ಸಾಹಿತಿಗಳಿಗೆ ಬೆದರಿಕೆ ಪತ್ರ: ಆರೋಪಿ ಸೆರೆ, ವಿಚಾರಣೆ ವೇಳೆ ಬಾಯ್ಬಿಟ್ಟ ಸತ್ಯವೇನು...?
ದಾವಣಗೆರೆ, ಸೆಪ್ಟೆಂಬರ್ 30: ಎಡಪಂಥೀಯ ಐವರು ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದ ಆರೋಪಿಯನ್ನು ದಾವಣಗೆರೆಯಲ್ಲಿ ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದಾರೆ. ಒಂದೂವರೆ ವರ್ಷಗಳ ಬಳಿಕ ಆರೋಪಿ ಸಿಕ್ಕಿಬಿದ್ದಿದ್ದಾನೆ.
ದಾವಣಗೆರೆಯ ಜಾಲಿನಗರದ ಇಡಬ್ಲ್ಯೂಎಸ್ ಕಾಲೋನಿಯ ನಿವಾಸಿ ಶಿವಾಜಿ ರಾವ್ (30) ಬಂಧಿತ ಆರೋಪಿ. ಈತ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಎಡಪಂಥೀಯ ಸಾಹಿತಿಗಳಾದ ಬಿ. ಎಲ್.ವೇಣು, ಕುಂ.ವೀರಭದ್ರಪ್ಪ, ಬಿ.ಟಿ ಲಲಿತಾ ನಾಯಕ್, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ ಅವರಿಗೆ ಬೆದರಿಕೆ ಪತ್ರ ಬರೆದಿದ್ದ. ಇದು ಪೊಲೀಸರಿಗೂ ಸವಾಲಿನ ಪ್ರಕರಣವಾಗಿತ್ತು.
ಬೆದರಿಕೆ ಪತ್ರ ಬರೆದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಈ ಪ್ರಕರಣದ ಜಾಡು ಹಿಡಿದ ಸಿಸಿಬಿ ಪೊಲೀಸರು ಅಂತೂ ಆರೋಪಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಹತ್ತು ದಿನಗಳ ಕಾಲ ವಿಚಾರಣೆಗೆ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ.

ಹಿಂದೂ ವಿರೋಧಿ ಹೇಳಿಕೆ ನೀಡುತ್ತಿದ್ದ ಸಾಹಿತಿಗಳನ್ನು ಟಾರ್ಗೆಟ್ ಮಾಡಿದ್ದ ಶಿವಾಜಿ ರಾವ್, ಒಟ್ಟು ಏಳು ಪತ್ರಗಳನ್ನು ಬರೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಹಿಂದೂ ಧರ್ಮದ ಬಗ್ಗೆ ಅವಹೇಳನ, ವಿರೋಧಿ ಹೇಳಿಕೆ ನೀಡುತ್ತಿದ್ದದ್ದು ಮನಸ್ಸಿಗೆ ಬೇಸರವಾಗಿತ್ತು. ಆಕ್ರೋಶಕ್ಕೂ ಕಾರಣವಾಗಿತ್ತು. ಈ ಕಾರಣಕ್ಕೆ ಬೆದರಿಕೆ ಪತ್ರ ಬರೆದಿದ್ದಾಗಿ ಆರೋಪಿ ಶಿವಾಜಿ ರಾವ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಎಡಪಂಥೀಯ ವಿಚಾರಧಾರೆ ಹೊಂದಿದ್ದ ಸಾಹಿತಿಗಳು ಭಾಷಣ ಮಾಡುವಾಗಲೆಲ್ಲಾ ಹಿಂದುತ್ವದ ವಿರುದ್ಧವೇ ಮಾತನಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದೆ. ಬೇರೆ ಕೆಟ್ಟ ಉದ್ದೇಶ ಇರಲಿಲ್ಲ. ಬೆದರಿಕೆ ಪತ್ರ ಬಂದ ಬಳಿಕ ಹೇಳಿಕೆ ನಿಲ್ಲಿಸಬಹುದು ಎಂಬ ಕಾರಣಕ್ಕೆ ಪತ್ರ ಬರೆದಿದ್ದಾಗಿ ಹೇಳಿದ್ದಾನೆ.
ಶಿವಾಜಿ ರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಸದ್ಯಕ್ಕೆ ಐವರು ಸಾಹಿತಿಗಳಿಗೆ ಏಳು ಬೆದರಿಕೆ ಪತ್ರ ಬರೆದಿದ್ದು ಗೊತ್ತಾಗಿದೆ. ಹೆಚ್ಚಿನ ವಿಚಾರಣೆಗೆ ಹತ್ತು ದಿನಗಳ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೇರೆ ಯಾರಿಗಾದರೂ ಈತ ಪತ್ರ ಬರೆದಿದ್ದನಾ? ಈತನ ವಿರುದ್ಧ ಬೇರೆ ಯಾವೆಲ್ಲಾ ಪ್ರಕರಣಗಳು ದಾಖಲಾಗಿವೆ ಎನ್ನುವುದನ್ನು ಸೇರಿದಂತೆ ಎಲ್ಲಾ ರೀತಿಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ಬಳಿಕ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಬಿ ಪೊಲೀಸರು ಶುಕ್ರವಾರದಂದು ದಾವಣಗೆರೆಯಲ್ಲಿ ಬಂಧಿಸಿ ಕರೆದೊಯ್ದಿದಿದ್ದಾರೆ ಎಂದು ತಿಳಿದು ಬಂದಿದೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications