ದಾವಣಗೆರೆ ದುಗ್ಗಮ್ಮ ಜಾತ್ರೆಯಲ್ಲಿ ಕೊನೆಗೂ ಕೋಣ ಬಲಿ!
ದಾವಣಗೆರೆ, ಮಾರ್ಚ್ 04: ದಾವಣಗೆರೆಯ ನಗರ ದೇವತೆ ದುಗ್ಗಮ್ಮನ ಜಾತ್ರೆ ಎರಡು ವರ್ಷಗಳಿಗೊಮ್ಮೆ ನಡೆಯಲಿದ್ದು, ಪ್ರಾಣಿ ಬಲಿ ಸಂಪೂರ್ಣ ನಿಷೇಧ ಮಾಡಲಾಗಿತ್ತು. ಅಲ್ಲದೇ ದೇವಸ್ಥಾನ ಸುತ್ತ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಾಣಿ ಬಲಿ ನಿಷೇಧದ ನಡುವೆಯೂ ದಾವಣಗೆರೆ ನಗರ ದುಗ್ಗಮ್ಮನಿಗೆ ಕೋಣ ಬಲಿ ನೀಡಲಾಗಿದೆ.
ನಗರದ ದುಗ್ಗಮ್ಮ ದೇವಸ್ಥಾನ ಸಮೀಪದಲ್ಲೇ ಇರುವ ಸೀಮೆಎಣ್ಣೆ ಬಂಕ್ ಬಳಿಯಲ್ಲಿ ಕೋಣವನ್ನು ಬಲಿ ನೀಡಲಾಗಿದೆ ಎನ್ನಲಾಗಿದೆ. ಕೋಣ ಬಲಿ ನೀಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿತ್ತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ರಾತ್ರಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಅದ್ಯಾಗೂ ಬಿಗಿ ಭದ್ರತೆ ನಡುವೆಯೂ ಕೋಣ ಬಲಿ ನೀಡಲಾಗಿದೆ. ದೇವಸ್ಥಾನ ಆವರಣದಿಂದ ದೂರ ಭಕ್ತರು ಬಲಿ ನೀಡಿದ್ದಾರೆ. ಭಕ್ತರು ಜಾತ್ರೆಯಲ್ಲಿ ಕೋಣ ಬಲಿ ನೀಡಿದರೆ ಮಾತ್ರ ತಾಯಿ ಸಂತುಷ್ಟಿಯಾಗುತ್ತಾಳೆ ಎನ್ನುವ ನಂಬಿಕೆಯೊಂದಿಗೆ ದೇವಸ್ಥಾನ ಪ್ರದೇಶ ಬಿಟ್ಟು ಇನ್ನೊಂದು ಪ್ರದೇಶದಲ್ಲಿ ಊಧೋ ಊಧೋ ಎಂದು ಭಕ್ತರು ಕೋಣವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಬಳಿಕ ಕೋಣದ ರಕ್ತದಲ್ಲಿ ಚರಗ ಹಾಕಿದ್ದಾರೆ. ದುಗ್ಗಮ್ಮ ದೇವಿಗೆ ಬಿಟ್ಟಂತಹ ಕೋಣದಿಂದ ಸಿರಂಜ್ ಮೂಲಕ ವೈದ್ಯರು ರಕ್ತವನ್ನು ತೆಗೆದು ದುಗ್ಗಮ್ಮ ದೇವಿಗೆ ಅರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ಕೋಣವನ್ನು ಬಲಿ ನೀಡುತ್ತಾರೆ ಎನ್ನುವ ಮಾಹಿತಿಯಿಂದ ಇಡೀ ರಾತ್ರಿ ದೇವಸ್ಥಾನ ಆವರಣದಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಜಾಗರಣೆ ಮಾಡಿದರು.
ಆದರೂ ಕೂಡ ದೇವಸ್ಥಾನದಿಂದ ದೂರದಲ್ಲಿ ದೇವರ ಕೋಣವನ್ನು ಬಲಿಕೊಟ್ಟು ದೇವತೆಗೆ ಭಕ್ತಿಯಿಂದ ಕೋಣದ ತಲೆ ಮೇಲೆ ದೀಪವಿಟ್ಟು ನೈವೇದ್ಯ ಅರ್ಪಿಸಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications