ಯುವಕರೇ ಮದುವೆಯಾಗುವ ಮುನ್ನ ಎಚ್ಚರ.! ಯಾಕೆ ಗೊತ್ತಾ?- ಈ ಶಾಕಿಂಗ್ ಸ್ಟೋರಿ ನೋಡಿ.!
ದಾವಣಗೆರೆ, ಡಿಸೆಂಬರ್, 28: ಈಗ ಮದುವೆಯಾಗಲು ಹುಡುಗಿಯರು ಸಿಗೋಲ್ಲ ಎಂಬ ಕೊರಗು ಇದೆ. ಎಷ್ಟೋ ಮಂದಿ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಮಾತ್ರವಲ್ಲ, ವಧು-ವರಾನ್ವೇಷಣಾ ಕೇಂದ್ರಕ್ಕೆ ಅಲೆಯುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೆಣ್ಣು ಸಿಗುತ್ತಿಲ್ಲವಲ್ಲಾ ಎಂಬ ಕೊರಗು ಇದ್ದೇ ಇದೆ. ಆದರೆ ಇಲ್ಲೊಬ್ಬಳು ಕಿಲಾಡಿ ಲೇಡಿ ನಾಲ್ಕು ಮದುವೆಯಾಗಿ ವಂಚಿಸಿದ ಆರೋಪ ಕೇಳಿ ಬಂದಿದೆ.
ಅಂದ ಹಾಗೆ ಮೋಸ ಮಾಡಿರುವ ಆರೋಪ ಎದುರಿಸುತ್ತಿರುವಾಕೆಯ ಹೆಸರು ಸ್ನೇಹಾ ಅಲಿಯಾಸ್ ನಿರ್ಮಲಾ. ದಾವಣಗೆರೆ ಮೂಲದ ವ್ಯಕ್ತಿಯೊಂದಿಗೆ ವಿವಾಹವಾಗಿದ್ದ ಆಕೆ ಕಾಣೆಯಾಗಿದ್ದಳು. ಪೊಲೀಸರಿಗೆ ದೂರು ಕೊಟ್ಟ ಬಳಿಕ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕರೆಸಿದಾಗ ವ್ಯಕ್ತಿಗೆ ಶಾಕ್ ಕಾದಿತ್ತು. ಸ್ನೇಹಾ ಮಂಡ್ಯ ಜಿಲ್ಲೆಯ ನರಹಳ್ಳಿ ನಿವಾಸಿ. ಪ್ರಶಾಂತ್ನನ್ನು ಮದುವೆಯಾಗುವ ಮುನ್ನ ಆಕೆ ಇನ್ನಿಬ್ಬರನ್ನು ಮದುವೆಯಾಗಿದ್ದಳು ಎನ್ನಲಾಗಿದೆ.

ನಗರದ ಕೆಟಿಜೆ ನಗರ ಪೊಲೀಸ್ ಠಾಣೆಗೆ ಆಗಮಿಸಿ ಪ್ರಶಾಂತ್ ಎಂಬುವವರು ದೂರು ದಾಖಲಿಸಿದ್ದರು. ನನ್ನ ಪತ್ನಿ ಕಾಣುತ್ತಿಲ್ಲ, ಹುಡುಕಿಕೊಡಿ ಎಂದು ದೂರು ಕೊಟ್ಟಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ನಿರ್ಮಲಾ ಅಲಿಯಾಸ್ ಸ್ನೇಹಾ ಅವರನ್ನು ಠಾಣೆಗೆ ಕರೆಸಿದ್ದಾರೆ. ಠಾಣೆಯಲ್ಲಿ ಈ ಬಗ್ಗೆ ವಿಚಾರಿಸಿದಾಗ ಸ್ನೇಹಾ ಅಲಿಯಾಸ್ ನಿರ್ಮಲಾ ತನಗನಿಸಿದ್ದನ್ನು ಹೇಳಿದ್ದಾಳೆ. ಆ ಬಳಿಕ ಪ್ರಶಾಂತ್ ಮಾಧ್ಯಮದವರ ಜೊತೆ ಮಾತನಾಡುತ್ತಾ ಆಕೆಗೆ ನಾಲ್ಕು ಮದುವೆಯಾಗಿವೆ ಎಂಬ ಆರೋಪ ಮಾಡಿದ್ದಾನೆ.
ಸಾಮಾಜಿಕ ಜಾಲತಾಣ ಹಾಗೂ ಇಸ್ಸ್ಟಾಗ್ರಾಂನ ಗೀಳು ಹಚ್ಚಿಕೊಂಡಿದ್ದ ಈಕೆಯು ಬೇರೆಯೊಬ್ಬನ ಜೊತೆ ಸಪ್ತಪದಿ ತುಳಿದಿರುವುದು ಈತನ ಗಮನಕ್ಕೆ ಬಂದಿದೆ. ಈಕೆಯು ಮದುವೆಯ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು, ಆ ಬಳಿಕ ರಘು ಎಂಬಾತನ ಜೊತೆ ಮದುವೆಯಾಗಿರುವುದು ಪ್ರಶಾಂತ್ ಗಮನಕ್ಕೆ ಬಂದಿದೆ.
ಮೂರು ತಿಂಗಳ ಹಿಂದೆಯಷ್ಟೇ ನಾನು ಗರ್ಭವತಿಯಾಗಿದ್ದು, ತವರು ಮನೆಗೆ ಹೋಗುತ್ತೇನೆ ಎಂದು ಹೇಳಿ ಹೋಗಿದ್ದ ಸ್ನೇಹಾ ಅಲಿಯಾಸ್ ನಿರ್ಮಲಾ ಕಣ್ಮರೆಯಾಗಿದ್ದಳು. ಆಕೆಯ ಪೋಷಕರಿಗೆ ಕೇಳಿದರೂ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು.
ಪ್ರಶಾಂತ್ ಮದುವೆಯಾದ ಬಳಿಕ ಮತ್ತೊಬ್ಬನ ಜೊತೆ ಮದುವೆಯಾಗಿರುವುದು ಪತ್ತೆಯಾಗಿದೆ. ಮದುವೆಯಾಗಿ ನಾವು ಒಂದೂವರೆ ವರ್ಷ ಆಗಿತ್ತು. ಗರ್ಭಪಾತ ಮಾಡಿಸಿ ಬೇರೆ ವ್ಯಕ್ತಿಯ ಜೊತೆ ಮದುವೆಯಾಗಿರುವುದು ಗೊತ್ತಾಗಿದ್ದು, ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರಶಾಂತ್ ದೂರಿನಲ್ಲಿ ಮನವಿ ಮಾಡಿದ್ದ.
ಪ್ರಶಾಂತ್ಗೆ ಪರಿಚಯವಾಗಿದ್ದು ಹೇಗೆ?
ರೈಲಿನಲ್ಲಿ ಹೋಗುವಾಗ ಸ್ವೇಹಾ ಅಲಿಯಾಸ್ ನಿರ್ಮಲಾಳು ಪ್ರಶಾಂತ್ಗೆ ಪರಿಚಯವಾಗಿದ್ದಾಳೆ. ಆ ಬಳಿಕ ಫೋನ್ ನಂಬರ್ ಬದಲಾಯಿಸಿಕೊಂಡಿದ್ದಾರೆ. ಪರಸ್ಪರ ಚಾಟಿಂಗ್, ಮೆಸೇಜ್, ಕರೆ ಮಾಡುತ್ತಾ ಕಾಲ ಕಳೆದಿದ್ದಾರೆ. ಆ ಬಳಿಕ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಆ ನಂತರ ಒಂದೂವರೆ ವರ್ಷ ಸಂಸಾರವನ್ನೂ ಮಾಡಿದ್ದಾರೆ. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿದೆ ಎಂದುಕೊಂಡಾಗ ಸ್ನೇಹಾ ಅಲಿಯಾಸ್ ನಿರ್ಮಲಾ ಕೈ ಕೊಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ರಘು ಎಂಬಾತನ ಜೊತೆ ವಿವಾಹ ಆಗಿರುವ ಕುರಿತಂತೆ ಫೋಟೋಗಳು ಸಿಕ್ಕಿವೆ. ನನಗಿಂತ ಮೊದಲು ಇಬ್ಬರು ಪುರುಷರನ್ನು ಮದುವೆಯಾದ ಕಾರಣ ಆಕೆಗೆ ನಾನು ಮೂರನೇ ಪತಿಯಾಗಿದ್ದೆ. ಈಗ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ನಾನು ಅವಳನ್ನು ಮದುವೆಯಾಗುವಾಗ ಈ ವಿಚಾರ ನನಗೆ ಗೊತ್ತಿರಲಿಲ್ಲ. ಕುಟುಂಬದವರೂ ಹೇಳಿಲ್ಲ. ಈ ಮೊದಲೇ ಮದುವೆಯಾಗಿರುವುದಾಗಿ ಆಕೆಯ ಸಂಬಂಧಿಕರಿಂದ ನನಗೆ ತಿಳಿದು ಬಂದಿತ್ತು ಎಂದು ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಮತ್ತೆ ಮೋಸ ಹೋಗಬೇಡಿ: ಇನ್ ಸ್ಟಾಗ್ರಾಂನ ತೀರಾ ಹುಚ್ಚು ಹಚ್ಚಿಕೊಂಡಿರುವ ಈಕೆ ಅದರಲ್ಲಿಯೇ ಸಕ್ರಿಯಳಾಗಿರುತ್ತಾಳೆ. ಅಲ್ಲಿಯೇ ಪರಿಚಯ ಮಾಡಿಕೊಂಡು ಮೊಬೈಲ್ ನಂಬರ್ ತೆಗೆದುಕೊಂಡು ಆಮೇಲೆ ಮದುವೆಯಾಗಿ ಮತ್ತೆ ಹೋಗುತ್ತಾಳೆ. ಈಗ ಮದುವೆಯಾಗದಿರುವ ಯುವಕರು ಹುಡುಗಿ ಸಿಕ್ಕರೆ ಸಾಕು ಎಂಬ ಸ್ಥಿತಿಯಲ್ಲಿದ್ದು, ಇದನ್ನೇ ಇಂಥವರು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ, ಮೋಸ ಹೋಗುತ್ತೀರಾ ಹುಷಾರಾಗಿರಿ ಯುವಕರೇ, ಪುರುಷರೇ ಎನ್ನುತ್ತಿದ್ದಾರೆ ಪ್ರಶಾಂತ್.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications