ದಾವಣಗೆರೆ: ಹಾಲಿ ಸಂಸದ ಜಿಎಂ ಸಿದ್ದೇಶ್ವರ ನಾಮಪತ್ರ ತಿರಸ್ಕೃತ
ದಾವಣಗೆರೆ, ಏಪ್ರಿಲ್. 20: ಈ ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಹಾಲಿ ಸಂಸದ ಜಿಎಂ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಡ ಮಾಜಿ ಸಚಿವ ರೇಣುಕಾಚಾರ್ಯರಿಂದ ಕೇಳಿ ಬಂದಿತ್ತು. ಬಳಿಕ ಬಿಜೆಪಿ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರನ್ನು ಕಣಕ್ಕಿಳಿಸಿದೆ.
ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಜೊತೆಗೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ ಅವರು ಬಿಜೆಪಿ ಪರ್ಯಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಅವರ ನಾಮಪತ್ರ ತಿರಸ್ಕೃತವಾಗಿದೆ. ಏಪ್ರಿಲ್ 20 ರಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಜಿಎಂ ಸಿದ್ದೇಶ್ವರ ಸೇರಿ ಒಟ್ಟು 12 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ.

ಲೋಕಸಭಾ ಚುನಾವಣೆ ನಡೆಯುತ್ತಿದ್ದು 33 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿತ್ತು. ಒಟ್ಟು 40 ಅಭ್ಯರ್ಥಿಗಳಿಂದ 54 ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಏಪ್ರಿಲ್ 20 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಾಮಪತ್ರಗಳ ಪರಿಶೀಲನೆಯು ಚುನಾವಣಾ ವೀಕ್ಷಕರಾದ ಎಂ.ಲಶ್ಮಿ ಹಾಗೂ ಅಭ್ಯರ್ಥಿಗಳ ಸಮ್ಮುಖದಲ್ಲಿ ನಡೆಯಿತು. ಒಟ್ಟು ಸಲ್ಲಿಕೆಯಾದ 54 ನಾಮಪತ್ರಗಳಲ್ಲಿ 42 ನಾಮಪತ್ರಗಳು ಕ್ರಮಬದ್ದವಾಗಿದ್ದು, 12 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ನಾಮಪತ್ರ ಸಲ್ಲಿಸಿದ 40 ಅಭ್ಯರ್ಥಿಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರ ಸಂಪೂರ್ಣವಾಗಿ ತಿರಸ್ಕೃತವಾಗಿವೆ.

ನಾಮಪತ್ರ ಸಂಪೂರ್ಣ ತಿರಸ್ಕೃತರಾದವರ ವಿವರ
ರಾಘವೇಂದ್ರ ಜಿ.ಪಿ ಕೆ.ಆರ್.ಎಸ್ ಪಕ್ಷ, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಭಾನ್ ಖಾನ್, ಸಿ.ಎಂ.ಮಂಜುನಾಥಸ್ವಾಮಿ, ಎಂ.ರಂಗನಾಥಸ್ವಾಮಿ, ಪ್ರಸನ್ನ ಬಿ.ಆರ್, ಕರನಂ ಕೊಟ್ರಪ್ಪ ಮತ್ತು ಬಿಜೆಪಿಯಿಂದ ಪರ್ಯಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ಜಿ.ಎಂ.ಸಿದ್ದೇಶ್ವರ ಇವರ ಸಂಪೂರ್ಣ ಉಮ್ಮೇದುವಾರಿಕೆ ತಿರಸ್ಕರಿಸಲಾಗಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏಪ್ರಿಲ್ 19 ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಬಿಜೆಪಿಯಿಂದ ಜಿ.ಎಸ್. ಗಾಯಿತ್ರಿ 3 ನಾಮಪತ್ರ, ಜಿ.ಎಂ.ಸಿದ್ದೇಶ್ವರ ಅವರು ಬಿಜೆಪಿ 3 ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ನಾಲ್ಕು ನಾಮಪತ್ರ ಸಲ್ಲಿಸಿದ್ದರು.
ಪತಿಗೆ ಕೊಕ್, ಪತ್ನಿಗೆ ಟಿಕೆಟ್
ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಿಂದ ನಿರಂತರ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು. ಈಗ ಅವರ ಪತ್ನಿ 59 ವರ್ಷದ ಗಾಯತ್ರಿ ಸಿದ್ದೇಶ್ವರ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಮೂಲತಃ ಶಿವಮೊಗ್ಗದವರಾದ ಗಾಯತ್ರಿ ಸಿದ್ದೇಶ್ವರ, ಅಲ್ಲಿನ ನ್ಯಾಷನಲ್ ಬಾಲಕಿಯರ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದಾರೆ. ಪತಿಯ ಪರ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ಅವರು, ಈ ಭಾರಿ ತಮಗಾಗಿ ಪ್ರಚಾರಕ್ಕೆ ಇಳಿಸಿದ್ದಾರೆ.
ಇನ್ನು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾದ ಏಪ್ರಿಲ್ 12 ರಂದು ಐದು ಅಭ್ಯರ್ಥಿಗಳಿಂದ 6 ನಾಮಪತ್ರಗಳು, ಏಪ್ರಿಲ್ 15 ರಂದು 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು, ಏಪ್ರಿಲ್.16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು, ಏಪ್ರಿಲ್17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರ, ಏಪ್ರಿಲ್18 ರಂದು 10 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಹಾಗೂ ಕೊನೆ ದಿನ ಏಪ್ರಿಲ್ 19 ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications