಆರ್ಚಕರು ಉಪವಾಸವಿದ್ದು, ಈ ಪವಾಡ ನಡೆಸುತ್ತಾರೆ. ಈ ಪವಾಡವನ್ನು ನೋಡಿ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಗಳು ಕೂಡ ಅಚ್ಚರಿಗೊಂಡಿದ್ದಾರೆ. ಪ್ರತಿ ವರ್ಷ ಪವಾಡವನ್ನು ನೋಡಲು ದೂರದೂರಿನಿಂದ ಜನರು ಆಗಮಿಸಿ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.

ಪ್ರತಿ ವರ್ಷವೂ ಇದೇ ರೀತಿಯ ಪವಾಡ ನಡೆಸುತ್ತಿದ್ದು, ಸಂಜೆ ವೇಳೆ ತುಂಬಿದ ಕೊಡಕ್ಕೆ ಪೂಜಿಸಿದ ಬಟ್ಟೆ ಕಟ್ಟಿ ಅದನ್ನು ಉಲ್ಟಾ ಮಾಡಿ ನೇತು ಹಾಕುತ್ತಾರೆ. ತುಂಬಿದ ಕೊಡದಿಂದ ಒಂದು ಹನಿ ನೀರೂ ಹೊರ ಬರುವುದಿಲ್ಲ. ಇದೆಲ್ಲ ಬೀರಲಿಂಗೇಶ್ವರ ದೇವರ ಪವಾಡ ಎನ್ನುತ್ತಾರೆ ಅರ್ಚಕರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications