ದಾವಣಗೆರೆ ದುಗ್ಗಮ್ಮ ಜಾತ್ರೆಯಲ್ಲಿ ಕೊನೆಗೂ ಕೋಣ ಬಲಿ!
ದಾವಣಗೆರೆ, ಮಾರ್ಚ್ 04: ದಾವಣಗೆರೆಯ ನಗರ ದೇವತೆ ದುಗ್ಗಮ್ಮನ ಜಾತ್ರೆ ಎರಡು ವರ್ಷಗಳಿಗೊಮ್ಮೆ ನಡೆಯಲಿದ್ದು, ಪ್ರಾಣಿ ಬಲಿ ಸಂಪೂರ್ಣ ನಿಷೇಧ ಮಾಡಲಾಗಿತ್ತು. ಅಲ್ಲದೇ ದೇವಸ್ಥಾನ ಸುತ್ತ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಾಣಿ ಬಲಿ ನಿಷೇಧದ ನಡುವೆಯೂ ದಾವಣಗೆರೆ ನಗರ ದುಗ್ಗಮ್ಮನಿಗೆ ಕೋಣ ಬಲಿ ನೀಡಲಾಗಿದೆ.
ನಗರದ ದುಗ್ಗಮ್ಮ ದೇವಸ್ಥಾನ ಸಮೀಪದಲ್ಲೇ ಇರುವ ಸೀಮೆಎಣ್ಣೆ ಬಂಕ್ ಬಳಿಯಲ್ಲಿ ಕೋಣವನ್ನು ಬಲಿ ನೀಡಲಾಗಿದೆ ಎನ್ನಲಾಗಿದೆ. ಕೋಣ ಬಲಿ ನೀಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿತ್ತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ರಾತ್ರಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಅದ್ಯಾಗೂ ಬಿಗಿ ಭದ್ರತೆ ನಡುವೆಯೂ ಕೋಣ ಬಲಿ ನೀಡಲಾಗಿದೆ. ದೇವಸ್ಥಾನ ಆವರಣದಿಂದ ದೂರ ಭಕ್ತರು ಬಲಿ ನೀಡಿದ್ದಾರೆ. ಭಕ್ತರು ಜಾತ್ರೆಯಲ್ಲಿ ಕೋಣ ಬಲಿ ನೀಡಿದರೆ ಮಾತ್ರ ತಾಯಿ ಸಂತುಷ್ಟಿಯಾಗುತ್ತಾಳೆ ಎನ್ನುವ ನಂಬಿಕೆಯೊಂದಿಗೆ ದೇವಸ್ಥಾನ ಪ್ರದೇಶ ಬಿಟ್ಟು ಇನ್ನೊಂದು ಪ್ರದೇಶದಲ್ಲಿ ಊಧೋ ಊಧೋ ಎಂದು ಭಕ್ತರು ಕೋಣವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಬಳಿಕ ಕೋಣದ ರಕ್ತದಲ್ಲಿ ಚರಗ ಹಾಕಿದ್ದಾರೆ. ದುಗ್ಗಮ್ಮ ದೇವಿಗೆ ಬಿಟ್ಟಂತಹ ಕೋಣದಿಂದ ಸಿರಂಜ್ ಮೂಲಕ ವೈದ್ಯರು ರಕ್ತವನ್ನು ತೆಗೆದು ದುಗ್ಗಮ್ಮ ದೇವಿಗೆ ಅರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ಕೋಣವನ್ನು ಬಲಿ ನೀಡುತ್ತಾರೆ ಎನ್ನುವ ಮಾಹಿತಿಯಿಂದ ಇಡೀ ರಾತ್ರಿ ದೇವಸ್ಥಾನ ಆವರಣದಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಜಾಗರಣೆ ಮಾಡಿದರು.
ಆದರೂ ಕೂಡ ದೇವಸ್ಥಾನದಿಂದ ದೂರದಲ್ಲಿ ದೇವರ ಕೋಣವನ್ನು ಬಲಿಕೊಟ್ಟು ದೇವತೆಗೆ ಭಕ್ತಿಯಿಂದ ಕೋಣದ ತಲೆ ಮೇಲೆ ದೀಪವಿಟ್ಟು ನೈವೇದ್ಯ ಅರ್ಪಿಸಿದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications