ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ದಾವಣಗೆರೆಗೆ ಬಂದಿದ್ದೇಕೆ?
ದಾವಣಗೆರೆ, ಅಕ್ಟೋಬರ್ 11: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ದಾವಣಗೆರೆಗೆ ಬಂದಿದ್ದರಂತೆ. ಸುದ್ದಿಯೇ ಇಲ್ಲದೆ ಅವರು ದಾವಣಗೆರೆಯ ಜಗಲೂರು ತಾಲೂಕಿಗೆ ಬಂದು ಹೋಗಿದ್ದೇಕೆ ಅಂದ್ರೆ, ಅವರ ಎನ್ ಜಿಒ ಕಾರ್ಯ ಹೇಗೆ ನಡೆಯುತ್ತಿದೆ ಎಂಬುದನ್ನು ಅವಲೋಕಿಸುವುದಕ್ಕೆ.
ಖಿನ್ನತೆಯಿಂದ ಬಳಲುತ್ತಿರುವವರನ್ನು ಈ ಮಾನಸಿಕ ಅಸ್ವಸ್ಥತೆಯಿಂದ ಹೊರತರುವುದಕ್ಕಾಗಿ ಕಳೆದ ವರ್ಷ(2016) ದೀಪಿಕಾ ಪಡುಕೋಣೆಯವರು ಆರಂಭಿಸಿದ ಎನ್ ಜಿಒ 'ದಿ ಲಿವ್ ಲವ್ ಲಾಫ್ ಫೌಂಡೇಷನ್' (The Live Love Laugh Foundation). ವಿಶ್ವ ಮಾನಸಿಕ ಆರೋಗ್ಯ ದಿನ(ಅಕ್ಟೋಬರ್ 10)ದ ನಿಮಿತ್ತ ನಿನ್ನೆ(ಅ.10) ಜಗಳೂರಿನ ಹಳ್ಳಿಯೊಂದಕ್ಕೆ ಭೇಟಿ ನೀಡಿದ ದೀಪಿಕಾ ಪಡುಕೋಣೆ, ತಮ್ಮ ಎನ್ ಜಿಒನಿಂದ ಉಪಯೋಗ ಪಡೆಯುತ್ತಿರುವವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದಿನ ಯಾಂತ್ರಿಕ ಯುಗದಲ್ಲಿ ಒಂಟಿತನ ಅನುಭವಿಸುತ್ತಿರುವ ಹಲವು ಯುವಕರು ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿರುವುದು ಸ್ವತಃ ಮನಶ್ಶಾಸ್ತ್ರಜ್ಞರನ್ನೇ ಅಚ್ಚರಿಗೆ ಸಿಕ್ಕಿಸಿದೆ.
ಖಿನ್ನತೆಯಿಂದ ಹೊರಬರುವುದು ಒಂದೇ ಸವಾಲೇ ಆಗಿರುವ ಹೊತ್ತಲ್ಲಿ, ಬಾಲಿವುಡ್ ನ ಮೋಹಕ ತಾರೆ, ಕನ್ನಡದವರೇ ಆದ ದೀಪಿಕಾ ಪಡುಕೋಣೆ ಖಿನ್ನತೆಯ ವಿರುದ್ಧ ಹೋರಾಡುವುದಕ್ಕಾಗಿ ದಿ ಲಿವ್ ಲವ್ ಲಾಫ್ ಫೌಂಡೇಷನ್ ಶುರುಮಾಡಿದ್ದರು.
ಬಾಲಿವುಡ್ ಚಿತ್ರರಂಗ ಮಾತ್ರವಲ್ಲದೆ ಸದ್ಯಕ್ಕೆ ಹಾಲಿವುಡ್ ಅಂಗಳದಲ್ಲೂ ಮಿಂಚುತ್ತಿರುವ ದೀಪಿಕಾ ಒಂದು ಕಾಲದಲ್ಲಿ ತಾವೇ ಖಿನ್ನತೆಯಿಂದ ಬಳಲುತ್ತಿದ್ದರು. ಆದರೆ ಮನೋಬಲದಿಂದಾಗಿ ಖಿನ್ನತೆಯಿಂದ ಹೊರಬಂದ ದೀಪಿಕಾ ಪಡುಕೋಣೆ, ಈಗ ಖಿನ್ನತೆಗೊಳಗಾಗಿರುವ ಎಷ್ಟೋ ಮಹಿಳೆಯರಿಗೆ ಸ್ವತಃ ಮಾರ್ಗದರ್ಶಿಯಾಗಿದ್ದಾರೆ. ಒಟ್ಟಿನಲ್ಲಿ ತಮ್ಮ ನೂರಾರು ಕೆಲಸಗಳ ನಡುವೆಯೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕನ್ನಡತಿ ದೀಪಿಕಾರ ನಡೆ ಶ್ಲಾಘನೀಯವೇ ಸರಿ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications